AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2024: ಹರಾಜಿನಲ್ಲಿ ಈ ಆಟಗಾರರೇ ನಮ್ಮ ಟಾರ್ಗೆಟ್ ಎಂದ ಆರ್​ಸಿಬಿ ಡೈರೆಕ್ಟರ್

IPL Auction 2024: ಹರಾಜಿಗೂ ಮುನ್ನ ತಂಡದ ಯೋಜನೆಯ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಮೊ ಬಾಬಟ್, ‘ಮುಂಬರುವ ಐಪಿಎಲ್ ಹರಾಜಿನಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಬೆಂಬಲಿಸಲು ಹೆಚ್ಚಿನ ಬೌಲಿಂಗ್ ಆಯ್ಕೆಗಳನ್ನು ಪಡೆದುಕೊಳ್ಳುವುದು ತಂಡದ ಪ್ರಮುಖ ಆದ್ಯತೆಯಾಗಿದೆ ಎಂದಿದ್ದಾರೆ.

IPL Auction 2024: ಹರಾಜಿನಲ್ಲಿ ಈ ಆಟಗಾರರೇ ನಮ್ಮ ಟಾರ್ಗೆಟ್ ಎಂದ ಆರ್​ಸಿಬಿ ಡೈರೆಕ್ಟರ್
ಆರ್​ಸಿಬಿ
ಪೃಥ್ವಿಶಂಕರ
|

Updated on: Dec 18, 2023 | 7:40 PM

Share

ಐಪಿಎಲ್ 2024ರ ಹರಾಜಿನ (IPL Auction 2024) ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ಅಂದರೆ ಡಿಸೆಂಬರ್ 19 ರಂದು ದುಬೈನಲ್ಲಿ ಮಿನಿ ಹರಾಜು ನಡೆಯಲ್ಲಿದೆ. ಹರಾಜಿನಲ್ಲಿರುವ 333 ಆಟಗಾರರ ಪೈಕಿ 77 ಆಟಗಾರರು ಖರೀದಿದಾರರನ್ನು ಪಡೆಯಲ್ಲಿದ್ದಾರೆ. ಎಲ್ಲಾ 10 ತಂಡಗಳು ಯಾವ ಆಟಗಾರನ ಮೇಲೆ ಹಣದ ಹೂಡಿಕೆ ಮಾಡಬೇಕು ಎಂಬುದನ್ನು ಈಗಾಗಲೇ ನಿರ್ಧರಿಸಿವೆ. ಅದರಲ್ಲಿ ಆರ್​ಸಿಬಿ (RCB) ಕೂಡ ವಿಭಿನ್ನ ಯೋಜನೆಯೊಂದಿಗೆ ಹರಾಜಿಗಿಳಿಯುತ್ತಿದೆ ಎಂಬುದನ್ನು ತಂಡದ ನಿರ್ದೇಶಕ ಮೊ ಬೊಬಾಟ್ (Director of Cricket Mo Bobat) ಹೇಳಿಕೊಂಡಿದ್ದಾರೆ. ಪ್ರಸ್ತುತ ಆರ್​ಸಿಬಿ ಒಟ್ಟು 18 ಆಟಗಾರರನ್ನು ಉಳಿಸಿಕೊಂಡಿದೆ. ಹಾಗೆಯೇ ಹರಾಜಿಗೂ ಮುನ್ನ 11 ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದೆ.

ತಂಡದ ಬೌಲಿಂಗ್ ವಿಭಾಗ ದುರ್ಬಲಗೊಂಡಿದೆ

ಹರಾಜಿಗೂ ಮುನ್ನ ತಂಡದ ಯೋಜನೆಯ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಮೊ ಬಾಬಟ್, ‘ಮುಂಬರುವ ಐಪಿಎಲ್ ಹರಾಜಿನಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಬೆಂಬಲಿಸಲು ಹೆಚ್ಚಿನ ಬೌಲಿಂಗ್ ಆಯ್ಕೆಗಳನ್ನು ಪಡೆದುಕೊಳ್ಳುವುದು ತಂಡದ ಪ್ರಮುಖ ಆದ್ಯತೆಯಾಗಿದೆ. ಪ್ರಸ್ತುತ ಆರ್​ಸಿಬಿ ಬಿಡುಗಡೆ ಮಾಡಿರುವ ಆಟಗಾರರ ಪೈಕಿ ವೇಗದ ಬೌಲರ್ ಹರ್ಷಲ್ ಪಟೇಲ್, ಶ್ರೀಲಂಕಾದ ಲೆಗ್ ಸ್ಪಿನ್ನರ್ ವನಿಂದು ಹಸರಂಗಾ ಮತ್ತು ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್ವುಡ್ ಸೇರಿದ್ದಾರೆ. ಇದರಿಂದಾಗಿ ತಂಡದ ಬೌಲಿಂಗ್ ವಿಭಾಗ ದುರ್ಬಲಗೊಂಡಿದೆ. ಹೀಗಾಗಿ ಸಿರಾಜ್ ಅವರನ್ನು ಬೆಂಬಲಿಸಲು ಸಾಗರೋತ್ತರ ಬೌಲರ್‌ಗಳು ಸೇರಿದಂತೆ ಇನ್ನೂ ಕೆಲವು ಬೌಲಿಂಗ್ ಆಯ್ಕೆಗಳನ್ನು ತಂಡದಲ್ಲಿ ಸೇರಿಸುವುದು ನಮಗೆ ನಿಜವಾದ ಆದ್ಯತೆಯಾಗಿದೆ ಎಂದಿದ್ದಾರೆ.

IND vs SA: ಏಕದಿನ ಸರಣಿಯಿಂದ ಹಿಂದೆ ಸರಿದ ದೀಪಕ್ ಚಹರ್; ಆರ್​ಸಿಬಿ ಹುಲಿಗೆ ಒಲಿದ ಅದೃಷ್ಟ..!

ಅನುಭವಿ ಬ್ಯಾಟ್ಸ್‌ಮನ್‌ಗಳ ದಂಡೆ ಇದೆ

ಮುಂದುವರೆದು, ನಮ್ಮಲ್ಲಿ ಹಲವು ಸ್ಥಳೀಯ ಸ್ಪಿನ್ನರ್‌ಗಳ ಆಯ್ಕೆ ಇದೆ. ಅವರಲ್ಲಿ ಕೆಲವರು ಕಳೆದ ಒಂದು ಅಥವಾ ಎರಡು ವರ್ಷಗಳಲ್ಲಿ ಸೀಮಿತ ಅವಕಾಶಗಳನ್ನು ಪಡೆದಿದ್ದಾರೆ. ಮುಂದಿನ ಆವೃತ್ತಿಗಳಲ್ಲಿ ಅವರು ತಂಡದ ಪ್ರಮುಖ ಸ್ಪಿನ್ ಆಯ್ಕೆಯಾಗಬಹುದು. ಇನ್ನು ತಂಡದಲ್ಲಿ ಅನುಭವಿ ಬ್ಯಾಟ್ಸ್‌ಮನ್‌ಗಳ ದಂಡೆ ಇದೆ. ಅಲ್ಲದೆ ಮಧ್ಯಮ ಕ್ರಮಾಂಕವನ್ನು ಬಲಪಡಿಸುವ ಸಲುವಾಗಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದೇವೆ.

ಏಳು ಸ್ಲಾಟ್‌ಗಳು ಖಾಲಿ

ನಮ್ಮ ತಂಡದ ಅಗ್ರ ಕ್ರಮಾಂಕ ತುಂಬಾ ಬಲಿಷ್ಠವಾಗಿದೆ. ಆಟಗಾರರನ್ನು ಬಿಡುಗಡೆ ಮಾಡುವ ನಮ್ಮ ನಿರ್ಧಾರದ ಭಾಗವೆಂದರೆ ಮಧ್ಯಮ ಕ್ರಮಾಂಕವನ್ನು ಬಲಪಡಿಸಲು ಪ್ರಯತ್ನಿಸುವುದಾಗಿತ್ತು. ಅದರಂತೆ ಕ್ಯಾಮರೂನ್ ಗ್ರೀನ್ ಅವರನ್ನು ತಂಡಕ್ಕೆ ಕರೆತಂದಿರುವುದು ಮಧ್ಯಮ ಕ್ರಮಾಂಕವನ್ನು ಬಲ ಪಡಿಸಿದೆ. ತಂಡದಲ್ಲಿ ಒಟ್ಟು ಏಳು ಸ್ಲಾಟ್‌ಗಳು ಖಾಲಿ ಇದ್ದು, ಆದಷ್ಟು ಉತ್ತಮ ಆಟಗಾರರನ್ನು ತಂಡಕ್ಕೆ ಖರೀದಿ ಮಾಡಲಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ