AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್​ಗಾಗಿ ಸ್ಫೋಟಕ ಆರಂಭಿಕನನ್ನೇ ಬಿಟ್ಟುಕೊಡಲು ಮುಂದಾದ ರಾಜಸ್ಥಾನ್ ರಾಯಲ್ಸ್

Mumbai Indians Plans: ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನದಿಂದ, ಫ್ರಾಂಚೈಸಿ ಬದಲಾವಣೆಗೆ ಮುಂದಾಗಿದೆ. ಹಾರ್ದಿಕ್‌ರನ್ನು ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್ ಮಾಡಿ, ಯಶಸ್ವಿ ಜೈಸ್ವಾಲ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮಾತುಕತೆ ನಡೆದಿದೆ. ರೋಹಿತ್ ಶರ್ಮಾ ಬದಲಿಗೆ ಜೈಸ್ವಾಲ್ ಅವರನ್ನು ಭವಿಷ್ಯದ ಆರಂಭಿಕರನ್ನಾಗಿ ಮಾಡಲು ಮುಂಬೈ ಚಿಂತಿಸಿದೆ. ತಿಲಕ್ ವರ್ಮಾಗೆ ನಾಯಕತ್ವ ನೀಡುವ ಸಾಧ್ಯತೆಯೂ ಇದೆ. ಇದು ಮುಂಬೈ ಇಂಡಿಯನ್ಸ್‌ನ ಮುಂದಿನ ಆವೃತ್ತಿಗೆ ದೊಡ್ಡ ಬದಲಾವಣೆಯಾಗಿದೆ.

ಹಾರ್ದಿಕ್​ಗಾಗಿ ಸ್ಫೋಟಕ ಆರಂಭಿಕನನ್ನೇ ಬಿಟ್ಟುಕೊಡಲು ಮುಂದಾದ ರಾಜಸ್ಥಾನ್ ರಾಯಲ್ಸ್
Hardik, Jaiswal
ಪೃಥ್ವಿಶಂಕರ
|

Updated on: Jun 22, 2026 | 6:46 PM

Share

ಮುಂಬೈ ಇಂಡಿಯನ್ಸ್ (Mumbai Indians) ತಂಡದಿಂದ ಗುಜರಾತ್ ಟೈಟಾನ್ಸ್ ತಂಡಕ್ಕೆ ತೆರಳಿ ಅಲ್ಲಿ ಸತತ ಎರಡು ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೇರಿಸಿ, ಒಮ್ಮೆ ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು (Hardik Pandya) ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮತ್ತೆ ತನ್ನ ತೆಕ್ಕೆಗೆ ಹಾಕಿಕೊಂಡಿತು. ಆದರೆ ಹಾರ್ದಿಕ್ ಬಂದ ಬಳಿಕ ತಂಡದ ಪ್ರದರ್ಶನ ಮತ್ತಷ್ಟು ಪಾತಾಳಕ್ಕೆ ಕುಸಿಯಿತು. 2026 ರ ಪಿಎಲ್ ಸೀಸನ್‌ನಲ್ಲಿಯೂ ಹಾರ್ದಿಕ್ ನಾಯಕತ್ವದಲ್ಲಿ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 9 ನೇ ಸ್ಥಾನ ಗಳಿಸಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿತ್ತು. ಹೀಗಾಗಿ ಮುಂಬರುವ ಆವೃತ್ತಿಗೂ ಮುನ್ನ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿರುವ ಮುಂಬೈ ಪ್ರಾಂಚೈಸಿ ಹಾರ್ದಿಕ್​ರನ್ನು ತಂಡದಿಂದ ಬಿಟ್ಟುಕೊಟ್ಟು ಬೇರೊಬ್ಬ ಸ್ಟಾರ್ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.

ರಾಜಸ್ಥಾನ್, ಮುಂಬೈ ನಡುವೆ ಟ್ರೇಡಿಂಗ್

ರೆವ್‌ಸ್ಪೋರ್ಟ್ಸ್ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡಿಂಗ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿದೆ. ಅಲ್ಲದೆ ಈ ಒಪ್ಪಂದ ಅಂತಿಮ ಹಂತಕ್ಕೂ ಬಂದಿದೆ ಎಂಬ ಮಾತುಗಳಿವೆ. ಇಲ್ಲಿ ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಟ್ರೇಡ್ ವಿಂಡೋ ಮೂಲಕ ಈ ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ನೋಡುತ್ತಿವೆ ಎಂದು ವರದಿಯಾಗಿದೆ. ಅಂದರೆ ಮುಂಬೈ ತಂಡದಲ್ಲಿರುವ ಹಾರ್ದಿಕ್ ಪಾಂಡ್ಯರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕಳುಹಿಸಿ, ರಾಜಸ್ಥಾನ್ ರಾಯಲ್ಸ್ ತಂಡದಲಿರುವ ಯಶಸ್ವಿ ಜೈಸ್ವಾಲ್ ಅವರನ್ನು ಮುಂಬೈ ತಂಡಕ್ಕೆ ಸೇರಿಸಿಕೊಳ್ಳಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ರೋಹಿತ್ ಸ್ಥಾನಕ್ಕೆ ಜೈಸ್ವಾಲ್

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಈ ನಿರ್ಧಾರದ ಹಿಂದೆ ತಂಡದ ಮುಂದಿನ ಭವಿಷ್ಯ ಅಡಗಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಪ್ರಸ್ತುತ ಮುಂಬೈ ತಂಡದಲ್ಲಿ ಆರಂಭಿಕರಾಗಿ ಆಡುತ್ತಿರುವ ರೋಹಿತ್ ಶರ್ಮಾ ವೃತ್ತಿಜೀವನದ ಅಂಚಿನಲ್ಲಿದ್ದಾರೆ. ಹೀಗಾಗಿ ಅವರ ಬದಲಿಯಾಗಿ ಭಾರತದ ಮತ್ತೊಬ್ಬ ಪ್ರತಿಭಾವಂತ ಆಟಗಾರನ ಹುಡುಕಾಟದಲ್ಲಿ ಮುಂಬೈ ಇದೆ. ಅದರಂತೆ ದೇಶಿ ಕ್ರಿಕೆಟ್​ನಲ್ಲಿ ಮುಂಬೈ ಪರ ಆಡುವ ಯಶಸ್ವಿ ಜೈಸ್ವಾಲ್​ಗೆ ಮುಂಬೈ ಗಾಳ ಹಾಕಿದೆ. ಇದಕ್ಕೆ ಪೂರಕವಾಗಿ ಜೈಸ್ವಾಲ್ ಕೂಡ ಆರಂಭಿಕನಾಗಿ ಆಡುತ್ತಿದ್ದಾರೆ. ಹೀಗಾಗಿ ರೋಹಿತ್​ರನ್ನು ಬದಲಿಸಲು ಜೈಸ್ವಾಲ್​ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮುಂಬೈ ಮುಂದಾಗಿದೆ.

IPL 2026: ಮುಂಬೈ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡದ ಜೊತೆಗೆ ಡಿಮೆರಿಟ್ ಪಾಯಿಂಟ್

ಹಾರ್ದಿಕ್ ಬದಲು ತಿಲಕ್​ಗೆ ನಾಯಕತ್ವ

ಇನ್ನು ಹಾರ್ದಿಕ್​ ಪಾಂಡ್ಯರನ್ನು ತಂಡದಿಂದ ಬಿಡುಗಡೆ ಮಾಡಲು ಪ್ರಮುಖ ಕಾರಣವೆಂದರೆ ಅವರ ನಾಯಕತ್ವದಲ್ಲಿ ಮುಂಬೈ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು. ಅಲ್ಲದೆ ಆಟಗಾರನಾಗಿಯೂ ಹಾರ್ದಿಕ್ ಪ್ರದರ್ಶನ ಅಷ್ಟಕಷ್ಟೆ ಹೀಗಾಗಿ ಹಾರ್ದಿಕ್​ರನ್ನು ತಂಡದಲ್ಲಿ ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಮುಂಬೈಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಿ ಅವರ ಸ್ಥಾನದಲ್ಲಿ ಅಂದರೆ ತಂಡದ ನಾಯಕತ್ವದ ಜವಾಬ್ದಾರಿಯನ್ನು ತಿಲಕ್ ವರ್ಮಾಗೆ ನೀಡಲು ಮುಂಬೈ ಚಿಂತಿಸಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ಕೇಳಿಬರುತ್ತಿರುವ ಈ ವರದಿಗಳನ್ನೆಲ್ಲ ಗಮನಿಸಿದರೆ, ಮುಂಬರುವ ಐಪಿಎಲ್​ನಲ್ಲಿ ಮುಂಬೈ ಫ್ರಾಂಚೈಸಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದಂತೂ ಖಚಿತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ