AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2+3+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB

Royal Challengers Bengaluru vs Gujarat Titans, Qualifier 1: IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ 2+3+ ಸಂಯೋಜನೆಯಲ್ಲಿ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.

2+3+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB
Rcb 2026 05 25t133011.952Image Credit source: Iplt20.com
ಝಾಹಿರ್ ಯೂಸುಫ್
|

Updated on: May 25, 2026 | 2:14 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಮೇ 26) ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಆರ್​ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ.

ಇಲ್ಲಿ ಆರ್​ಸಿಬಿ ತಂಡವು 6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಧರ್ಮಶಾಲಾ ಪಿಚ್ ಬ್ಯಾಟಿಂಗ್​ಗೆ ಪೂರಕ. ಹೀಗಾಗಿ ಆರ್​ಸಿಬಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಬ್ಯಾಟ್ ಬೀಸಿದರೆ, ಐದನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಆಡುವ ಬಳಗದಲ್ಲಿ ಇರಲಿದ್ದಾರೆ.

ಹಾಗೆಯೇ ಆಲ್​ರೌಂಡರ್​ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಅನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚು.  ಇನ್ನು ಬೌಲರ್​ಗಳಾಗಿ ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ಸಲಾಂ ಕಣಕ್ಕಿಳಿಯಲಿದ್ದಾರೆ.

ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಯಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಸುಯಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಬ್ಯಾಟರ್​ನನ್ನು ಬಳಸಬೇಕಿದ್ದರೆ ವೆಂಕಟೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು. ಇಲ್ಲಾ ಬೌಲರ್​ನ ಅವಶ್ಯಕತೆ ಇದ್ದರೆ ದೇವದತ್ ಪಡಿಕ್ಕಲ್ ಬದಲಿಗೆ ಸುಯಶ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರೆ.

ಅಂದರೆ ಆರ್​ಸಿಬಿ ತಂಡವು 6 ಬ್ಯಾಟರ್​ಗಳು, 2 ಆಲ್​ರೌಂಡರ್​ಗಳು ಹಾಗೂ 3 ಬೌಲರ್​ಗಳನ್ನು ಒಳಗೊಂಡಂತೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ವಿರಾಟ್ ಕೊಹ್ಲಿ
  2. ಫಿಲ್ ಸಾಲ್ಟ್
  3. ದೇವದತ್ ಪಡಿಕ್ಕಲ್
  4. ರಜತ್ ಪಾಟಿದಾರ್ (ನಾಯಕ)
  5. ಟಿಮ್ ಡೇವಿಡ್
  6. ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  7. ಕೃನಾಲ್ ಪಾಂಡ್ಯ
  8. ರೊಮಾರಿಯೊ ಶೆಫರ್ಡ್​
  9. ಜೋಶ್ ಹೇಝಲ್​ವುಡ್​
  10. ಭುವನೇಶ್ವರ್ ಕುಮಾರ್
  11. ರಾಸಿಖ್ ಸಲಾಂ
  12. ವೆಂಕಟೇಶ್ ಅಯ್ಯರ್ ಅಥವಾ ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್)

ಇದನ್ನೂ ಓದಿ: IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್,  ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್