AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕಳೆದ 5 ಆವೃತ್ತಿಗಳ ಫಲಿತಾಂಶ; ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್

RCB IPL 2026 Championship Prediction: 2026ರ ಐಪಿಎಲ್ ಲೀಗ್ ಸುತ್ತು ಮುಕ್ತಾಯಗೊಂಡಿದೆ. ಅಗ್ರಸ್ಥಾನಿ RCB ಕ್ವಾಲಿಫೈಯರ್ 1ರಲ್ಲಿ GT ತಂಡವನ್ನು ಎದುರಿಸಲಿದೆ. 2020ರಿಂದ 2025ರವರೆಗಿನ ಐಪಿಎಲ್ ಚಾಂಪಿಯನ್‌ಗಳನ್ನು ವಿಶ್ಲೇಷಿಸಿದರೆ, ಲೀಗ್ ಪಟ್ಟಿಯಲ್ಲಿ ಅಗ್ರಸ್ಥಾನ ಅಥವಾ ಎರಡನೇ ಸ್ಥಾನ ಪಡೆದ ತಂಡಗಳು ಪರ್ಯಾಯವಾಗಿ ಪ್ರಶಸ್ತಿ ಗೆದ್ದಿರುವುದು ಕಂಡುಬರುತ್ತದೆ. ಈ ಟ್ರೆಂಡ್ ಮುಂದುವರೆದರೆ, 2026ರಲ್ಲಿ ಅಗ್ರಸ್ಥಾನದಲ್ಲಿರುವ RCB ಚಾಂಪಿಯನ್ ಆಗಲಿದೆ ಎಂದು ಈ ಲೇಖನ ವಿವರಿಸುತ್ತದೆ.

IPL 2026: ಕಳೆದ 5 ಆವೃತ್ತಿಗಳ ಫಲಿತಾಂಶ; ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್
Rcb
ಪೃಥ್ವಿಶಂಕರ
|

Updated on:May 24, 2026 | 5:30 PM

Share

2026 ರ ಐಪಿಎಲ್‌ನ (IPL 2026) ಲೀಗ್ ಸುತ್ತು ಅಂತ್ಯವಾಗಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ಹಾಲಿ ಚಾಂಪಿಯನ್ ಆರ್​ಸಿಬಿ (RCB) ಕ್ವಾಲಿಫೈಯರ್ 1ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಏಕೆಂದರೆ ಉಭಯ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಅಗ್ರಸ್ಥಾನದಲ್ಲಿರುವ ಆರ್​ಸಿಬಿ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಇದೆ.

ಆರ್​ಸಿಬಿಯೇ ಚಾಂಪಿಯನ್

ಉಭಯ ತಂಡಗಳು ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಹೀಗಾಗಿ ಯಾವ ತಂಡಕ್ಕೆ ಚಾಂಪಿಯನ್ ಪಟ್ಟ ಸಿಗಲಿದೆ ಎಂದು ಹೇಳುವುದು ಕಷ್ಟಕರ. ಆದರೆ ಕಳೆದ 5 ಐಪಿಎಲ್ ಆವೃತ್ತಿಗಳಲ್ಲಿ ಯಾವ ತಂಡ ಚಾಂಪಿಯನ್ ಆಗಿದೆ ಎಂಬುದನ್ನು ಗಮನಿಸಿದರೆ, ಕಾಕತಾಳೀಯವಾಗಿ ಈ ಬಾರಿ ಆರ್​ಸಿಬಿಯೇ ಚಾಂಪಿಯನ್ ಆಗಲಿದೆ. ಅದು ಹೇಗೆ ಎಂಬುದನ್ನು ವಿವರವಾಗಿ ನೋಡುವುದಾದರೆ..

ಕಳೆದ 5 ವರ್ಷಗಳ ಅಂಕಿ ಅಂಶ ಹೀಗಿದೆ

2020 ರ ಐಪಿಎಲ್‌ನ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡ ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ 2021 ರ ಐಪಿಎಲ್​ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಸಿಎಸ್​ಕೆ, ಫೈನಲ್ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಟ್ರೋಫಿ ಗೆದ್ದುಕೊಂಡಿತ್ತು. ಹಾಗೆಯೇ 2022 ರ ಐಪಿಎಲ್​ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದ ಗುಜರಾತ್ ತಂಡ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಇದಾದ ಬಳಿಕ ನಡೆದಿದ್ದ 2023 ರ ಐಪಿಎಲ್‌ನಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಸಿಎಸ್​ಕೆ, ಗುಜರಾತ್ ತಂಡವನ್ನು ಮಣಿಸಿ ಪ್ರಶಸ್ತಿ ಮೂಡಿಗೇರಿಸಿಕೊಂಡಿತ್ತು. ನಂತರ 2024 ರ ಐಪಿಎಲ್‌ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದ ಕೆಕೆಆರ್, ಫೈನಲ್​ನಲ್ಲಿ ಸನ್‌ರೈಸರ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಇನ್ನು 2025 ರ ಆವೃತ್ತಿಯಲ್ಲಿ ಅಂದರೆ ಹಿಂದಿನ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಆರ್​ಸಿಬಿ, ಪಂಜಾಬ್ ತಂಡವನ್ನು ಸೋಲಿಸಿ ಮೊಟ್ಟ ಮೊದಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿದಿತ್ತು.

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್?

ಅಂದರೆ 2020 ರ ಐಪಿಎಲ್​ನಿಂದ ಕಳೆದ ಆವೃತ್ತಿಯವರೆಗೆ ಗಮನಿಸಿದರೆ, 2020, 2022, 2024 ರ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದ ತಂಡ ಚಾಂಪಿಯನ್ ಆದರೆ, 2021, 2023 ಹಾಗೂ 2025 ರ ಆವೃತ್ತಿಗಳಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ತಂಡಗಳು ಚಾಂಪಿಯನ್ ಆಗಿವೆ. ಇದೀಗ ಇದೇ ಟ್ರೆಂಡ್ ಮುಂದುವರೆದರೆ, 2026 ರ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ಆರ್​ಸಿಬಿಯೇ ಚಾಂಪಿಯನ್ ಆಗಲಿದೆ. ಕಳೆದ ಐದು ವರ್ಷಗಳ ಟ್ರೆಂಡ್ ಮುಂದುವರೆದು ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ ಆಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Sun, 24 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಗಾಳಿಮಳೆ ಅನಾಹುತದಿಂದ ಬಾಣಂತಿ, ಮಗು ಬುದುಕಿದ್ದೇ ಪವಾಡ!
ಗಾಳಿಮಳೆ ಅನಾಹುತದಿಂದ ಬಾಣಂತಿ, ಮಗು ಬುದುಕಿದ್ದೇ ಪವಾಡ!
ಗುರು ಸಂಚಾರ ಕನ್ಯಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಕನ್ಯಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಶಿವಾನಂದ ನೀಲಣ್ಣವರ್ ದರೋಡೆ ಮಾಡಿಲ್ಲ! ಹೂಡಿಕೆದಾರರ ವೀಡಿಯೋ ವೈರಲ್
ಶಿವಾನಂದ ನೀಲಣ್ಣವರ್ ದರೋಡೆ ಮಾಡಿಲ್ಲ! ಹೂಡಿಕೆದಾರರ ವೀಡಿಯೋ ವೈರಲ್