AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಒಂದೇ ಒಂದು ಕ್ಯಾಚ್ ಹಿಡಿದಿಲ್ಲ; ವೈಭವ್ ಫೀಲ್ಡಿಂಗ್ ಬಗ್ಗೆ ಕೈಫ್ ಕಳವಳ

Vaibhav Suryavanshi fielding: ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್‌ನ ಬ್ಯಾಟಿಂಗ್ ಬೆನ್ನೆಲುಬಾಗಿರುವ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಅವರ ಫೀಲ್ಡಿಂಗ್ ಕಳಪೆ ಮಟ್ಟದ್ದಾಗಿದೆ. ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಈ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದು, ವೈಭವ್ ಒಂದೂ ಕ್ಯಾಚ್ ಹಿಡಿಯದ ಬಗ್ಗೆ ಪ್ರಶ್ನಿಸಿದ್ದಾರೆ. ಇಡೀ ಐಪಿಎಲ್‌ನಲ್ಲಿ ಕಳಪೆ ಫೀಲ್ಡಿಂಗ್‌ನಿಂದ ಹಲವು ಪಂದ್ಯಗಳ ಫಲಿತಾಂಶ ಬದಲಾಗಿದೆ ಎಂದು ಕೈಫ್ ಕಳವಳ ವ್ಯಕ್ತಪಡಿಸಿದ್ದಾರೆ.

IPL 2026: ಒಂದೇ ಒಂದು ಕ್ಯಾಚ್ ಹಿಡಿದಿಲ್ಲ; ವೈಭವ್ ಫೀಲ್ಡಿಂಗ್ ಬಗ್ಗೆ ಕೈಫ್ ಕಳವಳ
Vaibhav Sooryavanshi
ಪೃಥ್ವಿಶಂಕರ
|

Updated on: May 18, 2026 | 9:59 PM

Share

ಐಪಿಎಲ್ 2026 (IPL 2026) ರಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ಬ್ಯಾಟಿಂಗ್‌ ಬೆನ್ನೆಲುಬಾಗಿರುವ ವೈಭವ್ ಸೂರ್ಯವಂಶಿ (Vaibhav Sooryavanshi) ನಿರಂತರವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ವೈಭವ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ರಾಜಸ್ಥಾನ್ ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಭವ್ ಅವರ ಫೀಲ್ಡಿಂಗ್‌ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಪ್ರಶ್ನೆಗಳನ್ನು ಎತ್ತಿದ್ದಾರೆ. ವಾಸ್ತವವಾಗಿ ಸೀಸನ್ ಆರಂಭದಲ್ಲಿ ವೈಭವ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಲಾಗುತ್ತಿತ್ತು. ಆದರೆ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್‌ ಮಾಡಿದ್ದ ವೈಭವ್ ಅವರ ಕಳಪೆ ಫೀಲ್ಡಿಂಗ್‌ ಬಗ್ಗೆ ಕೈಫ್ ಪ್ರಶ್ನೆಗಳನ್ನು ಎತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ ಫೀಲ್ಡಿಂಗ್ ಬಗ್ಗೆ ನಿರಾಶೆ ವ್ಯಕ್ತಪಡಿಸಿ ಮೊಹಮ್ಮದ್ ಕೈಫ್ ಮಾಜಿ ಪೋಸ್ಟ್ ಮಾಡಿದ್ದು, ‘ಐಪಿಎಲ್ ಉದ್ದಕ್ಕೂ ವೈಭವ್ ಒಂದೇ ಒಂದು ಕ್ಯಾಚ್ ಹಿಡಿದಿಲ್ಲ ಎಂದು ಅವರು ತಮ್ಮ ಪೋಸ್ಟ್​ನಲ್ಲಿ ಪ್ರಶ್ನಿಸಿದ್ದಾರೆ. ಪ್ರಸ್ತುತ ಐಪಿಎಲ್ ಆವೃತ್ತಿಯಲ್ಲಿ ವೈಭವ್ ಒಂದೇ ಒಂದು ಕ್ಯಾಚ್ ತೆಗೆದುಕೊಂಡಿಲ್ಲ. ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ವೈಭವ್ ಅವರನ್ನು ಕ್ಯಾಚಿಂಗ್ ಸ್ಥಾನದಲ್ಲಿ ನಿಯೋಜಿಸಲಾಗಿಲ್ಲ ಎಂದಿದ್ದಾರೆ.

ಕೈಫ್ ಪೋಸ್ಟ್​ನಲ್ಲಿ ಏನಿದೆ?

“ಪ್ರಸ್ತುತ ಐಪಿಎಲ್‌ನಲ್ಲಿ ಫೀಲ್ಡಿಂಗ್ ಮಟ್ಟವನ್ನು ನೋಡುವುದು ನೋವಿನ ಸಂಗತಿ” ಎಂದಿರುವ ಕೈಫ್, ಭಾನುವಾರದ ಪಂದ್ಯದಲ್ಲಿ ಯಶ್‌ರಾಜ್, ಕೆಎಲ್ ರಾಹುಲ್ ಸೊನ್ನೆಗ ನೀಡಿದ ಕ್ಯಾಚ್ ಅನ್ನು ಕೈಬಿಟ್ಟರು. ಇತ್ತ ವೈಭವ್ ಸೂರ್ಯವಂಶಿ ಕೂಡ ಕಳಪೆ ಫೀಲ್ಡಿಂಗ್ ಮಾಡಿದರು. ವೈಭವ್ ಈ ಆವೃತ್ತಿಯಲ್ಲಿ ಒಂದೇ ಒಂದು ಕ್ಯಾಚ್ ತೆಗೆದುಕೊಂಡಿಲ್ಲ. ಅವರು ಭಾರತದ ಪರ ಆಡಲು ಬಯಸಿದರೆ, ಅವರು ಫೀಲ್ಡಿಂಗ್‌ನಲ್ಲಿ ಹೆಚ್ಚು ಚುರುಕಾಗಿರಬೇಕು. ಯುವಕರಿಗೆ ಫೀಲ್ಡಿಂಗ್ ಕೌಶಲ್ಯಗಳನ್ನು ಕಲಿಸುವುದು ತಂಡದ ತರಬೇತುದಾರರ ಕರ್ತವ್ಯ. ಯುವಕರು ಫೀಲ್ಡಿಂಗ್ ಅನ್ನು ಆನಂದಿಸಬೇಕು ಎಂದಿದ್ದಾರೆ.

153 ಕ್ಯಾಚ್‌ ಡ್ರಾಪ್

ಮೊಹಮ್ಮದ್ ಕೈಫ್ ಕಳವಳಕ್ಕೆ ಕಾರಣವೂ ಇದ್ದು, ಅಂಕಿಅಂಶಗಳ ಪ್ರಕಾರ ಐಪಿಎಲ್ 2026 ರಲ್ಲಿ ಇದುವರೆಗೆ 153 ಕ್ಯಾಚ್‌ಗಳನ್ನು ಕೈಬಿಡಲಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಈ ವಿಷಯದಲ್ಲಿ ಅಗ್ರಸ್ಥಾನದಲ್ಲಿವೆ. ಕೆಲವು ತಂಡಗಳು ಪ್ರಮುಖ ಆಟಗಾರರ ಕ್ಯಾಚ್ ಕೈಚೆಲ್ಲಿದ ಪರಿಣಾಮವಾಗಿ ಪಂದ್ಯವನ್ನು ಸೋತಿವೆ. ಹೀಗಾಗಿ ಈ ಬಗ್ಗೆ ಅನೇಕ ಮಾಜಿ ಆಟಗಾರರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!