AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ

Hardik Pandya's IPL 2027 Future: 2027ರ IPL ಗೂ ಮುನ್ನ ಕಳಪೆ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ತಂಡಗಳು ಪಾಂಡ್ಯರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಪೈಪೋಟಿ ನಡೆಸುತ್ತಿವೆ. ಆಲ್‌ರೌಂಡರ್ ಆಗಿ ಪಾಂಡ್ಯರ ಸಾಮರ್ಥ್ಯ ಮತ್ತು ಜನಪ್ರಿಯತೆ ಅವರನ್ನು ಆಕರ್ಷಕ ಆಟಗಾರನನ್ನಾಗಿ ಮಾಡಿದೆ.

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ
Hardik Pandya
ಪೃಥ್ವಿಶಂಕರ
|

Updated on:Jul 01, 2026 | 4:11 PM

Share

2027 ರ ಐಪಿಎಲ್ (IPL 2027) ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ತಂಡದಿಂದ ಬಿಡುಗಡೆ ಮಾಡಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಚಿಂತಿಸಿದೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಆಟಗಾರನಾಗಿ ಹಾಗೂ ನಾಯಕನಾಗಿ ಹಾರ್ದಿಕ್ ಅವರ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆ. ಒಂದು ವೇಳೆ ಹಾರ್ದಿಕ್ ತಂಡದಿಂದ ಹೊರಬಿದ್ದರೆ ಮುಂದೆ ಯಾವ ತಂಡವನ್ನು ಸೇರುತ್ತಾರೆ ಎಂಬುದು ಈಗ ಕುತೂಹಲ ಮೂಡಿಸಿದೆ. ಏಕೆಂದರೆ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ಈಗಾಗಲೇ ಹಲವು ಫ್ರಾಂಚೈಸಿಗಳು ತಯಾರಿ ನಡೆಸಿವೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ಕೆಕೆಆರ್ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿತ್ತು. ಆದರೀಗ ಪಾಂಡ್ಯ ಖರೀದಿಗಾಗಿ ಹಲವು ತಂಡಗಳು ಮುಂದಾಗಿವೆ ಎನ್ನಲಾಗುತ್ತಿದೆ.

ಹಾರ್ದಿಕ್ ಪಾಂಡ್ಯ ಖರೀದಿಗೆ ಸದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ಮೂರೂ ತಂಡಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಈ ಹಿಂದೆ, ಕೆಕೆಆರ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸ್ಪರ್ಧೆಯಲ್ಲಿದ್ದವು. ಏಕೆಂದರೆ ಕೆಕೆಆರ್ ಹೊಸ ನಾಯಕನನ್ನು ಹುಡುಕುತ್ತಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ಒಬ್ಬೊಳ್ಳೆ ಆಲ್‌ರೌಂಡರ್​ಗಾಗಿ ಪ್ರಯತ್ನಿಸುತ್ತಿದೆ. ಆದರೆ ಈಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಹಾರ್ದಿಕ್ ಪಾಂಡ್ಯ ಖರೀದಿಗೆ ಮುಂದಾಗಿದೆ

ಹಾರ್ದಿಕ್ ಪಾಂಡ್ಯ ಹಿಂದೆ ಬಿದ್ದ ಸಿಎಸ್​ಕೆ

ಪ್ರಶ್ನೆ ಏನೆಂದರೆ, ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವುದರಿಂದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಏನು ಲಾಭ? ಎಂಬುದು. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ತಂಡಕ್ಕೆ ಅವರಂತಹ ಆಲ್‌ರೌಂಡರ್ ತೀರಾ ಅಗತ್ಯವಿದೆ. ಪಾಂಡ್ಯ ಒಬ್ಬ ವೇಗದ ಬೌಲರ್ ಮತ್ತು ಅದ್ಭುತ ಬ್ಯಾಟ್ಸ್‌ಮನ್. ಪಾಂಡ್ಯ 4 ನೇ ಕ್ರಮಾಂಕದಿಂದ 7 ನೇ ಕ್ರಮಾಂಕದವರೆಗೆ ಬ್ಯಾಟಿಂಗ್ ಮಾಡಬಹುದು. ಅಲ್ಲದೆ ಧೋನಿ ನಿರ್ಗಮನದೊಂದಿಗೆ, ಚೆನ್ನೈ ಸೂಪರ್ ಕಿಂಗ್ಸ್‌ಗೆ ಭಾರತದಾದ್ಯಂತ ಜನಪ್ರಿಯವಾಗಿರುವ ಪಾಂಡ್ಯ ಅವರ ಇಮೇಜ್ ಹೊಂದಿರುವ ಆಟಗಾರನ ಅಗತ್ಯವಿದೆ.

ಈ 2 ತಂಡಗಳಿಗೆ ಪಾಂಡ್ಯ ಬೇಕಾಗಿಲ್ಲ

ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಖರೀದಿಗೆ ಎರಡು ತಂಡಗಳು ಆಸಕ್ತಿ ಹೊಂದಿಲ್ಲ. ಆ ಎರಡು ತಂಡಗಳು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಉಳಿದೆಲ್ಲ ತಂಡಗಳು ಅವರ ಹಿಂದೆ ಬಿದ್ದಿವೆ. ಹಾರ್ದಿಕ್ ಪಾಂಡ್ಯ ಕಳೆದ ಮೂರು ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡದ ಪ್ರದರ್ಶನ ಕಳಪೆಯಾಗಿತ್ತು. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗುತ್ತಿದೆ. ಹಾರ್ದಿಕ್ ಪಾಂಡ್ಯ ಒಮ್ಮೆ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದು ಅವರ ನಾಯಕತ್ವದಲ್ಲಿ ತಂಡವು ಎರಡನೇ ಬಾರಿಗೆ ಫೈನಲ್ ತಲುಪಿತ್ತು.

ಐಪಿಎಲ್ ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ದೇವದತ್ ಪಡಿಕ್ಕಲ್

ಹಾರ್ದಿಕ್ ಪಾಂಡ್ಯ ಐಪಿಎಲ್ ವೃತ್ತಿಜೀವನ

ಹಾರ್ದಿಕ್ ಪಾಂಡ್ಯ ಇದುವರೆಗೆ 162 ಐಪಿಎಲ್ ಪಂದ್ಯಗಳನ್ನಾಡಿದ್ದು, 2955 ರನ್ ಗಳಿಸಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 82 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಆದರೆ ಐಪಿಎಲ್ 2026 ರಲ್ಲಿ ಪಾಂಡ್ಯ ಅವರ ಬ್ಯಾಟಿಂಗ್ ಕಳಪೆಯಾಗಿತ್ತು, 22.8 ರ ಸರಾಸರಿಯಲ್ಲಿ ಕೇವಲ 206 ರನ್‌ ಕಲೆಹಾಕಿದರೆ, ಬೌಲಿಂಗ್​ನಲ್ಲಿ ಆಡಿದ 10 ಪಂದ್ಯಗಳಲ್ಲಿ ಕೇವಲ ನಾಲ್ಕು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Wed, 1 July 26

Follow Us
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ