‘ಐಪಿಎಲ್‌ನಲ್ಲಿ ಆಡಿದ ಅನುಭವ ಪ್ರಯೋಜನಕ್ಕೆ ಬಂತು’; ಗಾಯದ ಮೇಲೆ ಉಪ್ಪು ಸುರಿದ ಜೋಸ್ ಬಟ್ಲರ್

T20 World Cup 2022: ನಾವು ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಗದ್ದಲವನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡಿತು.

‘ಐಪಿಎಲ್‌ನಲ್ಲಿ ಆಡಿದ ಅನುಭವ ಪ್ರಯೋಜನಕ್ಕೆ ಬಂತು’; ಗಾಯದ ಮೇಲೆ ಉಪ್ಪು ಸುರಿದ ಜೋಸ್ ಬಟ್ಲರ್
Jos Buttler
Follow us
| Updated By: ಪೃಥ್ವಿಶಂಕರ

Updated on: Nov 11, 2022 | 1:15 PM

2022 ರ ಟಿ20 ವಿಶ್ವಕಪ್​ (T20 World Cup 2022) ಅನ್ನು ಟೀಂ ಇಂಡಿಯಾ ಆರಂಭಿಸಿದ ರೀತಿ ಎಲ್ಲರಲ್ಲೂ ಭರವಸೆ ಮೂಡಿಸಿತ್ತು. ಅದರೆ ಕೇವಲ 18 ದಿನಗಳಲ್ಲಿ, ಈ ಭರವಸೆ ಸಂಪೂರ್ಣವಾಗಿ ನಾಶವಾಗಿದೆ. ನವೆಂಬರ್ 10 ರ ಗುರುವಾರ ಅಡಿಲೇಡ್‌ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಟೀಮ್ ಇಂಡಿಯಾವನ್ನು ಸೋಲಿಸಿ, ವಿಶ್ವಕಪ್​ನಿಂದ ಹೊರಹಾಕಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ (Jos Buttler) ಮತ್ತು ಅಲೆಕ್ಸ್ ಹೇಲ್ಸ್ (Alex Hales) ಅವರ ಅಬ್ಬರದ ಬ್ಯಾಟಿಂಗ್ ಇಂಗ್ಲೆಂಡ್‌ಗೆ ಈ ಜಯವನ್ನು ತಂದುಕೊಟ್ಟಿತು. ಫೈನಲ್ ತಲುಪಿದ ತಕ್ಷಣ, ಭಾರತೀಯರ ಸೋಲಿನ ಗಾಯದ ಮೇಲೆ ಉಪ್ಪು ಸುರಿಯುವ ಕೆಲಸ ಮಾಡಿದ ಇಂಗ್ಲೆಂಡ್ ನಾಯಕ ಬಟ್ಲರ್, ನನ್ನ ಈ ಆಟಕ್ಕೆ ಐಪಿಎಲ್ (IPL) ಸಹಾಯ ಮಾಡಿತು ಎಂದಿದ್ದಾರೆ.

ಗುರುವಾರ ಅಡಿಲೇಡ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 168 ರನ್ ಗಳಿಸಲಷ್ಟೇ ಶಕ್ತವಾಯಿತು. ಅದೇ ಪಿಚ್‌ನಲ್ಲಿ ಇಂಗ್ಲೆಂಡ್‌ ಆರಂಭಿಕ ಜೋಡಿ ಬಟ್ಲರ್ ಮತ್ತು ಹೇಲ್ಸ್ ಕೇವಲ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಈ ಗುರಿಯನ್ನು ಸಾಧಿಸಿದರು. ಈ ಇಡೀ ಪಂದ್ಯದಲ್ಲಿ ಭಾರತದ ಬೌಲರ್‌ಗಳಿಗೆ ಆಂಗ್ಲ ಬ್ಯಾಟರ್​ಗಳು ವಿಕೆಟ್ ಪಡೆಯುವ ಯಾವುದೇ ಅವಕಾಶಗಳನ್ನು ನೀಡಲಿಲ್ಲ. ಅಲ್ಲದೆ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಯಾವುದೇ ರೀತಿಯ ಒತ್ತಡಕ್ಕೆ ಸಿಲುಕಿಸಲು ಟೀಂ ಇಂಡಿಯಾ ಬೌಲರ್​ಗಳಿಗೆ ಸಾಧ್ಯವಾಗಲಿಲ್ಲ. ಅಡಿಲೇಡ್ ಓವಲ್ ಸ್ಟೇಡಿಯಂನಲ್ಲಿ ಭಾರತೀಯ ಅಭಿಮಾನಿಗಳು ಕೂಡ ತಂಡಕ್ಕೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ.

ಐಪಿಎಲ್‌ನಲ್ಲಿ ಆಡಿದ ಅನುಭವ ಪ್ರಯೋಜನಕ್ಕೆ ಬಂತು

ಏಕಪಕ್ಷೀಯ ರೀತಿಯಲ್ಲಿ ಭಾರತವನ್ನು ಸೋಲಿಸಿದ ನಂತರ ಮಾತನಾಡಿದ ಇಂಗ್ಲೆಂಡ್ ನಾಯಕ ಬಟ್ಲರ್, ಇಂಡಿಯನ್ ಪ್ರೀಮಿಯರ್ ಲೀಗ್‌ನ ಅನುಭವವನ್ನು ಉಲ್ಲೇಖಿಸಿದರು. ಐಪಿಎಲ್‌ನಲ್ಲಿ ಒತ್ತಡದ ಪಂದ್ಯವನ್ನು ಆಡಿದ ಅನುಭವ ಮತ್ತು ಅಭಿಮಾನಿಗಳು ತೋರುವ ಅಪಾರ ಬೆಂಬಲದಿಂದ ಇದು ಸಾಧ್ಯವಾಯಿತು. ನಾವು ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಗದ್ದಲವನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡಿತು. ವಿಶೇಷವಾಗಿ ನಿರ್ದಿಷ್ಟ ಆಟಗಾರನು ಮೈದಾನಕ್ಕೆ ಬಂದಾಗ ಅಥವಾ ಅವರು ಬ್ಯಾಟ್ ಮಾಡುವಾಗ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದು ನಮಗೆ ಐಪಿಎಲ್​ನಲ್ಲಿ ಅರಿವಿಗೆ ಬಂದಿದೆ ಎಂದು ಬಟ್ಲರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್​ನಿಂದ ಔಟ್; ದ್ರಾವಿಡ್​ ಟೀಂಗೆ ವಿಶ್ರಾಂತಿ, ಲಕ್ಷ್ಮಣ್​ಗೆ ಕೋಚಿಂಗ್ ಜವಾಬ್ದಾರಿ

ಬಿಬಿಎಲ್ ಅನುಭವದ ಧಾರೆ ಎರೆದ ಹೇಲ್ಸ್

ಕ್ಯಾಪ್ಟನ್ ಬಟ್ಲರ್ ಸೇರಿದಂತೆ ಪ್ರಸ್ತುತ ಇಂಗ್ಲೆಂಡ್ ತಂಡದ ಹಲವು ಆಟಗಾರರು ಐಪಿಎಲ್‌ನಲ್ಲಿ ದೀರ್ಘಕಾಲದಿಂದ ಆಡುತ್ತಿದ್ದಾರೆ. ಐಪಿಎಲ್ ಮಾತ್ರವಲ್ಲ, ಬಿಗ್ ಬ್ಯಾಷ್ ಲೀಗ್, ಪಾಕಿಸ್ತಾನ್ ಸೂಪರ್ ಲೀಗ್ ಅಥವಾ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ ಅನುಭವವೂ ಈ ತಂಡದ ಆಟಗಾರರಿಗೆ ನೆರವಾಗಿದೆ. ಅಲೆಕ್ಸ್ ಹೇಲ್ಸ್ ಆಸ್ಟ್ರೇಲಿಯಾದ ಬಿಬಿಎಲ್​ ಲೀಗ್​ನಲ್ಲಿ ನಿರಂತರವಾಗಿ ಆಡುತ್ತಿದ್ದಾರೆ. ಅಲ್ಲದೆ ವಿಶೇಷವಾಗಿ ಕಳೆದ ಕೆಲವು ಸೀಸನ್​ಗಳಲ್ಲಿ ಹೇಲ್ಸ್ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾದ ಪರಿಸ್ಥಿತಿಗಳಲ್ಲಿ ಆಡಿದ ಅದೇ ಅನುಭವವು ಈ ವಿಶ್ವಕಪ್‌ನಲ್ಲಿ ಅವರಿಗೆ ತುಂಬಾ ಸಹಾಯ ಮಾಡಿದೆ. ಹೇಲ್ಸ್ ಭಾರತದ ವಿರುದ್ಧ ಕೇವಲ 47 ಎಸೆತಗಳಲ್ಲಿ 86 ರನ್ ಗಳಿಸಿ ಅಜೇಯರಾಗಿ ಉಳಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ