AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ನಲ್ಲಿ 4 ತಂಡಗಳ ಸ್ಥಾನ ಖಚಿತ; ಹೇಗಿರಲಿದೆ ಪ್ಲೇಆಫ್‌ ಸುತ್ತು?

IPL 2026 Playoff Fixtures: ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ 2026 ರ ಪ್ಲೇಆಫ್‌ಗೆ ಪ್ರವೇಶಿಸಿತು. ಇದರೊಂದಿಗೆ ಪ್ಲೇಆಫ್ ಸುತ್ತಿನ ಚಿತ್ರಣ ಸ್ಪಷ್ಟವಾಗಿದೆ. ಆರ್​ಸಿಬಿ, ಗುಜರಾತ್, ಸನ್​ರೈಸರ್ಸ್​ ಮತ್ತು ರಾಜಸ್ಥಾನ್ ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆದಿವೆ. ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ vs ಗುಜರಾತ್, ಎಲಿಮಿನೇಟರ್‌ನಲ್ಲಿ ಸನ್​ರೈಸರ್ಸ್​ vs ರಾಜಸ್ಥಾನ್ ಸೆಣಸಲಿವೆ. ಮೇ 26 ರಿಂದ ಪಂದ್ಯಗಳು ಆರಂಭವಾಗಲಿದ್ದು, ಫೈನಲ್ ಟಿಕೆಟ್‌ಗಾಗಿ ತಂಡಗಳು ಹೋರಾಡಲಿವೆ.

IPL 2026: ಪ್ಲೇಆಫ್​ನಲ್ಲಿ 4 ತಂಡಗಳ ಸ್ಥಾನ ಖಚಿತ; ಹೇಗಿರಲಿದೆ ಪ್ಲೇಆಫ್‌ ಸುತ್ತು?
Ipl 2026 Playoffs
ಪೃಥ್ವಿಶಂಕರ
|

Updated on:May 24, 2026 | 8:24 PM

Share

ಐಪಿಎಲ್ 2026 (IPL 2026) 69 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (RR vs MI) ತಂಡವನ್ನು 30 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್, ಮುಂಬೈಗೆ 206 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 175 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೊನೆಯ ತಂಡವಾಗಿ ಪ್ಲೇಆಫ್ ಟಿಕೆಟ್ ಪಡೆದುಕೊಂಡಿದೆ.

ಈ ಮೂಲಕ ಪ್ಲೇಆಫ್ ಸುತ್ತಿನ ಚಿತ್ರಣ ಸ್ಪಷ್ಟವಾಗಿದೆ. ಅದರಂತೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವಿದ್ದರೆ, ಇದೀಗ ನಾಲ್ಕನೇ ಸ್ಥಾನಕ್ಕೆ ರಾಜಸ್ಥಾನ್ ಎಂಟ್ರಿಕೊಟ್ಟಿದೆ. ಪ್ಲೇಆಫ್ ಸುತ್ತಿನಲ್ಲಿ ಒಟ್ಟು ಮೂರು ಪಂದ್ಯಗಳು ನಡೆಯಲಿವೆ. ಮೊದಲಿಗೆ ಕ್ವಾಲಿಫೈಯರ್ 1 ನಡೆದರೆ, ಆ ನಂತರ ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಈ ಎರಡು ಪಂದ್ಯಗಳ ಬಳಿಕ ಕ್ವಾಲಿಫೈಯರ್ 2 ನಡೆಯಲಿದೆ. ಇದಾದ ಬಳಿಕ ಫೈನಲ್ ಪಂದ್ಯ ನಡೆಯಲಿದೆ.

ಯಾವ ತಂಡಗಳ ನಡುವೆ ಕ್ವಾಲಿಫೈಯರ್ 1?

ಕ್ವಾಲಿಫೈಯರ್ 1 ಪಂದ್ಯವನ್ನು ಆಡುವ ಎರಡು ತಂಡಗಳು ಯಾವುವು ಎಂಬುದು ಈಗಾಗಲೇ ನಿರ್ಧಾರವಾಗಿತ್ತು. ಅದರಂತೆ ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಏಕೆಂದರೆ ಉಭಯ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಹೀಗಾಗಿ ಇವೆರಡು ತಂಡಗಳ ಕ್ವಾಲಿಫೈಯರ್ 1 ಆಡಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಲಿದೆ. ಸೋತ ತಂಡಕ್ಕೆ ಇನ್ನೊಂದು ಅವಕಾಶವೆಂಬಂತೆ ಕ್ವಾಲಿಫೈಯರ್ 2 ಆಡಲಿದೆ. ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಮೇ 26 ರಂದು ನಡೆಯಲಿದೆ.

ಎಲಿಮಿನೇಟರ್​ನಲ್ಲಿ ಯಾವ ತಂಡಗಳ ಮುಖಾಮುಖಿ?

ಕ್ವಾಲಿಫೈಯರ್ 1 ಬಳಿಕ ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿರುವ ತಂಡಗಳು ಮುಖಾಮುಖಿಯಾಗಲಿವೆ. ಅದರಂತೆ ಮೂರನೇ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ನಾಲ್ಕನೇ ಸ್ಥಾನದಲ್ಲಿರುವ ಗುಜರಾತ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಕ್ವಾಲಿಫೈಯರ್ 2 ಆಡಲು ಅರ್ಹತೆ ಪಡೆಯಲಿದೆ. ಇತ್ತ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಈ ಪಂದ್ಯ ಮೇ 27 ರಂದು ನಡೆಯಲಿದೆ.

MI vs RR IPL 2026 Highlights: ಕೊನೆಯ ಲೀಗ್ ಪಂದ್ಯದಲ್ಲೂ ಸೋತ ಮುಂಬೈ

ಯಾವ ತಂಡಗಳ ನಡುವೆ ಕ್ವಾಲಿಫೈಯರ್ 2?

ಈ ಎರಡು ಪಂದ್ಯಗಳ ಬಳಿಕ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಮೇಲೆ ಹೇಳಿದಂತೆ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಕ್ವಾಲಿಫೈಯರ್ 2 ರಲ್ಲಿ ಎಲಿಮಿನೇಟರ್‌ ಪಂದ್ಯವನ್ನು ಗೆದ್ದ ತಂಡವನ್ನು ಎದುರಿಸಲಿದೆ. ಉದಾಹರಣೆಗೆ ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಗೆದ್ದರೆ ನೇರವಾಗಿ ಫೈನಲ್​ಗೇರಲಿದೆ. ಇತ್ತ ಸೋತ ಗುಜರಾತ್ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇತ್ತ ಎಲಿಮಿನೇಟರ್​ನಲ್ಲಿ ಸನ್‌ರೈಸರ್ಸ್ ತಂಡವನ್ನು ರಾಜಸ್ಥಾನ್ ಮಣಿಸಿದರೆ, ಆಗ ರಾಜಸ್ಥಾನ್ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ತಂಡವನ್ನು ಎದುರಿಸಲಿದೆ. ಈ ಕ್ವಾಲಿಫೈಯರ್ 2 ರಲ್ಲಿ ಗೆದ್ದ ತಂಡ ಫೈನಲ್​ನಲ್ಲಿ ಆರ್​ಸಿಬಿ ತಂಡವನ್ನು ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Sun, 24 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ