AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ

IPL 2026 Qualifier-1 RCB vs GT : ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಧರ್ಮಶಾಲಾದಲ್ಲಿ ಸೆಣಸಾಡುತ್ತಿವೆ. ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಆರ್​ಸಿಬಿ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು ಭರ್ಜರಿ 76 ರನ್ ಗಳಿಸಿತು. ಈ ಪೈಕಿ 60 ರನ್ ಕೇವಲ ಬೌಂಡರಿ, ಸಿಕ್ಸರ್​ಗಳಿಂದ ಬಂದಿದ್ದು, ಆರ್​ಸಿಬಿಯ ಸ್ಫೋಟಕ ಆರಂಭಕ್ಕೆ ಸಾಕ್ಷಿಯಾಗಿದೆ.

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ
Rcb
ಪೃಥ್ವಿಶಂಕರ
|

Updated on:May 26, 2026 | 8:24 PM

Share

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier  1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60 ರನ್ ಕಲೆಹಾಕಿತು.

19  ರನ್​ಗೆ ಅಯ್ಯರ್ ಔಟ್

ವಾಸ್ತವವಾಗಿ ಇಂದಿನ ಪಂದ್ಯದಲ್ಲಿ ಫಿಲ್ ಸಾಲ್ಟ್ ಆಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾಲ್ಟ್ ಚೇತರಿಸಿಕೊಂಡಿದ್ದರೂ ವೈದ್ಯಕೀಯ ವಿಭಾಗದಿಂದ ಗ್ರೀನ್ ಸಿಗ್ನಲ್ ಸಿಗದ ಕಾರಣ ಸಾಲ್ಟ್ ಈ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಬ್ಯಾಟಿಂಗ್‌ ಆರಂಭಿಸಿದರು. ಗುಜರಾತ್ ಪರ ಬೌಲಿಂಗ್ ಆರಂಭಿಸಿದ ಸಿರಾಜ್ ಅವರ ಮೊದಲ ಓವರ್​ನಲ್ಲೇ ಅಯ್ಯರ್ 3 ಬೌಂಡರಿಗಳನ್ನು ಬಾರಿಸಿದರು. ರಬಾಡ ಎಸೆತದ ಎರಡನೇ ಓವರ್​ನಲ್ಲೂ ಅಯ್ಯರ್ ಒಂದು ಸಿಕ್ಸರ್ ಬಾರಿಸಿದರು. ಆದರೆ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚಿತ್ತು ಔಟಾದರು.

ಕೊಹ್ಲಿ- ಪಡಿಕ್ಕಲ್ ಜೊತೆಯಾಟ

ಹೀಗಾಗಿ ಅಯ್ಯರ್ 7 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 19 ರನ್ ಬಾರಿಸಿ ಔಟಾದರು. ಆ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಉತ್ತಮ ಜೊತೆಯಾಟ ಕಟ್ಟಿದರು. ಇವರಿಬ್ಬರು ಪವರ್​ಪ್ಲೇನಲ್ಲಿ ತಂಡವನ್ನು 70ರನ್​ಗಳ ಗಡಿ ದಾಟಿಸಿದರು. ಸಿರಾಜ್ ಬೌಲ್ ಮಾಡಿದ 4ನೇ ಓವರ್​ನಲ್ಲಿ ಪಡಿಕ್ಕಲ್ 4 ಬೌಂಡರಿಗಳನ್ನು ಬಾರಿಸಿದರು. ರಬಾಡ ಬೌಲ್ ಮಾಡಿದ ಪವರ್​ಪ್ಲೇನ ಕೊನೆಯ ಓವರ್​ನಲ್ಲಿ ವಿರಾಟ್ ಕೊಹ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಬಾರಿಸಿದರು. ಈ ಮೂಲಕ ಇವರಿಬ್ಬರು ಅರ್ಧಶತಕದ ಜೊತೆಯಟವನ್ನು ಕಟ್ಟಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Tue, 26 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ