AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರನ್ನು ಮುಂದಿಟ್ಟು ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್

Hardik Pandya: ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕಳೆದ ಎರಡು ಸೀಸನ್​ಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಐಪಿಎಲ್ 2026 ರಲ್ಲಿ ಆಡಿದ 14 ಲೀಗ್ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​ ಗೆದ್ದಿದ್ದು ಕೇವಲ 4 ಪಂದ್ಯಗಳನ್ನು ಮಾತ್ರ. ಹೀಗಾಗಿಯೇ ಇದೀಗ ನಾಯಕ ಹಾರ್ದಿಕ್ ಪಾಂಡ್ಯರನ್ನು ತಂಡದಿಂದ ಕೈ ಬಿಡಲು ಮುಂಬೈ ಇಂಡಿಯನ್ಸ್ ಮುಂದಾಗಿದೆ.

ಇಬ್ಬರನ್ನು ಮುಂದಿಟ್ಟು ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್
Hardik Pandya Image Credit source: x.com
ಝಾಹಿರ್ ಯೂಸುಫ್
|

Updated on: Aug 01, 2026 | 9:41 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಸೀಸನ್- 20 ಆರಂಭಕ್ಕೂ ಮುನ್ನವೇ ಹೊಸ ಸಂಚಲನ ಶುರುವಾಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಮ್ಮದಾಗಿಸಿಕೊಳ್ಳಲು ಈಗ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿ ಆಫರ್‌ನೊಂದಿಗೆ ರೇಸ್‌ಗೆ ಧುಮುಕಿದೆ. ಪ್ರಮುಖ ಮಾಧ್ಯಮಗಳ ವರದಿಯ ಪ್ರಕಾರ, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡದಾದ ‘ಪ್ಲೇಯರ್ ಸ್ವಾಪ್’ (ಆಟಗಾರರ ಅದಲು-ಬದಲು) ಒಪ್ಪಂದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್  ‘ಮೆಗಾ ಆಫರ್’!

ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ತಂಡದಿಂದ ಸೆಳೆಯಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಮುಂಬೈ ಇಂಡಿಯನ್ಸ್‌ಗೆ ಇಬ್ಬರು ಸ್ಟಾರ್ ಆಟಗಾರರು ಹಾಗೂ ಭಾರಿ ನಗದು ಒಳಗೊಂಡ ಮೆಗಾ ಆಫರ್ ನೀಡಿದೆ. ಆ ಆಫರ್ ಎಂದರೆ…

  • ಅಕ್ಷರ್ ಪಟೇಲ್ (ಸ್ಪಿನ್ ಆಲ್‌ರೌಂಡರ್)
  • ಪೃಥ್ವಿ ಶಾ (ಸ್ಫೋಟಕ ಆರಂಭಿಕ ಆಟಗಾರ)
  • ₹10 ಕೋಟಿ ಹೆಚ್ಚುವರಿ ನಗದು

ಅಂದರೆ ಅಕ್ಷರ್ ಪಟೇಲ್ ಹಾಗೂ ಪೃಥ್ವಿ ಶಾ ಅವರನ್ನು ನೀಡುವುದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಿಳಿಸಿದೆ. ಇದರ ಜೊತೆಗೆ 10 ಕೋಟಿ ರೂ. ಹೆಚ್ಚುವರಿ ನಗದನ್ನು ಪಾವತಿಸುವುದಾಗಿ ಹೇಳಿಕೊಂಡಿದೆ.

ಮುಂಬೈ ಇಂಡಿಯನ್ಸ್ ಡಿಮ್ಯಾಂಡ್!

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಆಫರ್​ ಅನ್ನು ಮುಂಬೈ ಇಂಡಿಯನ್ಸ್ ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಬದಲಾಗಿ ಪೃಥ್ವಿ ಶಾ ಬದಲಿಗೆ ಯುವ ಆಟಗಾರ ಸಮೀರ್ ರಿಝ್ವಿ ಅವರನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿ ಶಾ ಕಳೆದ ಎರಡು ಸೀಸನ್‌ಗಳಲ್ಲಿ ಸ್ಥಿರ ಪ್ರದರ್ಶನ ನೀಡದ ಕಾರಣ ಅವರ ಬಗ್ಗೆ ಮುಂಬೈ ಇಂಡಿಯನ್ಸ್​ ಆಸಕ್ತಿ ಹೊಂದಿಲ್ಲ. ಅದರ ಬದಲಿಗೆ 2026ರ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಿಗ್-ಹಿಟ್ಟರ್ ಸಮೀರ್ ರಿಝ್ವಿ ಹಾಗೂ ಅಕ್ಷರ್ ಪಟೇಲ್ ಜೊತೆ ನೀಡಿದರೆ ಟ್ರೇಡ್ ಮಾಡಬಹುದು ಮುಂಬೈ ಇಂಡಿಯನ್ಸ್​ ತಿಳಿಸಿದೆ ಎನ್ನಲಾಗಿದೆ.

ಆದರೆ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯು ಸಮೀರ್ ರಿಝ್ವಿ ಅವರನ್ನು ಬಿಟ್ಟು ಕೊಡಲು ಸಿದ್ಧರಿಲ್ಲ. ಹೀಗಾಗಿ ಈ ಟ್ರೇಡ್ ಪ್ರಕ್ರಿಯೆ ಏನಾಗಲಿದೆ ಎಂಬುದೇ ಸದ್ಯದ ಕುತೂಹಲ.

ರೇಸ್​ನಲ್ಲಿ CSK ಮತ್ತು KKR:

ಈ ಮೊದಲು ಹಾರ್ದಿಕ್ ಪಾಂಡ್ಯ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ತೆರೆಮರೆಯ ಪ್ರಯತ್ನ ನಡೆಸಿದ್ದರು. ಮುಂಬೈ ತಂಡವು ಸಿಎಸ್‌ಕೆಯಿಂದ ಶಿವಂ ದುಬೆ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಕೇಳಿತ್ತು. ಆದರೆ ಆರ್ಥಿಕ ಮೌಲ್ಯಮಾಪನ ಮತ್ತು ಹೆಚ್ಚುವರಿ ಹಣದ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಸಿಎಸ್‌ಕೆ ಜೊತೆಗಿನ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ.

ಮತ್ತೊಂದೆಡೆ ಕೋಲ್ಕತ್ತಾ ನೈಟ್ ರೈಡರ್ಸ್ ನೇರ ನಗದು ಆಫರ್ ನೀಡಿತ್ತಾದರೂ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರಿಂಕು ಸಿಂಗ್ ಮತ್ತು ಕ್ಯಾಮರೋನ್ ಗ್ರೀನ್ ಅವರನ್ನು ಕೇಳಿದ್ದರಿಂದ ಮಾತುಕತೆ ಆರಂಭದಲ್ಲೇ ಮುರಿದುಬಿದ್ದಿದೆ. ಇದಾಗ್ಯೂ ಕೆಕೆಆರ್​ ಹಾರ್ದಿಕ್ ಪಾಂಡ್ಯ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹೊಸ ಯೋಜನೆ ರೂಪಿಸುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 12 ಸ್ಟೇಡಿಯಂ, 57 ಪಂದ್ಯಗಳು: ಹೀಗಿರಲಿದೆ ಏಕದಿನ ವಿಶ್ವಕಪ್​ ಟೂರ್ನಿ!

ಅಂದರೆ ಐಪಿಎಲ್ ಸೀಸನ್-20 ರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ. ಆದರೆ ಅದು ಯಾವ ತಂಡದ ಪರ ಎಂಬುದೇ ಸದ್ಯ ಕುತೂಹಲ.

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ