AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್​ಗೆ ಗೇಟ್ ಪಾಸ್​? ಟಾಮ್ ಮೂಡಿ ಬಿಚ್ಚಿಟ್ಟ ಸತ್ಯ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ನೀರಸ ಪ್ರದರ್ಶನ ನೀಡಿದೆ. ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಈ ನಾಲ್ಕು ಗೆಲುವು ಹಾಗೂ ಎಂಟು ಸೋಲುಗಳೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.

ರಿಷಭ್ ಪಂತ್​ಗೆ ಗೇಟ್ ಪಾಸ್​? ಟಾಮ್ ಮೂಡಿ ಬಿಚ್ಚಿಟ್ಟ ಸತ್ಯ!
Rishabh Pant
ಝಾಹಿರ್ ಯೂಸುಫ್
|

Updated on: May 24, 2026 | 11:57 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ (LSG) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸತೊಡಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಹೀನಾಯ ಸೋಲಿನ ಬಳಿಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಗ್ಲೋಬಲ್ ಕ್ರಿಕೆಟ್ ಡೈರೆಕ್ಟರ್ ಟಾಮ್ ಮೂಡಿ ನೀಡಿರುವ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

“ನಾಯಕತ್ವದ ಬಗ್ಗೆ ಗಂಭೀರ ಚಿಂತನೆ ಅಗತ್ಯ”

ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಾಮ್ ಮೂಡಿ, “ಲಕ್ನೋ ಸೂಪರ್ ಜೈಂಟ್ಸ್​ ತಂಡದ ಭವಿಷ್ಯದ ನಾಯಕತ್ವದ ಬಗ್ಗೆ ನಾವು ಅತ್ಯಂತ ಗಂಭೀರವಾಗಿ ಯೋಚಿಸಬೇಕಾದ ಸಮಯ ಬಂದಿದೆ” ಎಂದು ನೇರವಾಗಿ ಹೇಳಿದ್ದಾರೆ. ಈ ಮೂಲಕ ಕೋಟಿ ಕೋಟಿ ಮುಖಬೆಲೆಗೆ ತಂಡ ಸೇರಿದ್ದ ರಿಷಭ್ ಪಂತ್ ಅವರ ನಾಯಕತ್ವಕ್ಕೆ ಕತ್ತರಿ ಬೀಳುವುದು ಬಹುತೇಕ ಖಚಿತ ಎಂಬ ಮುನ್ಸೂಚನೆ ಸಿಕ್ಕಿದೆ.

ಬದಲಾವಣೆಗೆ ಪ್ರಮುಖ ಕಾರಣಗಳು:

  • ಸತತ ಎರಡು ಸೀಸನ್‌ಗಳ ವೈಫಲ್ಯ: 2025ರ ಐಪಿಎಲ್‌ನಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡ, ಈ ಬಾರಿ (2026) ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳಲ್ಲೊಂದಾಗಿ ಹೊರಬಿದ್ದಿದೆ.
  •  ನಾಯಕನಾಗಿ ಪಂತ್ ವೈಫಲ್ಯ: ರಿಷಭ್ ಪಂತ್ ನಾಯಕತ್ವದಲ್ಲಿ ತಂಡವು ಕಳೆದ ಎರಡು ಸೀಸನ್‌ಗಳಲ್ಲಿ ಕೇವಲ 10 ಪಂದ್ಯಗಳನ್ನು ಗೆದ್ದು, ಬರೋಬ್ಬರಿ 18 ಪಂದ್ಯಗಳಲ್ಲಿ ಸೋಲನುಭವಿಸಿದೆ.
  •  ನಾಯಕನ ಮೇಲಿನ ಒತ್ತಡ: ₹27 ಕೋಟಿ ನೀಡಿ ರಿಷಭ್ ಪಂತ್ ಅವರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಾಗಿತ್ತು. ಆದರೆ ನಾಯಕತ್ವದ ಭಾರದಿಂದಾಗಿ ಅವರ ಬ್ಯಾಟಿಂಗ್ ಪ್ರದರ್ಶನದ ಮೇಲೆಯೂ ತೀವ್ರ ಪರಿಣಾಮ ಬೀರಿದೆ. ಅವರು ಎರಡು ಸೀಸನ್‌ಗಳಿಂದ ಕೇವಲ 135.74 ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ.
  •  ತಂಡದ ಆಂತರಿಕ ಭಿನ್ನಾಭಿಪ್ರಾಯ: ಸೀಸನ್ ಮಧ್ಯದಲ್ಲಿ “ತಂಡದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅತಿ ಹೆಚ್ಚು ನಾಯಕರುಗಳು ಇದ್ದಾರೆ” ಎಂದು ಪಂತ್ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದು ಮ್ಯಾನೇಜ್‌ಮೆಂಟ್ ಮತ್ತು ನಾಯಕನ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ಬಹಿರಂಗಪಡಿಸಿತ್ತು.

ಭವಿಷ್ಯದ ಯೋಜನೆ ಏನು?

ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿಯು ಮುಂದಿನ ಸೀಸನ್‌ಗೆ ಸಂಪೂರ್ಣ ಹೊಸ ನಾಯಕತ್ವ ಮತ್ತು ತಂತ್ರಗಾರಿಕೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗುತ್ತಿದೆ. “ನಾವು ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಆದರೆ ತಂಡದ ಹಿತದೃಷ್ಟಿಯಿಂದ ಕಠಿಣ ಮತ್ತು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಿದ್ದೇವೆ” ಎಂದು ಮೂಡಿ ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಐಪಿಎಲ್ 2028 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಇತ್ತ ನಾಯಕತ್ವ ಕಳೆದುಕೊಂಡ ಬಳಿಕ ರಿಷಭ್ ಪಂತ್  ಕೇವಲ ವಿಕೆಟ್ ಕೀಪರ್ ಬ್ಯಾಟರ್ ಆಗಿ ಮುಂದುವರಿಯುತ್ತಾರಾ ಅಥವಾ ತಂಡದಿಂದಲೇ ಹೊರ ಬರಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ!
ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ!
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಮಳೆ ಅಬ್ಬರಕ್ಕೆ ಮಂತ್ರಾಲಯದಲ್ಲಿ ಪರದಾಡಿದ ಭಕ್ತರು: ಮಠದಿಂದ ಶೀಘ್ರ ಸ್ಪಂದನೆ
ಮಳೆ ಅಬ್ಬರಕ್ಕೆ ಮಂತ್ರಾಲಯದಲ್ಲಿ ಪರದಾಡಿದ ಭಕ್ತರು: ಮಠದಿಂದ ಶೀಘ್ರ ಸ್ಪಂದನೆ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?