AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB

IPL 2026 RCB vs GT: ಐಪಿಎಲ್ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ 6 ಗೆಲುವು ದಾಖಲಿಸಿರುವ ಆರ್​ಸಿಬಿ ಇದೀಗ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಅಲ್ಲದೆ ಮುಂದಿನ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು.

6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB
RCB
ಝಾಹಿರ್ ಯೂಸುಫ್
|

Updated on: Apr 29, 2026 | 2:29 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ.

ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಬೌಲರ್​ಗಳಾಗಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್ ಕಾಣಿಸಿಕೊಳ್ಳುವುದು ಖಚಿತ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಸುಯಶ್ ಶರ್ಮಾ ಕೂಡ ಸೇರ್ಪಡೆಯಾಗಲಿದ್ದಾರೆ.

ಅಂದರೆ ಆರುಬ್ಯಾಟರ್​ಗಳು, ಇಬ್ಬರು ಆಲ್​ರೌಂಡರ್​ಗಳು ಮತ್ತು ನಾಲ್ವರು ಬೌಲರ್​ಗಳೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ವಿರಾಟ್ ಕೊಹ್ಲಿ
  • ಜೇಕಬ್ ಬೆಥೆಲ್
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಜಿತೇಶ್ ಶರ್ಮಾ
  • ರೊಮಾರಿಯೊ ಶೆಫರ್ಡ್​
  • ಕೃನಾಲ್ ಪಾಂಡ್ಯ
  • ಜೋಶ್ ಹೇಝಲ್​ವುಡ್​
  • ಭುವನೇಶ್ವರ್ ಕುಮಾರ್
  • ರಾಸಿಖ್ ದಾರ್
  • ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ಫಿಲ್ ಸಾಲ್ಟ್ ಡೌಟ್!

ಬೆಂಗಳೂರಿನಲ್ಲಿ ನಡೆದ ಅಭ್ಯಾಸದ ವೇಳೆ ಗಾಯಗೊಂಡಿದ್ದ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಏಪ್ರಿಲ್ 24 ರಂದು ನಡೆದ ಗುಜರಾತ್ ಟೈಟಾನ್ಸ್​ ಮತ್ತು ಏಪ್ರಿಲ್ 27 ರಂದು ಜರುಗಿದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು.

ಇದೀಗ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಸಾಲ್ಟ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ನಾಳೆ (ಏ.30) ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇದನ್ನೂ ಓದಿ: David Miller: ಕಿಲ್ಲರ್ ಮಿಲ್ಲರ್ ವಿಶ್ವ ದಾಖಲೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್