AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೆ ಚಾನ್ಸ್​: ಹೀಗಿರಲಿದೆ ಪ್ಲೇಆಫ್ ಫೈಟ್

IPL 2026 Playoffs: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್​ ಈ ನಾಲ್ಕು ತಂಡಗಳಲ್ಲಿ ಎರಡು ಟೀಮ್​ಗಳು ಕ್ವಾಲಿಫೈಯರ್-1 ಪಂದ್ಯವಾಡಿದರೆ, ಮತ್ತೆರಡು ತಂಡಗಳು ಎಲಿಮಿನೇಟರ್ ಮ್ಯಾಚ್ ಆಡಲಿದೆ.

ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೆ ಚಾನ್ಸ್​: ಹೀಗಿರಲಿದೆ ಪ್ಲೇಆಫ್ ಫೈಟ್
Ipl 2026 Image Credit source: Iplt20.com
ಝಾಹಿರ್ ಯೂಸುಫ್
|

Updated on:May 26, 2026 | 8:51 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ ನಾಲ್ಕು ತಂಡಗಳು ಪ್ಲೇಆಫ್​ ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಲೀಗ್​ ಹಂತದ 70 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅತ್ಯಧಿಕ ಅಂಕಗಳನ್ನು ಪಡೆದು, ಪಾಯಿಂಟ್ಟ್​ ಟೇಬಲ್​ನಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿರುವ ನಾಲ್ಕು ತಂಡಗಳು ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಅದರಂತೆ ಈ ಬಾರಿ ಪ್ಲೇಆಫ್ ಆಡಲಿರುವ ತಂಡಗಳೆಂದರೆ…

  • ರಾಯಲ್ ಚಾಲೆಂಜರ್ಸ್ ಬೆಂಗಳೂರು
  • ಗುಜರಾತ್ ಟೈಟಾನ್ಸ್​
  • ಸನ್​ರೈಸರ್ಸ್ ಹೈದರಾಬಾದ್
  • ರಾಜಸ್ಥಾನ್ ರಾಯಲ್ಸ್.

ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿರುವ ಕಾರಣ ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಐಪಿಎಲ್ ಪ್ಲೇಆಫ್ ನಿಯಮದ ಪ್ರಕಾರ, ಲೀಗ್ ಹಂತದ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಟಾಪ್-2 ನಲ್ಲಿ ಸ್ಥಾನ ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಹಾಗೂ 3ನೇ ಮತ್ತು 4ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ.

  • ಮೊದಲ ಕ್ವಾಲಿಫೈಯರ್: ಪ್ಲೇಆಫ್​ ಸುತ್ತಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.
  • ಎಲಿಮಿನೇಟರ್​ ಪಂದ್ಯ: ಪ್ಲೇಆಫ್ ಸುತ್ತಿನ ಎರಡನೇ ಪಂದ್ಯವು ಎಲಿಮಿನೇಟರ್ ಮ್ಯಾಚ್ ಆಗಿದ್ದು, ಈ ಪಂಧ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.
  • ದ್ವಿತೀಯ ಕ್ವಾಲಿಫೈಯರ್: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೊಂದು ಚಾನ್ಸ್​!

  • ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಲಿದೆ. ಅಂದರೆ ಇಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.
  • ಹಾಗೆಯೇ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳುವುದಿಲ್ಲ. ಬದಲಾಗಿ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೇರಲು ಎರಡನೇ ಚಾನ್ಸ್ ಸಿಗಲಿದೆ.

ಮಾಡು ಇಲ್ಲವೇ ಮಡಿ ಪಂದ್ಯ:

  • ಎಲಿಮಿನೇಟರ್ ಪಂದ್ಯ ಎಂಬುದು ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​ನಲ್ಲಿ ಸೋತ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಈ ಡು ಆರ್ ಡೈ  ಮ್ಯಾಚ್​ನಲ್ಲಿ ಈ ಬಾರಿ ಕಣಕ್ಕಿಳಿಯಲಿರುವುದು ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್. ಈ ಎರಡು ತಂಡಗಳಲ್ಲಿ ಒಂದು ಟೀಮ್ ಇಂಡಿಯಾ ಮೇ 27 ರಂದು ಐಪಿಎಲ್ ಅಭಿಯಾನ ಕೊನೆಗೊಳಿಸಲಿದೆ.
  • ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯ ಆಡಬೇಕಾಗುತ್ತದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಂದಿಗೆ ಎಲಿಮಿನೇಟರ್ ಪಂದ್ಯ ಗೆದ್ದ ತಂಡ ಪಂದ್ಯವಾಡಬೇಕಾಗುತ್ತದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ.

ಅಂದರೆ ಎಲಿಮಿನೇಟರ್ ಪಂದ್ಯವಾಡುವ ತಂಡ ಫೈನಲ್​ಗೇರಬೇಕಿದ್ದರೆ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಬೇಕು. ಅದೇ ವೇಳೆ ಮೊದಲ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ. ಇನ್ನು ಸೋತ ತಂಡಕ್ಕೆ ಸಿಗುವ ಎರಡನೇ ಚಾನ್ಸ್​ (ದ್ವಿತೀಯ ಕ್ವಾಲಿಫೈಯರ್) ಮೂಲಕ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

ಇದನ್ನೂ ಓದಿ: IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

ಹೀಗಾಗಿ ಇಂದಿನ (ಮೇ 26) ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಗುಜರಾತ್ ಟೈಟಾನ್ಸ್ ತಂಡಗಳು ಸೋತರೆ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಆಡಲು ಅವಕಾಶ ಪಡೆಯಲಿದೆ. ಆದರೆ ಅತ್ತ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡದ ಐಪಿಎಲ್ ಅಭಿಯಾನ ನಾಳೆ (ಮೇ 27) ಅಂತ್ಯವಾಗಲಿದೆ. ಅಂದರೆ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಒಂದು ಟೀಮ್ ಬುಧವಾರ ಐಪಿಎಲ್ ಅಭಿಯಾನ ಅಂತ್ಯಗೊಳಿಸಲಿದೆ.

Published On - 8:50 am, Tue, 26 May 26

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!