AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಖರೀದಿಗೆ ಹಿಂದೇಟು: ಫೈನಲ್​​ ರೇಸ್​ನಲ್ಲಿ ಇಬ್ಬರು ಬೆಂಗಳೂರಿಗರು!

IPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್​ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಇದೀಗ ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ. ಅದರಂತೆ ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗಲಿದೆ.

RCB ತಂಡದ ಖರೀದಿಗೆ ಹಿಂದೇಟು: ಫೈನಲ್​​ ರೇಸ್​ನಲ್ಲಿ ಇಬ್ಬರು ಬೆಂಗಳೂರಿಗರು!
Rcb
ಝಾಹಿರ್ ಯೂಸುಫ್
|

Updated on: Mar 18, 2026 | 7:45 AM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ  RCB ಫ್ರಾಂಚೈಸಿ ಮಾರಾಟ ಪ್ರಕ್ರಿಯೆಯು ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಆದರೆ ಈ ಹಿಂದೆ ಇದ್ದ ಪ್ರಮುಖ ಕಂಪೆನಿಗಳು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಯಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಮ್ಯಾಂಚೆಸ್ಟರ್ ಯುನೈಟೆಡ್ ಮಾಲೀಕ ಅವ್ರಾಮ್ ಗ್ಲೇಝರ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನ ಅದಾರ್ ಪೂನಾವಾಲಾ ಅವರು ಆರ್​ಸಿಬಿ ಫ್ರಾಂಚೈಸಿ ಖರೀದಿಗೆ ಆಸಕ್ತಿ ತೋರಿದ್ದರು. ಆದರೆ ಇದೀಗ ಇವರು ಅಂತಿಮ ಬಿಡ್ ಸಲ್ಲಿಸದೆ ಹಿಂದೆ ಸರಿದಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಕೂಡ ಆರ್​ಸಿಬಿ ಮೇಲೆ ಕಣ್ಣಿಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಅವರ ಹೆಸರು ಕೂಡ ಕಾಣಿಸುತ್ತಿಲ್ಲ.

ಇನ್ನೊಂದೆಡೆ ಅದಾನಿ ಗ್ರೂಪ್ ಕೂಡ ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲು ಪ್ಲ್ಯಾನ್ ಹೊಂದಿದ್ದರು. ಇದೀಗ ಅದಾನಿ ಗ್ರೂಪ್​ ಕಡೆಯಿಂದಲೂ ಬಿಡ್ ಸಲ್ಲಿಕೆಯಾಗಿಲ್ಲ ಎಂದು ವರದಿಯಾಗಿದೆ.

ರೇಸ್​ನಲ್ಲಿ ಇಬ್ಬರು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಖರೀದಿಗಾಗಿ ಈಗ ಇಬ್ಬರು ಮಾತ್ರ ರೇಸ್​ನಲ್ಲಿದ್ದಾರೆ. ಇಬ್ಬರೂ ಸಹ ಬೆಂಗಳೂರು ಮೂಲದವರು ಎಂಬುದು ವಿಶೇಷ. ಅವರೆಂದರೆ…

  • EQT ಮತ್ತು ಪ್ರೇಮ್‌ಜಿ ಇನ್ವೆಸ್ಟ್: ಸ್ವೀಡನ್ ಮೂಲದ ಇಕ್ವಿಟಿ ಸಂಸ್ಥೆ ‘EQT’ ಮತ್ತು ಅಝೀಂ ಪ್ರೇಮ್‌ಜಿ ಅವರ ‘ಪ್ರೇಮ್‌ಜಿ ಇನ್ವೆಸ್ಟ್’ ಜಂಟಿಯಾಗಿ ಸುಮಾರು $2.1 ಬಿಲಿಯನ್ ಬಿಡ್ ಮಾಡಿವೆ ಎಂದು ವರದಿಯಾಗಿದೆ.
  • ರಂಜನ್ ಪೈ ಮತ್ತು ಕೆಕೆಆರ್ (KKR): ಮಣಿಪಾಲ್ ಗ್ರೂಪ್‌ನ ಡಾ. ರಂಜನ್ ಪೈ ನೇತೃತ್ವದ ತಂಡದಲ್ಲಿ ಅಮೆರಿಕದ ಕೆಕೆಆರ್ ಮತ್ತು ಸಿಂಗಾಪುರದ ಟೆಮಾಸೆಕ್ (Temasek) ಕಂಪನಿ ಕೂಡ ಅಂತಿಮ ರೇಸ್​ನಲ್ಲಿದೆ.
  • ಅಝೀಂ ಪ್ರೇಮ್​ಜಿ ಹಾಗೂ ಡಾ. ರಂಜನ್ ಪೈ ಬೆಂಗಳೂರು ಮೂಲದವರಾಗಿರುವುದರಿಂದ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲೇ ಉಳಿಯುವುದು ಖಚಿತವಾಗಿದೆ.

ರೇಸ್‌ನಿಂದ ಹೊರಬಂದವರು:

  • ಜೆಎಸ್​ಡಬ್ಲ್ಯೂ ಗ್ರೂಪ್ (ಪಾರ್ಥ್ ಜಿಂದಾಲ್)
  • ಅದಾನಿ ಗ್ರೂಪ್ (ಗೌತಮ್ ಅದಾನಿ)
  • ಪೂನಾವಾಲ ಗ್ರೂಪ್ (ಆದಾರ್ ಪೂನಾವಾಲ)
  • ನಿಖಿಲ್ ಕಾಮತ್ (ಝೆರೋಧಾ ಕಂಪೆನಿ)
  • ದೇವಯಾನಿ ಇಂಟರ್ನ್ಯಾಷನಲ್ ಗ್ರೂಪ್ (ರವಿಕಾಂತ್ ಜೈಪುರಿಯಾ)

ಆರ್​ಸಿಬಿ ಮೌಲ್ಯ ಎಷ್ಟು?

ಆರ್​ಸಿಬಿ ಫ್ರಾಂಚೈಸಿಯ ಆರಂಭಿಕ ಬಿಡ್ಡಿಂಗ್ ಮೊತ್ತ ಸುಮಾರು $2 ಬಿಲಿಯನ್ (ಅಂದಾಜು ₹18,500 ಕೋಟಿ) ಎಂದು ಘೋಷಿಸಲಾಗಿದೆ. EQT ಮತ್ತು ಪ್ರೇಮ್‌ಜಿ ಇನ್ವೆಸ್ಟ್ ಕಂಪೆನಿಯು $2.1 ಬಿಲಿಯನ್ ಬಿಡ್ ಮಾಡಿವೆ ಎಂದು ವರದಿಯಾಗಿದೆ. ಇದಾಗ್ಯೂ ರಂಜನ್ ಪೈ ಮತ್ತು ಕೆಕೆಆರ್ (KKR) ಸಲ್ಲಿಸಿರುವ ಬಿಡ್ ಮೊತ್ತದ ಮಾಹಿತಿ ಬಹಿರಂಗವಾಗಿಲ್ಲ. ಹೀಗಾಗಿ ಆರ್​ಸಿಬಿ ಯಾರ ಪಾಲಾಗಲಿದೆ ಎಂಬುದೇ ಕುತೂಹಲ.

ಇದನ್ನೂ ಓದಿ: IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

ಇಷ್ಟು ದೊಡ್ಡ ಮೊತ್ತಕ್ಕೆ ಕಾರಣವೇನು?

  • ಬ್ರ್ಯಾಂಡ್ ಮೌಲ್ಯ: ಐಪಿಎಲ್‌ನಲ್ಲಿ ಆರ್‌ಸಿಬಿ ಅತ್ಯಂತ ಹೆಚ್ಚು ಬ್ರ್ಯಾಂಡ್ ಮೌಲ್ಯ ($269 ಮಿಲಿಯನ್) ಹೊಂದಿರುವ ತಂಡವಾಗಿದೆ.
  • ಚಾಂಪಿಯನ್ ಪಟ್ಟ: 2025ರ ಐಪಿಎಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಅದರ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ.
  • ವಿರಾಟ್ ಕೊಹ್ಲಿ: ತಂಡದ ಅತಿದೊಡ್ಡ ಆಕರ್ಷಣೆಯಾಗಿರುವ ವಿರಾಟ್ ಕೊಹ್ಲಿ ಅವರ ಜನಪ್ರಿಯತೆ ಈ ದೊಡ್ಡ ಮೊತ್ತಕ್ಕೆ ಪ್ರಮುಖ ಕಾರಣ.
Follow Us
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು