AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​ಸಿಬಿಯ ಮಾಜಿ ವೇಗಿಗೆ ಬೌಲಿಂಗ್ ಕೋಚ್ ಹುದ್ದೆ ನೀಡಿದ ಕಾವ್ಯ ಮಾರನ್

Sunrisers Hyderabad: ಸನ್‌ರೈಸರ್ಸ್ ಹೈದರಾಬಾದ್ ತಂಡವು 2026ರ ಐಪಿಎಲ್​ಗೆ ಮಾಜಿ ಭಾರತೀಯ ವೇಗದ ಬೌಲರ್ ವರುಣ್ ಆರೋನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿದೆ. ಐಪಿಎಲ್​ನಲ್ಲಿ ಈ ಹಿಂದೆ ಆರ್​ಸಿಬಿ ತಂಡದ ಪರ ಆಡಿದ್ದ ವರುಣ್, ಈಗ ತಮ್ಮ ಅನುಭವವನ್ನು SRH ತಂಡಕ್ಕೆ ನೀಡಲಿದ್ದಾರೆ. ಇದರಿಂದ ತಂಡದ ಬೌಲಿಂಗ್ ವಿಭಾಗಕ್ಕೆ ಹೊಸ ಶಕ್ತಿ ಸಿಗುವ ನಿರೀಕ್ಷೆಯಿದೆ.

IPL 2026: ಆರ್​ಸಿಬಿಯ ಮಾಜಿ ವೇಗಿಗೆ ಬೌಲಿಂಗ್ ಕೋಚ್ ಹುದ್ದೆ ನೀಡಿದ ಕಾವ್ಯ ಮಾರನ್
Srh 2026
ಪೃಥ್ವಿಶಂಕರ
|

Updated on:Jul 14, 2025 | 8:20 PM

Share

2026 ಐಪಿಎಲ್​ಗೆ (IPL 2026) ಇನ್ನು ಸಾಕಷ್ಟು ಸಮಯವಿದೆ. ಆದಾಗ್ಯೂ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಈಗಾಗಲೇ ತನ್ನ ತಯಾರಿಯನ್ನು ಆರಂಭಿಸಿದೆ. ಅದರಂತೆ ಸನ್‌ರೈಸರ್ಸ್ ಹೈದರಾಬಾದ್ ತನ್ನ ಕೋಚಿಂಗ್ ವಿಭಾಗಕ್ಕೆ ಮಾಜಿ ಭಾರತೀಯ ವೇಗದ ಬೌಲರ್‌ನನ್ನು ಸೇರಿಸಿಕೊಂಡಿದೆ. ಆ ಆಟಗಾರ ಬೇರ್ಯಾರು ಅಲ್ಲ, ತನ್ನ ವೇಗದ ಬೌಲಿಂಗ್ ಮೂಲಕವೇ ಟೀಂ ಇಂಡಿಯಾದಲ್ಲಿ ಮಿಂಚಿ ಮರೆಯಾದ ವರುಣ್ ಆರೋನ್ (Varun Aaron). ಮುಂಬರುವ ಐಪಿಎಲ್‌ನಲ್ಲಿ ವರುಣ್, ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಅಂದರೆ, ಕಳೆದ ಸೀಸನ್​ನಲ್ಲಿ ತಂಡದ ಭಾಗವಾಗಿದ್ದ ಜೇಮ್ಸ್ ಫ್ರಾಂಕ್ಲಿನ್ ಬದಲಿಗೆ ವರುಣ್ ಆರೋನ್ ಅವರನ್ನು ತಂಡಕ್ಕೆ ನೇಮಕಗೊಳ್ಳಲಾಗಿದ್ದು, ಈ ಮಾಹಿತಿಯನ್ನು ಸ್ವತಃ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನೀಡಿದೆ.

ಕಾವ್ಯ ಮಾರನ್ ತಂಡದಿಂದ ಘೋಷಣೆ

ಸನ್‌ರೈಸರ್ಸ್ ಹೈದರಾಬಾದ್ ತಂಡವು ವರುಣ್ ಆರೋನ್ ಅವರನ್ನು ಐಪಿಎಲ್ 2026 ರ ಸೀಸನ್‌ಗೆ ಹೊಸ ಬೌಲಿಂಗ್ ಕೋಚ್ ಆಗಿ ಘೋಷಿಸಿದೆ . ವರುಣ್ ಆರೋನ್ ಭಾರತ ಪರ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ಆಡಿದ್ದಾರೆ . ಈ ವರ್ಷದ ಆರಂಭದಲ್ಲಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವರುಣ್​ಗೆ ಈಗ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಈ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿರುವ ಎಸ್​ಆರ್​​ಹೆಚ್, ‘‘ನಮ್ಮ ಕೋಚಿಂಗ್ ಸಿಬ್ಬಂದಿಗೆ ಆಕ್ರಮಣಕಾರಿ ಬೌಲರ್‌ಗೆ ಸ್ವಾಗತ . ವರುಣ್ ಆರೋನ್ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಹೊಸ ಬೌಲಿಂಗ್ ಕೋಚ್ ಆಗಿರುತ್ತಾರೆ’ ಎಂದು ಬರೆದುಕೊಂಡಿದೆ .

ಮಾಹಿತಿ ನೀಡಿದ ಎಸ್​ಆರ್​ಹೆಚ್

ದೇಶೀಯ ಕ್ರಿಕೆಟ್ ಮತ್ತು ಐಪಿಎಲ್‌ನಲ್ಲಿ ತಮ್ಮ ವೇಗದಿಂದ ಎಲ್ಲರನ್ನೂ ಮೆಚ್ಚಿಸಿದ್ದ ವರುಣ್​ಗೆ ಟೀಂ ಇಂಡಿಯಾದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಇದಕ್ಕೆ ಕಾರಣ ಅವರ ಇಂಜುರಿ ಸಮಸ್ಯೆ. ಈ ಸಮಸ್ಯೆಯಿಂದ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ವರ್ಷ ನಡೆಯಲಿಲ್ಲ. ಆದಾಗ್ಯೂ ಸನ್‌ರೈಸರ್ಸ್ ಹೈದರಾಬಾದ್ ಅವರ ಅನುಭವದ ಲಾಭವನ್ನು ಪಡೆಯಲು ನಿರ್ಧರಿಸಿದೆ.

ಸೆನಾ ದೇಶಗಳಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಐಪಿಎಲ್ ಗೆಲ್ಲುವುದಕ್ಕಿಂತ ದೊಡ್ಡ ಸಾಧನೆ; ಶುಭ್​ಮನ್ ಗಿಲ್

ವರುಣ್ ವೃತ್ತಿಜೀವನ

2011 ರಲ್ಲಿ ಅಂತರರಾಷ್ಟ್ರೀಯ ವೃತ್ತಿಜೀವನ ಪ್ರಾರಂಭಿಸಿದ ವರುಣ್ ಆರೋನ್, 2015 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಈ ಸಮಯದಲ್ಲಿ, ಅವರು 9 ಟೆಸ್ಟ್ ಮತ್ತು 9 ಏಕದಿನ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು, ಆಡಿದ 9 ಟೆಸ್ಟ್‌ಗಳಲ್ಲಿ ಒಟ್ಟು 18 ವಿಕೆಟ್‌ಗಳನ್ನು ಕಬಳಿಸಿದ್ದ ವರುಣ್, ಏಕದಿನ ಮಾದರಿಯಲ್ಲಿ 11 ವಿಕೆಟ್‌ಗಳನ್ನು ಉರುಳಿಸಿದ್ದರು. ಇದಲ್ಲದೆ, ವರುಣ್ 52 ಐಪಿಎಲ್ ಪಂದ್ಯಗಳನ್ನು ಆಡಿದ್ದು 50 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Mon, 14 July 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ