AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಬೆರಳು ತೋರಿಸಿದಕ್ಕೆ 35,700 ರೂ. ದಂಡ..!

IPL 2026 LSG vs RR: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 159 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 18 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಲ್​ಎಸ್​ಜಿ ಪಡೆ 40 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

IPL 2026: ಬೆರಳು ತೋರಿಸಿದಕ್ಕೆ 35,700 ರೂ. ದಂಡ..!
Nandre Burger
ಝಾಹಿರ್ ಯೂಸುಫ್
|

Updated on: Apr 23, 2026 | 2:07 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಅಶಿಸ್ತು ತೋರಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ನಾಂಡ್ರೆ ಬರ್ಗರ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 10 ರಷ್ಟು ದಂಡ ವಿಧಿಸಲಾಗಿದೆ. ಏಪ್ರಿಲ್ 22 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಬರ್ಗರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು.

ಈ ಪಂದ್ಯದ ಎರಡನೇ ಓವರ್‌ನಲ್ಲಿ ನಾಂಡ್ರೆ ಬರ್ಗರ್ ಅವರು ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ವಿಕೆಟ್ ಪಡೆದ ಸಂಭ್ರಮದಲ್ಲಿ ಬರ್ಗರ್ ಅವರು ಪಂತ್ ಅವರತ್ತ ಬೆರಳು ತೋರಿಸಿ ಬೀಳ್ಕೊಡುಗೆ ನೀಡಿದ್ದರು. ಇದನ್ನು ಐಪಿಎಲ್ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ.

ಶಿಕ್ಷೆಯ ವಿವರ:

  • ನಿಯಮದ ಉಲ್ಲಂಘನೆ: ನಾಂಡ್ರೆ ಬರ್ಗರ್ ಅವರು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.5 ರ ಅಡಿಯಲ್ಲಿ ‘ಲೆವೆಲ್ 1’ ಅಪರಾಧ ಎಸಗಿದ್ದಾರೆ ಎಂದು ಸಾಬೀತಾಗಿದೆ. ಇದು ಎದುರಾಳಿ ಆಟಗಾರನನ್ನು ಕೆರಳಿಸುವಂತಹ ಸನ್ನೆ ಅಥವಾ ಭಾಷೆಯನ್ನು ಬಳಸುವುದಕ್ಕೆ ಸಂಬಂಧಿಸಿದೆ.
  • ದಂಡ: ಪಂದ್ಯದ ಸಂಭಾವನೆಯಲ್ಲಿ ಶೇ. 10 ರಷ್ಟು ಕಡಿತ ಮಾಡಲಾಗಿದ್ದು, ಅವರ ಶಿಸ್ತಿನ ದಾಖಲೆಯಲ್ಲಿ ಒಂದು ಡಿಮೆರಿಟ್ ಪಾಯಿಂಟ್ ಸೇರಿಸಲಾಗಿದೆ. ಬರ್ಗರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರಿಂದ ಹೆಚ್ಚಿನ ವಿಚಾರಣೆಯ ಅಗತ್ಯವಿರಲಿಲ್ಲ.

35,700 ರೂ. ದಂಡ..!

ಸೌತ್ ಆಫ್ರಿಕಾ ವೇಗಿ ನಾಂಡ್ರೆ ಬರ್ಗರ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ 50 ಲಕ್ಷ ರೂ.ಗೆ ಖರೀದಿಸಿದೆ. ಅದರಂತೆ ಅವರ ಲೀಗ್​ ಹಂತದ ಪ್ರತಿ ಪಂದ್ಯದ ಸಂಭಾವನೆ 3.57 ಲಕ್ಷ ರೂ.

3.57 ಲಕ್ಷ ರೂ. ಪಂದ್ಯ ಸಂಭಾವನೆಯಿಂದ 10% ದಂಡ ಕಟ್ಟಬೇಕಾಗಿದೆ. ಅಂದರೆ ಬೆರಳು ತೋರಿಸಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದಕ್ಕೆ ನಾಂಡ್ರೆ ಬರ್ಗರ್ 35,700 ರೂ. ದಂಡ ಕಟ್ಟಬೇಕಾಗಿ ಬಂದಿದೆ.

ಪಂದ್ಯದ ಫಲಿತಾಂಶ:

ಈ ಪಂದ್ಯದಲ್ಲಿ. ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ರವೀಂದ್ರ ಜಡೇಜಾ ಅವರ ಅಜೇಯ 43 ರನ್ ನೆರವಿನಿಂದ 159 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ 119 ರನ್‌ಗಳಿಗೆ ಆಲೌಟ್ ಆಗಿ 40 ರನ್‌ಗಳ ಸೋಲೊಪ್ಪಿಕೊಂಡಿದೆ.

ಇದನ್ನೂ ಓದಿ: 4 ಸರಣಿಗಳ ವೇಳೆ ಜಸ್​ಪ್ರೀತ್ ಬುಮ್ರಾಗೆ ರೆಸ್ಟ್​..!

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ