AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RR: ರಾಜಸ್ಥಾನಕ್ಕೆ ಮುಳುವಾದ ಅತಿಯಾದ ಆತ್ಮವಿಶ್ವಾಸ; ಸನ್‌ರೈಸರ್ಸ್ ವಿರುದ್ಧ ಹೀನಾಯ ಸೋಲು

IPL 2026, SRH vs RR: ಐಪಿಎಲ್ 2026 ರಲ್ಲಿ ಅಜೇಯ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸನ್‌ರೈಸರ್ಸ್ ಹೈದರಾಬಾದ್ ಹೀನಾಯವಾಗಿ ಸೋಲಿಸಿದೆ. ಎಸ್‌ಆರ್‌ಎಚ್‌ ಪರ ಪದಾರ್ಪಣೆ ಮಾಡಿದ ಯುವ ವೇಗಿಗಳಾದ ಪ್ರಫುಲ್ ಹಿಂಗೆ ಮತ್ತು ಸಕೀಬ್ ಹುಸೇನ್ ತಲಾ 4 ವಿಕೆಟ್ ಪಡೆದು ರಾಜಸ್ಥಾನ್ ಬ್ಯಾಟಿಂಗ್ ಬಲವನ್ನು ಧ್ವಂಸಗೊಳಿಸಿದರು. 216 ರನ್ ಗುರಿ ಬೆನ್ನಟ್ಟಿದ ರಾಜಸ್ಥಾನ್ ಯುವ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಮಂಡಿಯೂರಿತು, ಸನ್‌ರೈಸರ್ಸ್‌ಗೆ ಐತಿಹಾಸಿಕ ಗೆಲುವು ತಂದಿತು.

SRH vs RR: ರಾಜಸ್ಥಾನಕ್ಕೆ ಮುಳುವಾದ ಅತಿಯಾದ ಆತ್ಮವಿಶ್ವಾಸ; ಸನ್‌ರೈಸರ್ಸ್ ವಿರುದ್ಧ ಹೀನಾಯ ಸೋಲು
Srh Vs Rr
ಪೃಥ್ವಿಶಂಕರ
|

Updated on:Apr 13, 2026 | 11:44 PM

Share

ಬಲಿಷ್ಠ ಬ್ಯಾಟಿಂಗ್ ಹಾಗೂ ತನ್ನ ಮಾರಕ ಬೌಲಿಂಗ್ ದಾಳಿಯಿಂದ 2026 ರ ಐಪಿಎಲ್‌ನಲ್ಲಿ (IPL 2026) ಏಕೈಕ ಅಜೇಯ ತಂಡವಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು 57 ರನ್​​ಗಳಿಂದ ಹೀನಾಯವಾಗಿ ಸೋಲಿಸುವಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ರಾಜಸ್ಥಾನ್ ತಂಡವನ್ನು ಸನ್‌ರೈಸರ್ಸ್ ತಂಡ ಸೋಲಿಸಿತು ಎನ್ನುವುದಕ್ಕಿಂತ, ಸನ್‌ರೈಸರ್ಸ್ ತಂಡದ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಇಬ್ಬರು ಯುವ ವೇಗಿಗಳಾದ ಪ್ರಫುಲ್ ಹಿಂಗೆ ಹಾಗೂ ಸಕೀಬ್ ಹುಸೇನ್ ಅವರ ಮಾರಕ ದಾಳಿಗೆ ರಾಜಸ್ಥಾನ್ ಮಂಡಿಯೂರಿತು ಎಂದರೆ ತಪ್ಪಾಗಲಾರದು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 216 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಇಬ್ಬರು ಯುವ ವೇಗಿಗಳ ದಾಳಿಗೆ ತತ್ತರಿಸಿ 156 ರನ್​ಗಳಿಗೆ ಆಲೌಟ್ ಆಯಿತು. ಸನ್‌ರೈಸರ್ಸ್ ಪರ ಪ್ರಫುಲ್ 4 ವಿಕೆಟ್ ಪಡೆದರೆ, ಸಕೀಬ್ 4 ವಿಕೆಟ್ ಕಬಳಿಸಿದರು.

ಸನ್​ರೈಸರ್ಸ್​ಗೆ ಕಳಪೆ ಆರಂಭ

ಹೈದರಾಬಾದ್‌ನ ಉಪ್ಪಲ್ ಕ್ರೀಡಾಂಗಣದಲ್ಲಿ, ಆತಿಥೇಯ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡಿತ್ತಾದರೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಅವರನ್ನು ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಜೋಫ್ರಾ ಆರ್ಚರ್ ಔಟ್ ಮಾಡಿದರು. ಟ್ರಾವಿಸ್ ಹೆಡ್ ಕೂಡ ದೊಡ್ಡ ಅಥವಾ ತ್ವರಿತ ಇನ್ನಿಂಗ್ಸ್ ಆಡಲು ವಿಫಲರಾದರು. ಆದರೆ ಅಂತಹ ಪರಿಸ್ಥಿತಿಯಲ್ಲಿ, ನಾಯಕ ಇಶಾನ್ ಕಿಶನ್ ಧೈರ್ಯಗೆಡದೆ ರಾಜಸ್ಥಾನ್ ಬೌಲರ್‌ಗಳ ಮೇಲೆ ದಾಳಿ ಮಾಡಿದರು.

ಕಿಶನ್ ನಾಯಕತ್ವದ ಇನ್ನಿಂಗ್ಸ್

ಕೇವಲ 30 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಇಶಾನ್, 44 ಎಸೆತಗಳಲ್ಲಿ 91 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಹೆನ್ರಿಕ್ ಕ್ಲಾಸೆನ್ ಜೊತೆಗೆ ಮೂರನೇ ವಿಕೆಟ್‌ಗೆ 88 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು, ಇದು ತಂಡವನ್ನು ಚೇತರಿಸಿಕೊಳ್ಳಲು ಸಹಾಯ ಮಾಡಿತು. ಇತ್ತ ಕ್ಲಾಸೆನ್ ಕೂಡ 40 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ನಂತರ ನಿತೀಶ್ ರೆಡ್ಡಿ ಮತ್ತು ಸಲೀಲ್ ಅರೋರಾ ಅಂತಿಮವಾಗಿ ದೊಡ್ಡ ಹೊಡೆತಗಳನ್ನು ಹೊಡೆದು ತಂಡವನ್ನು 217 ರನ್​​ಗಳಿಗೆ ಕೊಂಡೊಯ್ದರು.

ಪ್ರಫುಲ್ ಮೂರು ವಿಕೆಟ್

ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಪರ ಎಲ್ಲರ ಕಣ್ಣುಗಳು ವೈಭವ್ ಸೂರ್ಯವಂಶಿಯ ಮೇಲೆ ಇದ್ದವು, ಅವರಿಂದ ಎಲ್ಲರೂ ಮತ್ತೊಂದು ಬಲವಾದ ಇನ್ನಿಂಗ್ಸ್ ನಿರೀಕ್ಷಿಸುತ್ತಿದ್ದರು. ಆದರೆ ಮೊದಲ ಓವರ್‌ನಲ್ಲಿ ಪ್ರಫುಲ್ ಹಿಂಗೆ ಮಾಡಿದ್ದು ಎಲ್ಲರಿಗೂ ಆಘಾತವನ್ನುಂಟು ಮಾಡಿತು. ಮೊದಲ ಪಂದ್ಯ ಆಡಿದ ಪ್ರಫುಲ್ ಹಿಂಗೆ ಎರಡನೇ ಎಸೆತದಲ್ಲಿ ವೈಭವ್ ಅವರನ್ನು, ನಂತರ ಮುಂದಿನ ನಾಲ್ಕು ಎಸೆತಗಳಲ್ಲಿ ಧ್ರುವ್ ಜುರೆಲ್ ಸೇರಿದಂತೆ ಎರಡು ವಿಕೆಟ್ ಪಡೆದರು. ಒಟ್ಟಾರೆಯಾಗಿ, ಪ್ರಫುಲ್ ತಮ್ಮ ಮೊದಲ ಓವರ್‌ನಲ್ಲಿ ಮೂರು ವಿಕೆಟ್ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದರು.

IPL 2026: ಇದಕ್ಕಿದ್ದಂತೆ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ ಬಿಸಿಸಿಐ

4 ವಿಕೆಟ್ ಉರುಳಿಸಿದ ಶಕೀಬ್

ಮುಂದಿನ ಓವರ್‌ನಲ್ಲಿ, ಪ್ರಫುಲ್ ಜೊತೆಗೆ ಪಾದಾರ್ಪಣೆ ಮಾಡುತ್ತಿದ್ದ ಚೊಚ್ಚಲ ವೇಗಿ ಶಕೀಬ್ ಕೂಡ ಒಂದು ವಿಕೆಟ್ ಪಡೆದರು. ಆ ನಂತರ ಪ್ರಫುಲ್ ಮೂರನೇ ಓವರ್‌ನಲ್ಲಿ ಮತ್ತೊಂದು ವಿಕೆಟ್ ಪಡೆದು ರಾಜಸ್ಥಾನವನ್ನು ಸಂಪೂರ್ಣವಾಗಿ ಹಿಮ್ಮೆಟ್ಟಿಸಿದರು. ರಾಜಸ್ಥಾನ ಮೂರು ಓವರ್‌ಗಳಲ್ಲಿ ಕೇವಲ ಒಂಬತ್ತು ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಇದರ ನಂತರ, ಡೊನೊವನ್ ಫೆರೇರಾ ಮತ್ತು ರವೀಂದ್ರ ಜಡೇಜಾ ಸ್ವಲ್ಪ ಸಮಯದವರೆಗೆ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರು 122 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಆದರೆ ಈ ವೇಳೆ ದಾಳಿಗಿಳಿದ ಶಕೀಬ್ ತಮ್ಮ ಮ್ಯಾಜಿಕ್ ಪ್ರದರ್ಶಿಸಿ ಫೆರೇರಾ ಅವರನ್ನು ಔಟ್ ಮಾಡಿದರು. ಕೊನೆಗೆ ರಾಜಸ್ಥಾನ 159 ರನ್‌ಗಳಿಗೆ ಆಲೌಟ್ ಆಗಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 pm, Mon, 13 April 26

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!