AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

IPL 2026: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಎರಡು ಮೈದಾನಗಳಲ್ಲಿ ಕಣಕ್ಕಿಳಿಯಲಿದೆ. ಆದರೆ ರಾಜಸ್ಥಾನದ ಜೈಪುರದಲ್ಲಿ ಈ ಬಾರಿ ಪಂದ್ಯವಾಡುವುದಿಲ್ಲ. ಬದಲಿಗೆ ಎರಡು ಹೋಮ್​ ಗ್ರೌಂಡ್​ಗಳನ್ನು ಆಯ್ಕೆ ಮಾಡಿಕೊಂಡಿದೆ.

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್
Rajastan Royals
ಝಾಹಿರ್ ಯೂಸುಫ್
|

Updated on: Jan 22, 2026 | 2:38 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಹೊಸ ಹೋಮ್ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಈ ಹಿಂದೆ ಆಡುತ್ತಿದ್ದ ಜೈಪುರದ ಸವಾಯಿ ಮಾನ್ ​ಸಿಂಗ್ ಸ್ಟೇಡಿಯಂ ಈ ಬಾರಿ ಆರ್​ಆರ್ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪದೇ ಪದೇ ಎಚ್ಚರಿಕೆ ನೀಡಿದ್ದರೂ ರಾಜಸ್ಥಾನ ಕ್ರಿಕೆಟ್ ಸಂಘವು ಇನ್ನೂ ಸಹ ಚುನಾವಣೆಯನ್ನು ನಡೆಸಿಲ್ಲ. ಹೀಗಾಗಿ ಜೈಪುರದ ಸವಾಯಿ ಮಾನ್​ ಸಿಂಗ್​ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ಬಿಸಿಸಿಐ ನಿರ್ಧರಿಸಿದೆ.

ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬದಲಿ ಹೋಮ್ ಗ್ರೌಂಡ್ ಅನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಎರಡು ಮೈದಾನಗಳಲ್ಲಿ ಕಣಕ್ಕಿಳಿಯಲಿದೆ. ಅದು ಸಹ ಅಸ್ಸಾಂ ಹಾಗೂ ಮಹಾರಾಷ್ಟ್ರದಲ್ಲಿ ಎಂಬುದು ವಿಶೇಷ.

ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧೀನದಲ್ಲಿರುವ ಪುಣೆಯ ಎಂಸಿಎ ಸ್ಟೇಡಿಯಂ ಅನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತನ್ನ ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಈ ಮೈದಾನದಲ್ಲಿ ಆರ್​ಆರ್ ನಾಲ್ಕರಿಂದ ಐದು ಪಂದ್ಯಗಳನ್ನಾಡಲಿದೆ ಎಂದು ವರದಿಯಾಗಿದೆ.

ಇನ್ನುಳಿದ ಹೋಮ್ ಗ್ರೌಂಡ್ ಮ್ಯಾಚ್​ಗಳನ್ನು ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ಆಡಲಿದೆ. ಕಳೆದ ಕೆಲ ವರ್ಷಗಳಿಂದ ಬರ್ಸಾಪರ ಸ್ಟೇಡಿಯಂ ಅನ್ನು ರಾಜಸ್ಥಾನ್ ರಾಯಲ್ಸ್ ತನ್ನ ದ್ವಿತೀಯ ಹೋಮ್ ಗ್ರೌಂಡ್ ಆಗಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಪ್ರತಿ ಸೀಸನ್​ನಲ್ಲೂ ಇಲ್ಲಿ 2 ಮ್ಯಾಚ್​ಗಳನ್ನಾಡುತ್ತಿದ್ದು, ಈ ಬಾರಿ ಕೂಡ ಅದು ಮುಂದುವರೆಯಲಿದೆ.

ಅಂದರೆ ತವರು ಮೈದಾನದಲ್ಲಿ ನಡೆಯಲಿರುವ 7 ಪಂದ್ಯಗಳನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 5+2 ರೀತಿಯಲ್ಲಿ ವಿಂಗಡಿಸುವ ಸಾಧ್ಯತೆಯಿದೆ. ಅದರಂತೆ 5 ಮ್ಯಾಚ್​ಗಳನ್ನು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಆಡಿದರೆ, ಇನ್ನುಳಿದ ಎರಡು ಪಂದ್ಯಗಳಿಗಾಗಿ ಗುವಾಹಟಿಗೆ ತೆರಳುವ ಸಾಧ್ಯತೆ ಹೆಚ್ಚಿದೆ.

ಆರ್​ಆರ್​ ಪಡೆಗೆ ಹೊಸ ನಾಯಕ

ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕ್ಯಾಪ್ಟನ್ ಆಗಿದ್ದ ಸಂಜು ಸ್ಯಾಮ್ಸನ್ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಆರ್​ ಫ್ರಾಂಚೈಸಿಯು ಈ ಬಾರಿ ಹೊಸ ಕ್ಯಾಪ್ಟನ್​ನನ್ನು ಪರಿಚಯಿಸಲಿದೆ.

ಇದನ್ನೂ ಓದಿ: IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

ರಾಜಸ್ಥಾನ್ ರಾಯಲ್ಸ್ ತಂಡ: ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ರಿಯಾನ್ ಪರಾಗ್, ಯಧುವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್​ರೆ ಬರ್ಗರ್,  ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರು, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲ್ದೀಪ್ ಸೇನ್.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!