AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಬಹುತೇಕ ಖಚಿತ

Ipl 2026, RCB vs RR: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಆರಂಭಿಕ ಪಂದ್ಯಗಳಲ್ಲಿ ಇನ್ನೂ ಕೂಡ ಸೋಲು ಕಾಣದ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್. ಈ ಎರಡು ತಂಡಗಳು ಶುಕ್ರವಾರ (ಏ.10) ಮುಖಾಮುಖಿಯಾಗಲಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಬಹುತೇಕ ಖಚಿತ
Rcb
ಝಾಹಿರ್ ಯೂಸುಫ್
|

Updated on: Apr 09, 2026 | 2:23 PM

Share

IPL 2026: ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸತತ ಗೆಲುವಿನ ಓಟವನ್ನು ಮುಂದುವರಿಸುವ ಗುರಿಯನ್ನು ಆರ್​ಸಿಬಿ ಹೊಂದಿದೆ. ಇದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

RCB ತಂಡದ ಬಲ:

ಬ್ಯಾಟರ್​ಗಳೇ ಆರ್​ಸಿಬಿ ತಂಡದ ಬಲಿಷ್ಠ ಶಕ್ತಿ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭವು ತಂಡಕ್ಕೆ ದೊಡ್ಡ ಶಕ್ತಿಯಾಗಿ ಪರಿಣಮಿಸಿದೆ. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದೇವದತ್ ಪಡಿಕ್ಕಲ್ ಕಳೆದ ಎರಡು ಮ್ಯಾಚ್​ಗಳಲ್ಲೂ ಅರ್ಧಶತಕ ಸಿಡಿಸಿದ್ದಾರೆ.

ಇನ್ನು ನಾಯಕ ರಜತ್ ಪಾಟಿದಾರ್, ಟಿಮ್ ಡೇವಿಡ್ ಅವರ ಅಬ್ಬರವನ್ನು ತಡೆಯುವುದೇ ಬೌಲರ್​ಗಳ ಮುಂದಿರುವ ಅತೀ ದೊಡ್ಡ ಸವಾಲು. ಇದಾದ ಬಳಿಕ ಅಬ್ಬರಿಸಲು ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಹಾಗೂ ರೊಮಾರಿಯೋ ಶೆಫರ್ಡ್ ಇದ್ದಾರೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ತಂಡದ ಬ್ಯಾಟಿಂಗ್​ ಲೈನಪ್​ನಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.

ಒಂದು ಬದಲಾವಣೆ:

ಕಳೆದ ಎರಡು ಮ್ಯಾಚ್​ಗಳಿಂದ ಹೊರಗುಳಿದಿದ್ದ ಜೋಶ್ ಹೇಝಲ್​ವುಡ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಹೇಝಲ್​ವುಡ್ ಆಡುವ ಬಳಗದಲ್ಲಿ ಕಾಣಿಸಿಕೊಂಡರೆ, ಜೇಕಪ್ ಡಫಿ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಆರ್​ಆರ್​ ವಿರುದ್ಧ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವ ಸಾಧ್ಯತೆ ಹೆಚ್ಚಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಫಿಲ್ ಸಾಲ್ಟ್ (ವಿಕೆಟ್ ಕೀಪರ್)
  • ವಿರಾಟ್ ಕೊಹ್ಲಿ
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಜಿತೇಶ್ ಶರ್ಮಾ
  • ಟಿಮ್ ಡೇವಿಡ್
  • ರೊಮಾರಿಯೋ ಶೆಫರ್ಡ್
  • ಕೃನಾಲ್ ಪಾಂಡ್ಯ
  • ಭುವನೇಶ್ವರ್ ಕುಮಾರ್
  • ಅಭಿನಂದನ್ ಸಿಂಗ್
  • ಜೋಶ್ ಹೇಝಲ್​ವುಡ್.
  • ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ಉಭಯ ತಂಡಗಳ ಮುಖಾಮುಖಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 34 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು 17 ಪಂದ್ಯಗಳಲ್ಲಿ. ಹಾಗೆಯೇ 14 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದ್ದವು.

ಇನ್ನು ಕಳೆದ ಕಳೆದ ಐದು ಮುಖಾಮುಖಿಯಲ್ಲಿ ಆರ್​ಸಿಬಿ  3 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್​ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು 35ನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿದೆ.

ಇದನ್ನೂ ಓದಿ: IPL 2026: ಹೀಗೆ ಮಾಡಿದ್ರೆ ಮಾತ್ರ RCB ಇಬ್ಬರನ್ನು ಜೊತೆಯಾಗಿ ಕಣಕ್ಕಿಳಿಸಬಹುದು..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

Follow Us
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ