AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ

RCB vs GT IPL 2026 Qualifier 1: ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಧರ್ಮಶಾಲಾದಲ್ಲಿ ಸೆಣಸಲಿವೆ. ಫೈನಲ್‌ಗೆ ನೇರ ಪ್ರವೇಶಕ್ಕಾಗಿ ಈ ಮಹತ್ವದ ಕಾದಾಟದಲ್ಲಿ, ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದ್ದು, ಉಭಯ ತಂಡಗಳ ಪ್ಲೇಯಿಂಗ್ 11ರಲ್ಲಿ ಒಂದೊಂದು ಬದಲಾವಣೆ ಮಾಡಲಾಗಿದೆ. ಫೈನಲ್‌ಗೆ ಅರ್ಹತೆ ಪಡೆಯಲು ಈ ಪಂದ್ಯ ನಿರ್ಣಾಯಕವಾಗಿದೆ.

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ
Rcb Vs Gt Toss
ಪೃಥ್ವಿಶಂಕರ
|

Updated on:May 26, 2026 | 7:21 PM

Share

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ.

ಟಾಸ್ ಗೆದ್ದ ಗುಜರಾತ್

ಮೇಲೆ ಹೇಳಿದಂತೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್‌ ಮಾಡಲಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದಿದ್ದು, ಉಭಯ ತಂಡಗಳಲ್ಲೂ ಒಂದೊಂದು ಬದಲಾವಣೆಗಳನ್ನು ಮಾಡಲಾಗಿದೆ. ಆರ್​ಸಿಬಿ ತಂಡದಲ್ಲಿ ರೋಮಾರಿಯೋ ಶೆಫರ್ಡ್​ ಬದಲಿಗೆ ಜೆಕೋಬ್ ಡಫಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ವೆಂಕಟೇಶ್ ಅಯ್ಯರ್, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜಾಕೋಬ್ ಡಫ್ಫಿ ಮತ್ತು ರಸಿಖ್ ಸಲಾಂ.

ಇಂಪ್ಯಾಕ್ಟ್ ಪ್ಲೇಯರ್ಸ್​: ರೊಮಾರಿಯೋ ಶೆಫರ್ಡ್, ಸುಯಾಶ್ ಶರ್ಮಾ, ಕನಿಷ್ಕ್ ಚೌಹಾನ್, ಅಭಿನಂದನ್ ಸಿಂಗ್ ಮತ್ತು ಜೋರ್ಡಾನ್ ಕಾಕ್ಸ್.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ನಿಶಾಂತ್ ಸಿಂಧು, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ (ಅರ್ಷದ್ ಖಾನ್ ಬದಲಾಗಿ), ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಪ್ಯಾಕ್ಟ್ ಪ್ಲೇಯರ್ಸ್​: ರಾಹುಲ್ ತೆವಾಟಿಯಾ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರಾ ಮತ್ತು ಸಾಯಿ ಕಿಶೋರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Tue, 26 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ