AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ತಂಡದ ನಾಯಕನನ್ನು ಘೋಷಿಸಿದ SRH

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಒಟ್ಟು 15 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಲ್ಲದೆ 7 ಆಟಗಾರರನ್ನು ರಿಲೀಸ್ ಮಾಡಿರುವ ಎಸ್​ಆರ್​ಹೆಚ್ ಮೊಹಮ್ಮದ್ ಶಮಿ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ತಂಡಕ್ಕೆ ಮಾರಾಟ ಮಾಡಿದ್ದಾರೆ.

IPL 2026: ತಂಡದ ನಾಯಕನನ್ನು ಘೋಷಿಸಿದ SRH
SRH
ಝಾಹಿರ್ ಯೂಸುಫ್
|

Updated on: Nov 18, 2025 | 5:17 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುವವರು ಯಾರು? ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಪ್ಯಾಟ್ ಕಮಿನ್ಸ್ ಅವರ ಗಾಯದ ಸಮಸ್ಯೆ. ಸೊಂಟದ ಮೂಳೆಯ ನೋವಿನ ಸಮಸ್ಯೆಗೀಡಾಗಿರುವ ಕಮಿನ್ಸ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಆ್ಯಶಸ್ ಸರಣಿಯ ಬಳಿಕ ಅವರು ಹೆಚ್ಚಿನ ಸಮಯ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು.

ಹೀಗಾಗಿಯೇ ಐಪಿಎಲ್ 2026 ರಲ್ಲಿ ಸನ್​ರೈಸರ್ಸ್ ಹೈದಾರಾಬಾದ್ ಪರ ಕಮಿನ್ಸ್ ಕಾಣಿಸಿಕೊಳ್ಳುವುದು ಕೂಡ ಅನುಮಾನ ಎನ್ನಲಾಗಿತ್ತು. ಅಲ್ಲದೆ ಹೆನ್ರಿಕ್ ಕ್ಲಾಸೆನ್ ಅಥವಾ ಟ್ರಾವಿಸ್ ಹೆಡ್ ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೀಗ ಎಲ್ಲಾ ವದಂತಿಗಳಿಗೆ ಖುದ್ದು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತೆರೆ ಎಳೆದಿದೆ. ಐಪಿಎಲ್ 2026 ರಲ್ಲೂ ಪ್ಯಾಟ್ ಕಮಿನ್ಸ್ ಅವರೇ ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ. ಇದರೊಂದಿಗೆ ಐಪಿಎಲ್ ಸೀಸನ್-19 ರಲ್ಲಿ ಆಸ್ಟ್ರೇಲಿಯನ್ ಆಲ್​ರೌಂಡರ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಪ್ಯಾಟ್ ಕಮಿನ್ಸ್ ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಚೊಚ್ಚಲ ಸೀಸನ್​ನಲ್ಲೇ ಎಸ್​ಆರ್​ಹೆಚ್ ಪಡೆಯನ್ನು ಫೈನಲ್​ಗೆ ಕೊಂಡೊಯ್ದಿದ್ದರು. ಆದರೆ ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಇದಾಗ್ಯೂ ಬಹುತೇಕ ಆಟಗಾರರನ್ನು ರಿಟೈನ್ ಮಾಡಿಕೊಂಡಿರುವ ಸನ್​ರೈಸರ್ಸ್ ಹೈದರಾಬಾದ್ ಐಪಿಎಲ್ 2026 ರಲ್ಲಿ ಮತ್ತೊಂದು ಪರೀಕ್ಷೆ ನಡೆಸಲು ಮುಂದಾಗಿದೆ. ಅದರಂತೆ ಈ ಬಾರಿ ಕೂಡ ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲೇ ಎಸ್​ಆರ್​ಹೆಚ್ ಪಡೆಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಸನ್​ರೈಸರ್ಸ್ ಹೈದರಾಬಾದ್ ಉಳಿಸಿಕೊಂಡಿರುವ ಆಟಗಾರರು: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸೆ, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ.

ಇದನ್ನೂ ಓದಿ: IPL 2026: ಮೂವರು ಭಾರತೀಯರು: 10 ತಂಡಗಳ ಕೋಚ್ ಫೈನಲ್

ಸನ್​ರೈಸರ್ಸ್​ ಹೈದರಾಬಾದ್ ರಿಲೀಸ್ ಮಾಡಿದ ಆಟಗಾರರು: ಮೊಹಮ್ಮದ್ ಶಮಿ (ಲಕ್ನೋ ಸೂಪರ್ ಜೈಂಟ್ಸ್‌ಗೆ ಟ್ರೇಡ್), ಆ್ಯಡಂ ಝಂಪಾ, ರಾಹುಲ್ ಚಹರ್, ವಿಯಾನ್ ಮುಲ್ಡರ್, ಅಭಿನವ್ ಮನೋಹರ್, ಅಥರ್ವ ಟೈಡೆ, ಸಚಿನ್ ಬೇಬಿ, ಸಿಮರ್ಜೀತ್ ಸಿಂಗ್.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ