AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಆಡಲು ಪಾಕಿಸ್ತಾನ ಸೂಪರ್​ ಲೀಗ್​​ಗೆ ಶಾಕ್ ಮೇಲೆ ಶಾಕ್ ಕೊಟ್ಟ ವಿದೇಶಿ ಆಟಗಾರರು

ಐಪಿಎಲ್‌ನ ಹೆಚ್ಚಿದ ಜನಪ್ರಿಯತೆಯಿಂದಾಗಿ ಅನೇಕ ವಿದೇಶಿ ಆಟಗಾರರು ಪಾಕಿಸ್ತಾನ ಸೂಪರ್ ಲೀಗ್ (PSL) ತೊರೆದು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆಡಲು ಮುಂದಾಗಿದ್ದಾರೆ. PSLಗೆ ಶಾಕ್ ನೀಡಿ ಐಪಿಎಲ್‌ಗೆ ಸೇರಿಕೊಂಡಿದ್ದಾರೆ. ಇದು PSLಗೆ ದೊಡ್ಡ ಹಿನ್ನಡೆಯಾಗಿದ್ದು, ಐಪಿಎಲ್ ಜಾಗತಿಕ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದೆ ಎಂಬುದನ್ನು ತೋರಿಸುತ್ತದೆ.

ಐಪಿಎಲ್ ಆಡಲು ಪಾಕಿಸ್ತಾನ ಸೂಪರ್​ ಲೀಗ್​​ಗೆ ಶಾಕ್ ಮೇಲೆ ಶಾಕ್ ಕೊಟ್ಟ ವಿದೇಶಿ ಆಟಗಾರರು
ಪಿಎಸ್​​ಎಲ್
ರಾಜೇಶ್ ದುಗ್ಗುಮನೆ
|

Updated on: Mar 26, 2026 | 12:59 PM

Share

ಪಾಕಿಸ್ತಾನ ಸೂಪರ್ ಲೀಗ್ ಇಂದಿನಿಂದ (ಮಾರ್ಚ್ 26) ಆರಂಭ ಆಗುತ್ತಿದೆ. ಅದೇ ರೀತಿ ಶನಿವಾರದಿಂದ (ಮಾರ್ಚ್ 28) ಐಪಿಎಲ್ ಆರಂಭ ಆಗಲಿದೆ. ಪಿಎಸ್​​ಎಲ್​​ಗೆ ಹೋಲಿಕೆ ಮಾಡಿದರೆ ಐಪಿಎಲ್ ಜನಪ್ರಿಯತೆ ತುಂಬಾನೇ ಹೆಚ್ಚಿದೆ. ಈಗ ಐಪಿಎಲ್ ಆಡಬೇಕು ಎಂದು ಅನೇಕ ಆಟಗಾರರು ಪಿಎಸ್​​​ಎಲ್​​ನ ತೊರೆಯುತ್ತಿದ್ದಾರೆ. ಇದು ಪಾಕಿಸ್ತಾನ್ ಪ್ರೀಮಿಯರ್ ಲೀಗ್​​​ಗೆ ಶಾಕಿಂಗ್ ಎನಿಸಿದೆ. ಐಪಿಎಲ್​ ಸೇರಲು ಅವರು ಪಿಎಸ್​ಎಲ್ ತೊರೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಜಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಜರಬಾನಿ ಅವರು ಇತ್ತೀಚೆಗೆ ಪಿಎಸ್​​ಎಲ್​ ತೊರೆದು ಐಪಿಎಲ್ ಆಡಲು ಬಂದಿದ್ದರು. ಅದೇ ರೀತಿ ಶ್ರೀಲಂಕಾದ ದಸುನ್ ಶನಕ ಹಾಗೂ ಆಸ್ಟ್ರೇಲಿಯಾದ ಸ್ಪೆನ್ಸರ್ ಜಾನ್ಸನ್ ಐಪಿಎಲ್ ಸೇರಲು ಪಿಎಸ್​​​ಎಲ್​ ತೊರೆದಿದ್ದರು. ಈಗ ದಕ್ಷಿಣ ಆಪ್ರಿಕಾದ ಫಾಸ್ಟ್​ ಬೌಲರ್ ಒಟ್ನೀಲ್ ಬಾರ್ಟ್‌ಮನ್ ಪಿಎಸ್​​ಎಲ್ ತೊರೆದಿದ್ದಾರೆ. ಅವರು ಪಾಕಿಸ್ತಾನ ಸೂಪರ್ ಲೀಗ್​​​​​ನಲ್ಲಿ ಹೈದರಾಬಾದ್ ಕಿಂಗ್ಸ್​ ತಂಡವನ್ನು ಪ್ರತಿನಿಧಿಸಬೇಕಿತ್ತು. ಈಗ ಅವರು ಹೊರ ಹೋಗಿದ್ದರಿಂದ ಮಹೇಶ್ ತೀಕ್ಷಣ ಅವರನ್ನು ಆಯ್ಕೆ ಮಾಡಿಕೊಳ್ಳಲು ತಂಡ ಮುಂದಾಗಿದೆ.

ಗಾಯದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದಿಂದ ಹೊರಗುಳಿದಿದ್ದ ನಾಥನ್ ಎಲಿಸ್ ಅವರ ಜಾಗವನ್ನು ಒಟ್ನೀಲ್ ಬಾರ್ಟ್‌ಮನ್ ತುಂಬಲಿದ್ದಾರೆ ಎನ್ನಲಾಗಿತ್ತು. ಆದರೆ, ಸ್ಪೆನ್ಸರ್ ಜಾನ್​​ಸನ್ ಅವರು ಈ ಸ್ಥಾನ ತುಂಬಿದ್ದಾರೆ. ಸದ್ಯ ಅವರು ಪಿಎಸ್​​ಎಲ್​ ತೊರೆಯಲು ಐಪಿಎಲ್ ಕಾರಣ ಎಂದು ಹೇಳಲಾಗಿತ್ತು. ಈಗಾಗಲೇ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆ ಆಗಿದೆ. ಸ್ಯಾಮ್ ಕರನ್ ಇಂಜೂರಿಯಿಂದ ತಂಡದಿಂದ ಹೊರ ಹೋಗಿದ್ದಾರೆ. ಈ ಸ್ಥಾನಕ್ಕೆ ದಸುನ್ ಶನಕ ಬಂದಿದ್ದಾರೆ.

ಇದನ್ನೂ ಓದಿ: ಆರ್​​ಸಿಬಿ ಹೆಸರು ಬದಲಾವಣೆ ವಿಷಯ; ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟ ಅನನ್ಯಾ ಬಿರ್ಲಾ

ಮಾರ್ಚ್ 28ರಂದು ಈ ಸೀಸನ್ ಮೊದಲ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹಾಗೂ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ. ಈಗಾಗಲೇ ಪಂದ್ಯಕ್ಕೆ ಎಲ್ಲಾ ಸಿದ್ಧತೆ ನಡೆದಿದೆ.

ಇನ್ನಷ್ಟು ಕ್ರಿಕೆಟ್​​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ