AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರರೈಸರ್ಸ್ ಹೈದರಾಬಾದ್ (SRH) ತಂಡಗಳು ಕಣಕ್ಕಿಳಿಯಲಿವೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಪ್ರಮುಖ ಮೂವರು ವೇಗಿಗಳು ಅಲಭ್ಯರಾಗಿದ್ದಾರೆ.

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ
Rcb
ಝಾಹಿರ್ ಯೂಸುಫ್
|

Updated on: Mar 28, 2026 | 8:57 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ ಹೊರಗುಳಿದರೆ, ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಇಡೀ ಟೂರ್ನಿಗೆ ಅಲಭ್ಯರಾಗಿದ್ದಾರೆ. ಇನ್ನು ಮತ್ತೋರ್ವ ವೇಗಿ ನುವಾನ್ ತುಷಾರ ಗಾಯದ ಸಮಸ್ಯೆಯ ಕಾರಣ ಇನ್ನೂ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಈ ಮೂವರು ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇತ್ತ ಈ ಮೂವರಲ್ಲಿ ಜೋಶ್ ಹೇಝಲ್​ವುಡ್ ಹಾಗೂ ಯಶ್ ದಯಾಳ್ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಅಂದರೆ ಕಳೆದ ಬಾರಿಯ ಫೈನಲ್​ನಲ್ಲಿ ಕಣಕ್ಕಿಳಿದಿದ್ದ ಆಟಗಾರರು. ಇದೀಗ ಅವರ ಅನುಪಸ್ಥಿತಿಯಲ್ಲಿ ಆರ್​ಸಿಬಿ ಇಬ್ಬರು ಹೊಸ ಮುಖಗಳಿಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.

ಯಾರಿಗೆ ಸಿಗಲಿದೆ ಅವಕಾಶ?

ಜೇಕಬ್ ಡಫಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ನ್ಯೂಝಿಲೆಂಡ್ ವೇಗಿ ಜೇಕಬ್ ಡಫಿ ಮೊದಲ ಪಂದ್ಯದ ಮೂಲಕ ಪಾದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಜೋಶ್ ಹೇಝಲ್​ವುಡ್ ಬದಲಿಯಾಗಿ ಡಫಿ ಅಲ್ಲದೆ ಮತ್ತೋರ್ವ ವಿದೇಶಿ ವೇಗಿ ತಂಡದಲ್ಲಿಲ್ಲ. ಹೀಗಾಗಿ ಡಫಿಗೆ ಇಂದು ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು.

ಮಂಗೇಶ್ ಯಾದವ್: ಯಶ್ ದಯಾಳ್ ಟೂರ್ನಿಯಿಂದ ಹೊರಗುಳಿದಿರುವ ಆಟಗಾರ ಆರ್​ಸಿಬಿ ಮಂಗೇಶ್ ಯಾದವ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಏಕೆಂದರೆ ಮಂಗೇಶ್ ಇತ್ತೀಚಿನ ಅಭ್ಯಾಸ ಪಂದ್ಯಗಳಲ್ಲಿ ಗಮನಾರ್ಹ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಮಂಗೇಶ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಹೇಗಿರಲಿದೆ ಆರ್​ಸಿಬಿ ಪ್ಲೇಯಿಂಗ್ 11?

  • ವಿರಾಟ್ ಕೊಹ್ಲಿ
  • ಫಿಲ್ ಸಾಲ್ಟ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  • ರೊಮಾರಿಯೊ ಶೆಫರ್ಡ್
  • ಕೃನಾಲ್ ಪಾಂಡ್ಯ
  • ಭುವನೇಶ್ವರ್ ಕುಮಾರ್
  • ಜೇಕಬ್ ಡಫಿ
  • ಮಂಗೇಶ್ ಯಾದವ್
  • ಸುಯಶ್ ಶರ್ಮಾ

ಇದನ್ನೂ ಓದಿ: IPL ನಿಂದ ಇಬ್ಬರು ಆಟಗಾರರಿಗೆ ನಿಷೇಧ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

Follow Us
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ