AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kyle Jamieson: ಕಳೆದ ಸೀಸನ್​ನಲ್ಲಿ 15 ಕೋಟಿಗೆ ಸೇಲ್ ಆದ ಈ ಪ್ಲೇಯರ್ ಈಬಾರಿ ಹರಾಜಾಗಿದ್ದು ಕೇವಲ 1 ಕೋಟಿಗೆ

IPL Auction 2023: ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ಆರ್​ಸಿಬಿ ಕೈಲ್ ಜೆಮಿಸನ್ ಅವರನ್ನು ಬರೋಬ್ಬರಿ 16 ಕೋಟಿ ಕೊಟ್ಟು ಖರೀದಿ ಮಾಡಿತ್ತು. ಆದರೆ, ಈ ಬಾರಿ ಇವರನ್ನು ಖರೀದಿಸಲು ಯಾವ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಅಂತಿಮವಾಗಿ ಮೂಲಬೆಲೆ 1 ಕೋಟಿಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಲಾದರು.

Kyle Jamieson: ಕಳೆದ ಸೀಸನ್​ನಲ್ಲಿ 15 ಕೋಟಿಗೆ ಸೇಲ್ ಆದ ಈ ಪ್ಲೇಯರ್ ಈಬಾರಿ ಹರಾಜಾಗಿದ್ದು ಕೇವಲ 1 ಕೋಟಿಗೆ
Kyle Jamieson IPL Auction 2023
TV9 Web
| Edited By: |

Updated on:Dec 23, 2022 | 7:15 PM

Share

ಕೊಚ್ಚಿಯಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022 Auction) 16ನೇ ಆವೃತ್ತಿಯ ಹರಾಜು ಪ್ರಕ್ರಿಯೆಯಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿವೆ. ಅಂದುಕೊಂಡಂತೆ ಕೆಲ ಸ್ಟಾರ್ ಆಟಗಾರರು ದುಬಾರಿ ಮೊತ್ತಕ್ಕೆ ಸೇಲ್ ಆದರೆ, ಇನ್ನೂ ಕೆಲ ಆಟಗಾರರು ಕಡಿಮೆ ಮೊತ್ತಕ್ಕೆ ಹಾಗೂ ಸೋಲ್ಡ್ ಆಗದೆ ಉಳಿದುಕೊಂಡರು. ಇದರ ನಡುವೆ ಕಳೆದ ಸೀಸನ್​ನಲ್ಲಿ ದಾಖಲೆಯ ಮೊತ್ತಕ್ಕೆ ಸೇಲ್ ಆಗಿದ್ದ ಪ್ಲೇಯರ್ಸ್ ಈ ಬಾರಿ ಅತಿ ಕಡಿಮೆ ಮೊತ್ತಕ್ಕೆ ಸೇಲ್ ಆದ ಪ್ರಸಂಗವೂ ನಡೆಯಿತು. ಇದಕ್ಕೆ ಉತ್ತಮ ಉದಾಹರಣೆ ಕೈಲ್ ಜೆಮಿಸನ್ (Kyle Jamieson). ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೆಮಿಸನ್ ಅವರನ್ನು ಬರೋಬ್ಬರಿ 16 ಕೋಟಿ ಕೊಟ್ಟು ಖರೀದಿ ಮಾಡಿತ್ತು. ಆರ್​ಸಿಬಿ (RCB) ಪರ ಇವರು ಸಾಧಾರಣ ಪ್ರದರ್ಶನ ತೋರಿದ್ದರು. ಆದರೆ, ಈ ಬಾರಿ ಇವರನ್ನು ಖರೀದಿಸಲು ಯಾವ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಅಂತಿಮವಾಗಿ ಇವರು ಮೂಲಬೆಲೆ 1 ಕೋಟಿಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಲಾದರು.

ಸದ್ಯ ಚೆನ್ನೈ ಸೂಪರ್ ಕಿಂಗ್ಸ್​ ಅಜಿಂಕ್ಯಾ ರಹಾನೆ ಅವರನ್ನು 50 ಲಕ್ಷ ರೂ. ಗೆ ಖರೀದಿ ಮಾಡಿದೆ. ಬೆನ್ ಸ್ಟೋಕ್ಸ್ ದಾಖಲೆಯ 16.25 ಕೋಟಿ ಮೊತ್ತಕ್ಕೆ ಪಡೆದುಕೊಂಡಿದೆ. ಶೈಕ್ ರಶೀದ್ 20 ಲಕ್ಷ ಹಾಗೂ ನಿಶಾಂತ್ ಸಿಂಧು ಅವರನ್ನು 60 ಲಕ್ಷಕ್ಕೆ ಪಡೆದುಕೊಂಡಿದೆ. ಇನ್ನು ಆರ್​ಸಿಬಿ ತಂಡ 1.5 ಕೋಟಿಗೆ ಇಂಗ್ಲೆಂಡ್​ನ ವಿಲ್ ಜ್ಯಾಕ್ಸ್ ಅವರನ್ನು ಖರೀದಿಸಿದೆ. ಜೊತೆಗೆ 75 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ವೇಗಿ ರೀಸ್ ಟೋಪ್ಲಿಯನ್ನು ಆರ್​ಸಿಬಿ ತಂಡವು 1 ಕೋಟಿ 90 ಲಕ್ಷ ರೂ. ನೀಡಿ ಖರೀದಿಸಿದೆ. ಇಂಗ್ಲೆಂಡ್​ನ ಯುವ ಆಟಗಾರ ವಿಲ್ ಜಾಕ್ಸ್ ಅವರನ್ನು 3.20 ಕೋಟಿ ರೂ. ನೀಡಿ ಖರೀದಿಸಿದೆ.

ಐಪಿಎಲ್​ ಮಿನಿಹರಾಜು ಪ್ರಕ್ರಿಯೆ ಲೈವ್​

ಇದನ್ನೂ ಓದಿ
Image
IPL 2023 RCB Squad: ಆರ್​ಸಿಬಿ ಪರ ಕಣಕ್ಕಿಳಿಯುವ 8 ವಿದೇಶಿ ಆಟಗಾರರು ಇವರೇ..!
Image
Will Jacks: RCB ತಂಡಕ್ಕೆ ಸ್ಪೋಟಕ ದಾಂಡಿಗ ಎಂಟ್ರಿ
Image
Manish Pandey: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಮನೀಶ್ ಪಾಂಡೆ: ಆಸಕ್ತಿ ತೋರದ ಆರ್​ಸಿಬಿ
Image
Himanshu Sharma: RCB ತಂಡಕ್ಕೆ ಯುವ ಆಟಗಾರ ಆಯ್ಕೆ

ದಾಖಲೆ ಮೊತ್ತಕ್ಕೆ ಸ್ಯಾಮ್ ಸೇಲ್:

ಐಪಿಎಲ್ 2023 ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಕುರ್ರನ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​, ಎಸ್​ಆರ್​​ಹೆಚ್​, ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಆದರೆ, ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ. ನೀಡುವ ಮೂಲಕ ಸ್ಯಾಮ್ ಕುರ್ರನ್ ಅವರನ್ನು ತಮ್ಮದಾಗಿಸಿಕೊಂಡಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ ಸ್ಯಾಮ್ ಪಾಲಾಗಿದೆ. ಇದರ ನಡುವೆ ಆಸ್ಟ್ರೇಲಿಯಾದ ಕ್ಯಾಮ್ರೊನ್ ಗ್ರೀನ್ 17.5 ಕೋಟಿ ನೀಡಿ ಮುಂಬೈ ಇಂಡಿಯನ್ಸ್ ಖರೀದಿಸಿದೆ.

ಡೆಲ್ಲಿ ಪಾಲಾದ ಮನೀಶ್ ಪಾಂಡೆ:

ಕಳೆದ ಕೆಲವು ಸೀಸನ್​ಗಳಿಂದ ಮಂಕಾಗಿರುವ ಮನೀಶ್ ಪಾಂಡೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿದ್ದಾರೆ. ಕನ್ನಡಿದ ಮನೀಶ್​ರನ್ನು ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ದೊಡ್ಡ ಮನಸ್ಸು ಮಾಡಲಿಲ್ಲ. ಜೊತೆಯೆ ಆರ್​ಸಿಬಿ ಖಾತೆಯಲ್ಲಿ ದೊಡ್ಡ ಮೊತ್ತ ಇಲ್ಲದ ಕಾರಣ ಕಡಿಮೆ ಮೊತ್ತಕ್ಕೆ ಸಿಗುವ ಆಟಗಾರರನ್ನು ಖರೀದಿಸುತ್ತಿದೆ. ಸದ್ಯ 1 ಕೋಟಿ ಮೂಲಬೆಲೆ ಹೊಂದಿದ್ದ ಪಾಂಡೆ 2.4 ಕೋಟಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿದ್ದಾರೆ. ಜಮ್ಮು-ಕಾಶ್ಮೀರದ ಪ್ರತಿಭಾವಂತ ಆಲ್ರೌಂಡರ್ ವಿವ್ರಂತ್ ಶರ್ಮಾ ಅವರು ಅಚ್ಚರಿಯ ಮೊತ್ತಕ್ಕೆ ಹರಾಜಾಗಿದ್ದಾರೆ. 20 ಲಕ್ಷ ಮೂಲಬೆಲೆ ಹೊಂದಿದ್ದ ವಿವ್ರಂತ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ 2.6 ಕೋಟಿ ಕೊಟ್ಟು ಖರೀದಿ ಮಾಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 23 December 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ