AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

IPL 2026 Playoffs: ಐಪಿಎಲ್​​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಿಗಾಗಿ ನಾಲ್ಕು ಬಲಿಷ್ಠ ತಂಡಗಳು ಸಜ್ಜಾಗಿವೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!
Ipl 2026 Image Credit source: Cricketangon
ಝಾಹಿರ್ ಯೂಸುಫ್
|

Updated on:May 25, 2026 | 12:29 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 10 ತಂಡಗಳಲ್ಲಿ 4 ಟೀಮ್​ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅದರಂತೆ ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ತಂಡಗಳು ಕಣಕ್ಕಿಳಿಯಲಿವೆ. ವಿಶೇಷ ಎಂದರೆ ಈ ಬಾರಿಯ ಪ್ಲೇಆಫ್ ಹಂತವು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ಅಪರೂಪದ ಹಾಗೂ ಕುತೂಹಲಕಾರಿ ಮುಖಾಮುಖಿಗೆ ಸಾಕ್ಷಿಯಾಗಲಿದೆ.

ಅಂದರೆ ಟೂರ್ನಿಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ, ಪ್ಲೇಆಫ್ ತಲುಪಿರುವ ನಾಲ್ಕೂ ತಂಡಗಳು ಈ ಹಿಂದೆ ತಲಾ ಒಂದೊಂದು ಬಾರಿ  ಐಪಿಎಲ್ ಟ್ರೋಫಿ ಗೆದ್ದಿವೆ. ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಕೊಲ್ಕತ್ತಾ ನೈಟ್​ ರೈಡರ್ಸ್​ನಂತಹ ಬಹು ಬಾರಿ ಚಾಂಪಿಯನ್ ಪಟ್ಟಕ್ಕೇರಿದ ದೈತ್ಯ ತಂಡಗಳಿಲ್ಲದ ಈ ಪ್ಲೇಆಫ್ ಕಣದಲ್ಲಿ ಪ್ರತಿಯೊಂದು ತಂಡಕ್ಕೂ ಎರಡನೇ ಬಾರಿ ಚಾಂಪಿಯನ್ ಆಗುವ ಸುವರ್ಣಾವಕಾಶ ಎದುರಾಗಿದೆ.

 ‘ಒಂದೇ ಒಂದು’ ಟ್ರೋಫಿ ಇತಿಹಾಸ:

ಈ ಬಾರಿ ಅಂತಿಮ ನಾಲ್ಕರ ಘಟ್ಟ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳ ಹಿಂದಿನ ಚಾಂಪಿಯನ್ ಹಾದಿ ಹೀಗಿದೆ:

  • ರಾಜಸ್ಥಾನ್ ರಾಯಲ್ಸ್ (2008): ಶೇನ್ ವಾರ್ನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡವು ಐಪಿಎಲ್‌ನ ಉದ್ಘಾಟನಾ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿ ಇತಿಹಾಸ ನಿರ್ಮಿಸಿತ್ತು.
  • ಸನ್‌ರೈಸರ್ಸ್ ಹೈದರಾಬಾದ್ (2016): ಡೇವಿಡ್ ವಾರ್ನರ್ ಸಾರಥ್ಯದ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ನಲ್ಲಿ ಆರ್​​ಸಿಬಿ ತಂಡವನ್ನು ಮಣಿಸಿ ತನ್ನ ಏಕೈಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.
  • ಗುಜರಾತ್ ಟೈಟಾನ್ಸ್ (2022): ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಗುಜರಾತ್ ಟೈಟಾನ್ಸ್ ಚೊಚ್ಚಲ ಸೀಸನ್‌ನಲ್ಲೇ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು (2025): ಐಪಿಎಲ್​ 2025ರ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ, ಕೋಟ್ಯಂತರ ಅಭಿಮಾನಿಗಳ ಸುದೀರ್ಘ ಕಾಯುವಿಕೆಗೆ ಬ್ರೇಕ್ ಹಾಕಿ ಆರ್​ಸಿಬಿ ತಂಡವು ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದೀಗ ಈ ನಾಲ್ಕು ತಂಡಗಳೇ ಪ್ಲೇಆಫ್ ಪಂದ್ಯಗಳನ್ನಾಡಿದೆ. ಇದರೊಂದಿಗೆ ಈ ನಾಲ್ಕು ತಂಡಗಳಲ್ಲಿ ಒಂದು ಟೀಮ್ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವುದು ಕೂಡ ಖಚಿತವಾಗಿದೆ. ಅದರಂತೆ ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವ ತಂಡ ಯಾವುದು ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮೈದಾನದಲ್ಲೇ ಕೊನೆಯುಸಿರೆಳೆದ ಕರ್ನಾಟಕದ ಕ್ರಿಕೆಟಿಗ!

ಪ್ಲೇಆಫ್ ಸುತ್ತಿನ ವೇಳಾಪಟ್ಟಿ:

ಪಂದ್ಯ ದಿನಾಂಕ ಮುಖಾಮುಖಿ ಕ್ರೀಡಾಂಗಣ / ಸ್ಥಳ
ಕ್ವಾಲಿಫೈಯರ್ 1  ಮೇ 26, ಮಂಗಳವಾರ  ರಾಯಲ್ ಚಾಲೆಂಜರ್ಸ್​ ಬೆಂಗಳೂರು vs ಗುಜರಾತ್ ಟೈಟಾನ್ಸ್ ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ
ಎಲಿಮಿನೇಟರ್  ಮೇ 27, ಬುಧವಾರ ಸನ್​ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ ಮುಲ್ಲನ್‌ಪುರ್ ಸ್ಟೇಡಿಯಂ, ನ್ಯೂ ಚಂಡೀಗಢ್
ಕ್ವಾಲಿಫೈಯರ್ 2  ಮೇ 29, ಶುಕ್ರವಾರ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ vs ಎಲಿಮಿನೇಟರ್ ವಿಜೇತ ತಂಡ ಮುಲ್ಲನ್‌ಪುರ್ ಸ್ಟೇಡಿಯಂ, ನ್ಯೂ ಚಂಡೀಗಢ್
ಫೈನಲ್  ಮೇ 31, ಭಾನುವಾರ ಕ್ವಾಲಿಫೈಯರ್ 1 ವಿಜೇತರು vs ಕ್ವಾಲಿಫೈಯರ್ 2 ವಿಜೇತರು ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

Published On - 12:22 pm, Mon, 25 May 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ರಾಜೇಶ್ ನಟರಂಗ ಅವರನ್ನು ತಂದೆ ಎಂದ ಆನಂದ್​ ಮಗ; ನಡೆಯಿತು ಫನ್ ಘಟನೆ
ರಾಜೇಶ್ ನಟರಂಗ ಅವರನ್ನು ತಂದೆ ಎಂದ ಆನಂದ್​ ಮಗ; ನಡೆಯಿತು ಫನ್ ಘಟನೆ
ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ, ಬೆಚ್ಚಿ ಬೀಳಿಸುವ ವಿಡಿಯೋ
ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ, ಬೆಚ್ಚಿ ಬೀಳಿಸುವ ವಿಡಿಯೋ
Video: ಹುಳುಕು ಹಲ್ಲಿನ ಬದಲು ಸರಿ ಇದ್ದ ಹಲ್ಲು ಕಿತ್ತ ವೈದ್ಯ
Video: ಹುಳುಕು ಹಲ್ಲಿನ ಬದಲು ಸರಿ ಇದ್ದ ಹಲ್ಲು ಕಿತ್ತ ವೈದ್ಯ