AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ

RCB Trolls PBKS: 2026ರ ಐಪಿಎಲ್‌ನಲ್ಲಿ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಪಂದ್ಯವು ಸೇಡಿನ ಸಮರವಾಗಿತ್ತು. ಹಿಂದಿನ ಅವಮಾನಕರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಆರ್​ಸಿಬಿ ಇಂದು ಗೆಲುವಿನ ಮೂಲಕ ತಕ್ಕ ತಿರುಗೇಟು ನೀಡಿದೆ. ಪಂಜಾಬ್ ಅನ್ನು ಸೋಲಿಸಿ ಪ್ಲೇಆಫ್‌ಗೆ ಪ್ರವೇಶಿಸಿದ ಆರ್​ಸಿಬಿ, ತಮ್ಮ ಎಕ್ಸ್ ಖಾತೆಯಲ್ಲಿ ಮರು ಟ್ರೋಲ್ ಮಾಡುವ ಮೂಲಕ ಪಂಜಾಬ್‌ಗೆ ಸರಿಯಾಗಿಯೇ ಪಾಠ ಕಲಿಸಿತು.

PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ
Rcb Vs Pbks
ಪೃಥ್ವಿಶಂಕರ
|

Updated on:May 17, 2026 | 8:50 PM

Share

2026 ರ ಐಪಿಎಲ್​ನ (IPL 2026) ಎರಡು ಬಲಿಷ್ಠ ತಂಡಗಳಾದ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ಹೈವೋಲ್ಟೇಜ್ ಕದನದಲ್ಲಿ ಇಂದು ಮುಖಾಮುಖಿಯಾಗಿದ್ದವು. ಈ ಪಂದ್ಯ ಎರಡೂ ತಂಡಗಳಿಗೆ ಸೇಡಿನ ಸಮರವಾಗಿತ್ತು. ಒಂದೆಡೆ ಪಂಜಾಬ್​ ಕಳೆದ ಐಪಿಎಲ್ ಫೈನಲ್​ನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಇತ್ತ ಆರ್​ಸಿಬಿ ಸೋಶಿಯಲ್ ಮೀಡಿಯಾದಲ್ಲಿ ಪಂಜಾಬ್ ಮಾಡಿದ್ದ ಅವಮಾನಕ್ಕೆ ಸೇಡು ತೀರಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿದಿತ್ತು. ಅದರಂತೆ ಈ ಸೇಡಿನ ಸಮರದಲ್ಲಿ ಮೇಲುಗೈ ಸಾಧಿಸಿದ ಆರ್​ಸಿಬಿ, ಪಂಜಾಬ್ ತಂಡವನ್ನು ಸರಿಯಾಗಿಯೇ ಟ್ರೋಲ್ ಮಾಡಿದೆ.

ವಾಸ್ತವವಾಗಿ ಕಳೆದ ಐಪಿಎಲ್‌ ಫೈನಲ್​ನಲ್ಲಿ ಆರ್​ಸಿಬಿ ವಿರುದ್ಧ ಸೋತಿದ್ದ ಪಂಜಾಬ್ ಈ ಬಾರಿಯಾದರೂ ಟ್ರೋಫಿ ಗೆಲ್ಲಲಿ ಎಂಬುದು ಎಲ್ಲರ ಆಶಯವಾಗಿತ್ತು. ಅದರಂತೆ ಪಂಜಾಬ್ ಕೂಡ ಮೊದಲ 6 ಪಂದ್ಯಗಳಲ್ಲಿ ಚಾಂಪಿಯನ್ ಪ್ರದರ್ಶನ ನೀಡಿತ್ತು. ಹೀಗಾಗಿ ಪಂಜಾಬ್ ತಂಡಕ್ಕೆ ಆರ್​ಸಿಬಿ ಅಭಿಮಾನಿಗಳಿಂದಲೂ ಬೇಷರತ್ ಬೆಂಬಲ ಸಿಕ್ಕಿತ್ತು. ಆರ್​ಸಿಬಿ ತಂಡವನ್ನು ಬೆಂಬಲಿಸಿದ ರೀತಿಯಲ್ಲೇ ಪಂಜಾಬ್ ತಂಡವನ್ನು ಆರ್​​ಸಿಬಿ ಅಭಿಮಾನಿಗಳು ಬೆಂಬಲಿಸಿದ್ದರು. ಆದರೆ ಗೆಲುವಿನ ಅಮಲಿನಲ್ಲಿ ತೇಲುತ್ತಿದ್ದ ಪಂಜಾಬ್, ಸೋಶಿಯಲ್ ಮೀಡಿಯಾದಲ್ಲಿ ಅನಗತ್ಯ ಪೋಸ್ಟ್​​ವೊಂದನ್ನು ಹಂಚಿಕೊಂಡು ಆರ್​​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಂದಿನಿಂದ ಆರ್​ಸಿಬಿ ಅಭಿಮಾನಿಗಳು ಪಂಜಾಬ್ ತಂಡವನ್ನು ಕಂಡರೆ ಉರಿದು ಬೀಳುತ್ತಿದ್ದರು.

ಆರ್​ಸಿಬಿ ಕಾಲೆಳೆದಿದ್ದ ಪಂಜಾಬ್

ಆರ್​ಸಿಬಿ ಅಭಿಮಾನಿಗಳು ಈ ಮಟ್ಟಕ್ಕೆ ಕೋಪಗೊಳ್ಳಲು ಕಾರಣವೂ ಇತ್ತು. ಏಪ್ರಿಲ್ 28 ರಂದು ನಡೆದಿದ್ದ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಮೊದಲ 4.3 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 49 ರನ್ ಕಲೆಹಾಕಿತ್ತು. ಈ ಸ್ಕೋರ್ ಕಾರ್ಡ್​ ಅನ್ನು ಪಂಜಾಬ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿತ್ತು. ಈ ಪೋಸ್ಟ್ ಮೂಲಕ ಪಂಜಾಬ್, ಆರ್​ಸಿಬಿ ತಂಡವನ್ನು ಗೇಲಿ ಮಾಡುವ ಕೆಲಸ ಮಾಡಿತ್ತು.

ವಾಸ್ತವವಾಗಿ ಐಪಿಎಲ್‌ನಲ್ಲಿ ಆರ್​ಸಿಬಿ ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. 2017 ರಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನೀಡಿದ್ದ 137 ರನ್​ಗಳ ಗುರಿ ಬೆನ್ನಟ್ಟಿದ್ದ ಆರ್​ಸಿಬಿ 49 ರನ್​ಗಳಿಗೆ ಆಲೌಟ್ ಆಗಿ ಅವಮಾನಕರ ಸೋಲಿಗೆ ಕೊರಳೊಡ್ಡಿತ್ತು. ಅಂದಿನ ಕಹಿ ಘಟನೆಯನ್ನು ಆರ್​ಸಿಬಿಗೆ ಮತ್ತೆ ನೆನೆಪಿಸುವ ಕೆಲಸವನ್ನು ಪಂಜಾಬ್ ಮಾಡಿತ್ತು. ಪಂಜಾಬ್​ ಮಾಡಿದ್ದ ಪೋಸ್ಟ್​ ಆರ್​ಸಿಬಿ ಫ್ರಾಂಚೈಸಿ ಹಾಗೂ ಅದರ ಅಭಿಮಾನಿಗಳನ್ನು ಕೆರಳಿಸಿತ್ತು.

ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ

ಇಂದು ನಡೆದ ಪಂದ್ಯದಲ್ಲಿ ಪಂಜಾಬ್ ತಂಡವನ್ನು 23 ರನ್​ಗಳಿಂದ ಸೋಲಿಸಿದ ಆರ್​ಸಿಬಿ ಮೊಟ್ಟ ಮೊದಲ ತಂಡವಾಗಿ ಪ್ಲೇಆಫ್​ಗೆ ಅರ್ಹತೆ ಪಡೆದಿದೆ. ಇತ್ತ ಆರ್​ಸಿಬಿ ವಿರುದ್ಧ ಸೋತ ಪಂಜಾಬ್ ಪ್ಲೇಆಫ್‌ ರೇಸ್​ನಿಂದ ಹೊರಬೀಳುವ ಆತಂಕದಲ್ಲಿದೆ. ಇದೀಗ ಏಪ್ರಿಲ್ 28 ರಂದು ಪಂಜಾಬ್ ಮಾಡಿದ್ದ ಅವಮಾನಕರ ಪೋಸ್ಟ್​ಗೆ ತಿರುಗೇಟು ನೀಡಿರುವ ಆರ್​ಸಿಬಿ, ತನ್ನ ಎಕ್ಸ್​ ಖಾತೆಯಲ್ಲಿ ಎರಡು ಪೋಸ್ಟ್​ಗಳನ್ನು ಹಂಚಿಕೊಂಡಿದೆ. ಮೊದಲನೆಯ ಪೋಸ್ಟ್​ನಲ್ಲಿ ‘6 ಓವರ್​ಗಳಲ್ಲಿ 49 ರನ್​ ನೀಡಿ 3 ವಿಕೆಟ್ ಕಿತ್ತಿದ್ದೇವೆ’ ಎಂಬುದನ್ನು ತೊರಿಸಿಲಾಗಿದೆ. ಹಾಗೆಯೇ ಎರಡನೇ ಪೋಸ್ಟ್​ನಲ್ಲಿ ‘ಪಂಜಾಬ್ ವಿರುದ್ಧ 23 ರನ್​ಗಳಿಂದ ಗೆದ್ದಿದ್ದೇವೆ. ಆಗಿದ್ದು ಆಯ್ತು, ಮತ್ತೊಮ್ಮೆ ಹೀಗೆ ಮಾಡಬೇಡಿ’ ಎಂದು ಬರೆದು ಪೋಸ್ಟ್ ಮಾಡುವ ಮೂಲಕ ಪಂಜಾಬ್ ತಂಡ ಮುಟ್ಟಿ ನೋಡಿಕೊಳ್ಳುವಂತ ಉತ್ತರ ನೀಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sun, 17 May 26

Follow Us
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ