AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs MI: ಕನ್ನಡಿಗ ಮನೀಶ್, ಪೊವೆಲ್ ಆಟಕ್ಕೆ ಕೆಕೆಆರ್​ಗೆ ಒಲಿದ ಜಯ

KKR vs MI IPL 2026: ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2026 ರ 65 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮಳೆ ಪೀಡಿತ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ (45 ರನ್) ಅವರ ಸಮಯೋಜಿತ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ಗೆಲುವು ಸಾಧಿಸಿತು. ಮುಂಬೈ ತನ್ನ 9ನೇ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದು ಕೆಕೆಆರ್‌ಗೆ ನಿರ್ಣಾಯಕ ಗೆಲುವಾಗಿದೆ.

KKR vs MI: ಕನ್ನಡಿಗ ಮನೀಶ್, ಪೊವೆಲ್ ಆಟಕ್ಕೆ ಕೆಕೆಆರ್​ಗೆ ಒಲಿದ ಜಯ
Kkr
ಪೃಥ್ವಿಶಂಕರ
|

Updated on:May 21, 2026 | 12:20 AM

Share

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ (KKR vs MI) ತಂಡಗಳು ಐಪಿಎಲ್‌ 2026 (IPL 2026) ರ 65 ನೇ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಮಣಿಸಿದ ಕೆಕೆಆರ್ ತನ್ನ ಪ್ಲೇಆಫ್‌ ಕನಸನ್ನು ಹಾಗೆಯೇ ಜೀವಂತವಾಗಿರಿಸಿಕೊಂಡಿದೆ. ಇತ್ತ ಮುಂಬೈ ತನ್ನ 9ನೇ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಮುಂಬೈ ತಂಡ ಕೇವಲ 148 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್, ಕನ್ನಡಿಗ ಮನೀಶ್ ಪಾಂಡೆ ಅವರ ಸಮಯೋಜಿತ ಬ್ಯಾಟಿಂಗ್​ನಿಂದಾಗಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.

ಮುಂಬೈ ಕಳಪೆ ಬ್ಯಾಟಿಂಗ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ರಯಾನ್ ರಿಕಲ್ಟನ್ ಕೇವಲ 6 ರನ್​ಗಳಿಗೆ ಔಟಾದರೆ, ನಮನ್ ಧೀರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಇವರಿಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿಯ ಮೊತ್ತ ದಾಟುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಅವರಲ್ಲಿ ಯಾರೂ ಮುಂಬೈ ಪರ ದೊಡ್ಡ ಇನ್ನಿಂಗ್ಸ್ ಮಾಡಲು ಸಾಧ್ಯವಾಗಲಿಲ್ಲ. ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಕಾರ್ಬಿನ್ ಬಾಷ್ ಸುಮಾರು 200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ ಅತ್ಯಧಿಕ 32 ರನ್​ಗಳ ಇನ್ನಿಂಗ್ಸ್ ಆಡಿದರು.

ನಾಯಕ ಹಾರ್ದಿಕ್ ಪಾಂಡ್ಯ 26 ರನ್​ಗಳ ಇನ್ನಿಂಗ್ಸ್ ಆಡಿದರೆ, ತಿಲಕ್ ವರ್ಮಾ 20 ರನ್ ಬಾರಿಸಿದರು. ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಇನ್ನಿಂಗ್ಸ್ ತಲಾ 15 ರನ್​ಗಳಿಗೆ ಅಂತ್ಯವಾಯಿತು. ಇತ್ತ ಕೆಕೆಆರ್ ಪರ ಬೌಲಿಂಗ್‌ನಲ್ಲಿ ಮಿಂಚಿದ ಸೌರಭ್ ದುಬೆ, ಕ್ಯಾಮರೂನ್ ಗ್ರೀನ್ ಹಾಗೂ ಕಾರ್ತಿಕ್ ತ್ಯಾಗಿ ತಲಾ 2 ವಿಕೆಟ್ ಪಡೆದರು.

KKR vs MI Live Updates, IPL 2026: ಕೆಕೆಆರ್ 5ನೇ ವಿಕೆಟ್ ಪತನ

ಮನೀಶ್- ಪೊವೆಲ್ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಕೆಕೆಆರ್​ಗೂ ಉತ್ತಮ ಆರಂಭ ಸಿಗಲಿಲ್ಲ. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಫಿನ್ ಅಲೆನ್ 8 ರನ್​ಗೆ ಔಟಾದರು. ನಾಯಕ ರಹಾನೆ ಕೂಡ 21 ರನ್​ಗಳಿಗೆ ಸುಸ್ತಾದರು. ಆ ಬಳಿಕ ಬಂದ ಗ್ರೀನ್ ಇನ್ನಿಂಗ್ಸ್ ಕೇವಲ 4 ರನ್​ಗಳಿಗೆ ಅಂತ್ಯವಾಯಿತು. ಆ ಬಳಿಕ ಜೊತೆಯಾದ ಕನ್ನಡಿಗ ಮನೀಶ್ ಹಾಗೂ ಪೊವೆಲ್ ಜೊತೆಯಾಟ ನಡೆಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು.

ಮನೀಶ್ ಪಾಂಡೆ 33 ಎಸೆತಗಳಲ್ಲಿ 6 ಬೌಂಡರಿ ಸಹಿತ 45 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿ ಔಟಾದರೆ, ಪೊವೆಲ್ ಇನ್ನಿಂಗ್ಸ್ ಕೂಡ 40 ರನ್​ಗಳಿಗೆ ಅಂತ್ಯವಾಯಿತು. ಕೊನೆಯಲ್ಲಿ ರಿಂಕು ಸಿಂಗ್ ಗೆಲುವಿನ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಅಮೋಘ ಜಯ ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:17 am, Thu, 21 May 26

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!