AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ

IPL 2026: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2026 ರ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇತಿಹಾಸ ಸೃಷ್ಟಿಸಿದೆ. ಡೆಲ್ಲಿಯ 265 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್, ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕೆಎಲ್ ರಾಹುಲ್, ನಿತೀಶ್ ರಾಣಾ ಭರ್ಜರಿ ಬ್ಯಾಟಿಂಗ್ ನಡೆಸಿದರು. ಕರುಣ್ ನಾಯರ್ ಕೈಚೆಲ್ಲಿದ ಕ್ಯಾಚ್‌ಗಳು ಪಂಜಾಬ್ ಗೆಲುವಿಗೆ ನಿರ್ಣಾಯಕವಾದವು.

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ
Delhi Capitals
ಪೃಥ್ವಿಶಂಕರ
|

Updated on:Apr 25, 2026 | 8:22 PM

Share

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ (DC vs PBKS) ನಡುವೆ ನಡೆದ ಐಪಿಎಲ್ 2026 (IPL 2026) ರ 35 ನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಇದುವರೆಗೆ ಯಾವ ತಂಡಕ್ಕೂ ಸಾಧ್ಯವಾಗದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಉಭಯ ತಂಡಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯೇ ಹರಿದ ಈ ಪಂದ್ಯವನ್ನು ಅಂತಿಮವಾಗಿ ಗೆದ್ದುಕೊಳ್ಳುವಲ್ಲಿ ಪಂಜಾಬ್ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 265 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಇನ್ನು 7 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.

ಡೆಲ್ಲಿ ಪಾಲಿಗೆ ವಿಲನ್ ಆದ ಕರುಣ್

ಈ ಮೂಲಕ ಪಂಜಾಬ್ ಐಪಿಎಲ್ ಇತಿಹಾಸದಲ್ಲಿ ಇಷ್ಟು ದೊಡ್ಡ ಮೊತ್ತವನ್ನು ಬೆನ್ನಟ್ಟಿದ ತಂಡವೆಂಬ ದಾಖಲೆ ಬರೆಯಿತು. ಈ ದಾಖಲೆಯ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್‌ಪ್ಲೇನಲ್ಲಿಯೇ ಅರ್ಧದಷ್ಟು ಪಂದ್ಯವನ್ನು ಗೆದ್ದುಕೊಂಡಿತು. ಉಳಿದಂತೆ ಕರುಣ್ ನಾಯರ್ ಕೈಚೆಲ್ಲಿದ ಎರಡು ಸುಲಭ ಕ್ಯಾಚ್​ಗಳಿಂದ ಪಂಜಾಬ್ ಕಿಂಗ್ಸ್‌ ಗೆಲುವು ದಾಖಲಿಸಿತು. ವಾಸ್ತವವಾಗಿ ನಿರ್ಣಾಯಕ ಹಂತದಲ್ಲಿ ಕರುಣ್ ನಾಯರ್, ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರ ಎರಡು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದರು. ಈ ಜೀವದಾನಗಳ ಲಾಭ ಪಡೆದ ಅಯ್ಯರ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ರಾಹುಲ್ ದಾಖಲೆಯ ಶತಕ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 28 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಪಾಥುಮ್ ನಿಸ್ಸಂಕ 11 ರನ್‌ಗಳಿಗೆ ಔಟಾದರು. ಆ ನಂತರ, ಎರಡನೇ ವಿಕೆಟ್‌ಗೆ ಪಂಜಾಬ್ ಬರೋಬ್ಬರಿ 220 ರನ್‌ಗಳವರೆಗೆ ಕಾಯಬೇಕಾಯಿತು. ಏಕೆಂದರೆ ಕೆಎಲ್ ರಾಹುಲ್ ಮತ್ತು ನಿತೀಶ್ ರಾಣಾ ಪಂಜಾಬ್ ಕಿಂಗ್ಸ್ ಬೌಲರ್‌ಗಳ ವಿರುದ್ಧ ಅಬ್ಬರಿಸಿ ದಾಖಲೆಯ ಜೊತೆಯಾಟ ನಡೆಸಿದರು. ನಿತೀಶ್ ರಾಣಾ 44 ಎಸೆತಗಳಲ್ಲಿ 11 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 91 ರನ್ ಗಳಿಸಿ ಔಟಾದರೆ, ಕೆಎಲ್ ರಾಹುಲ್ 67 ಎಸೆತಗಳಲ್ಲಿ 16 ಬೌಂಡರಿ ಮತ್ತು 9 ಸಿಕ್ಸರ್‌ಗಳೊಂದಿಗೆ ಅಜೇಯ 152 ರನ್ ಗಳಿಸಿದರು. ಇವರಿಬ್ಬರ ಆಟದಿಂದಾಗಿ ಡೆಲ್ಲಿ ದಾಖಲೆಯ ಮೊತ್ತ ಪೇರಿಸಿತು.

ಪಂಜಾಬ್​ಗೆ ದಾಖಲೆಯ ಜಯ

265 ರನ್‌ಗಳನ್ನು ಬೆನ್ನಟ್ಟಿದ ಪಂಜಾಬ್​ಗೆ ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಸ್ಫೋಟಕ ಆರಂಭ ಒದಗಿಸಿದರು. ಪವರ್‌ಪ್ಲೇನಲ್ಲಿಯೇ ಈ ಜೋಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪಂದ್ಯದಿಂದ ಹೊರಹಾಕಿದರು. ಮೊದಲ 6 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ ಈ ಜೋಡಿ 116 ರನ್ ಕಲೆಹಾಕಿತು. ಐಪಿಎಲ್ ಟೂರ್ನಿಯಲ್ಲಿ ಪವರ್‌ಪ್ಲೇನಲ್ಲಿ ಇದು ಎರಡನೇ ಅತ್ಯಧಿಕ ಸ್ಕೋರ್ ಆಗಿತ್ತು. ತಂಡ 126 ರನ್‌ಗಳಾಗಿದ್ದಾಗ, ಪ್ರಿಯಾಂಶ್ ಆರ್ಯ ರೂಪದಲ್ಲಿ ಮೊದಲ ಹೊಡೆತ ಬಿದ್ದಿತು.

DC vs PBKS: ದಾಖಲೆಯ 152 ರನ್..! ಕನ್ನಡಿಗ ರಾಹುಲ್ ಅಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಧ್ವಂಸ

ಪ್ರಿಯಾಂಶ್ ಆರ್ಯ 43 ರನ್‌ಗಳಿಗೆ ಔಟಾದರು. ನಂತರ ಪ್ರಭಾಂಶ್ ಸಿಂಗ್ 76 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೂಪರ್ ಕೊನೊಲಿ ಕೂಡ 17 ರನ್‌ಗಳಿಗೆ ಔಟಾದರೆ, ನೆಹಲ್ ವದೇರಾ ಇನ್ನಿಂಗ್ಸ್ ಕೂಡ 15 ಎಸೆತಗಳಲ್ಲಿ 25 ರನ್‌ಗಳಿಗೆ ಅಂತ್ಯವಾಯಿತು. ಈ ವಿಕೆಟ್‌ನಿಂದ ಪಂದ್ಯವು ದೆಹಲಿಯ ಪರವಾಗಿ ವಾಲಲು ಪ್ರಾರಂಭಿಸಿತು. ಆದರೆ ಕರುಣ್ ನಾಯರ್ ಶ್ರೇಯಸ್ ಅಯ್ಯರ್ ಅವರ ಎರಡು ಸುಲಭ ಕ್ಯಾಚ್‌ಗಳನ್ನು ಕೈಬಿಟ್ಟಿದ್ದು, ಪಂದ್ಯಕ್ಕೆ ತಿರುವು ನೀಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Sat, 25 April 26

Follow Us
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!