AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ದುರಂತಕ್ಕೂ ಮುನ್ನವೇ ಆರ್​ಸಿಬಿ ಬಳಿ ಇದ್ದ ಟ್ರೋಫಿ ಹಿಂಪಡೆದ ಐಪಿಎಲ್ ಆಡಳಿತ ಮಂಡಳಿ

IPL 2025 Trophy Swap: ಐಪಿಎಲ್ ಚಾಂಪಿಯನ್ ತಂಡಕ್ಕೆ ಮೂಲ ಟ್ರೋಫಿ ನೀಡುವುದಿಲ್ಲ . ಬದಲಾಗಿ, ತದ್ರೂಪಿ ಟ್ರೋಫಿಯನ್ನು ನೀಡಲಾಗುತ್ತದೆ. ಆರ್‌ಸಿಬಿ ತಂಡಕ್ಕೆ ಆರಂಭದಲ್ಲಿ ಮೂಲ ಟ್ರೋಫಿಯನ್ನು ನೀಡಿದ್ದರೂ, ನಂತರ ಅದನ್ನು ಹಿಂಪಡೆದು ತದ್ರೂಪಿ ಟ್ರೋಫಿಯನ್ನು ನೀಡಲಾಗಿದೆ. ಇದು ಆರ್​​ಸಿಬಿಗೆ ಮಾತ್ರವಲ್ಲ. ಪ್ರತಿ ಆವೃತ್ತಿಯಲ್ಲೂ ಚಾಂಪಿಯನ್ ಆಗುವ ತಂಡಕ್ಕೆ ತದ್ರೂಪಿ ಟ್ರೋಫಿಯನ್ನು ಮಾತ್ರ ನೀಡಲಾಗುತ್ತದೆ.

ಚಿನ್ನಸ್ವಾಮಿ ದುರಂತಕ್ಕೂ ಮುನ್ನವೇ ಆರ್​ಸಿಬಿ ಬಳಿ ಇದ್ದ ಟ್ರೋಫಿ ಹಿಂಪಡೆದ ಐಪಿಎಲ್ ಆಡಳಿತ ಮಂಡಳಿ
Rcb 2025
ಪೃಥ್ವಿಶಂಕರ
|

Updated on:Jun 04, 2025 | 10:25 PM

Share

ಐಪಿಎಲ್ 2025 (IPL 2025) ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ (RCB) ಅಂತಿಮವಾಗಿ ಚಾಂಪಿಯನ್ ಪಟ್ಟಕ್ಕೇರಿತು. 17 ವರ್ಷಗಳ ಕಾಲ ಈ ಟ್ರೋಫಿಗಾಗಿ ಶತಪ್ರಯತ್ನ ಮಾಡಿದ್ದ ಆರ್​ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸುವ ಮೂಲಕ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಆ ಬಳಿಕ ಟ್ರೋಫಿಯೊಂದಿಗೆ ಇಡೀ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಮೆರವಣಿಗೆ ನಡೆಸಲು ತಯಾರಿ ನಡೆಸಿತ್ತಾದರೂ ಅದು ಸಾಧ್ಯವಾಗಲಿಲ್ಲ. ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಅವಘಡದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿಯ ಎಲ್ಲಾ ಸಂಭ್ರಮಕ್ಕೂ ಬ್ರೇಕ್ ಬಿದ್ದಿತ್ತು. ಇದೀಗ ಆರ್​ಸಿಬಿಗೆ ನೀಡಿದ್ದ ಟ್ರೋಫಿಯನ್ನು ಹಿಂದಕ್ಕೆ ಪಡೆಯಲಾಗಿದೆ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ದುರಂತಕ್ಕೂ ಆರ್​ಸಿಬಿ ಬಳಿ ಇದ್ದ ಟ್ರೋಫಿಯನ್ನು ಹಿಂಪಡೆಯುವುದಕ್ಕೂ ಯಾವುದೇ ಸಂಬಂಧವಿಲ್ಲ. ಆರ್​ಸಿಬಿ ಮಾತ್ರವಲ್ಲ ಈ ಹಿಂದೆ ಟ್ರೋಫಿ ಗೆದ್ದಿದ್ದ ಎಲ್ಲಾ ತಂಡಗಳ ಬಳಿಯಿಂದಲೂ ಟ್ರೋಫಿಯನ್ನು ಹಿಂಪಡೆಯಲಾಗಿದೆ. ಇದಕ್ಕೆ ಕಾರಣ ಐಪಿಎಲ್ ನಿಯಮ.

ಮೂಲ ಟ್ರೋಫಿ ತಂಡಕ್ಕೆ ಸೇರಿದ್ದಲ್ಲ

ಐಪಿಎಲ್ ಚಾಂಪಿಯನ್ ಆಗುವ ತಂಡಕ್ಕೆ ಮೂಲ ಟ್ರೋಫಿಯನ್ನು ನೀಡಲಾಗುವುದಿಲ್ಲ. ವಿಜೇತ ತಂಡಗಳಿಗೆ ತದ್ರೂಪಿ ಟ್ರೋಫಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಸಮಾರಂಭದಲ್ಲಿ ಆರ್‌ಸಿಬಿಗೆ ಮೂಲ ಐಪಿಎಲ್ ಟ್ರೋಫಿಯನ್ನು ನೀಡಲಾಯಿತ್ತಾದರೂ ಆ ಬಳಿಕ ಮೂಲ ಟ್ರೋಫಿಯನ್ನು ಹಿಂಪಡೆದು, ಆ ಟ್ರೋಫಿಯನ್ನೇ ಹೊಲುವ ತದ್ರೂಪಿ ಟ್ರೋಫಿಯನ್ನು ಆರ್​ಸಿಬಿಗೆ ನೀಡಲಾಗಿದೆ. ಆರ್​ಸಿಬಿ ತಂಡ ಆ ಟ್ರೋಫಿಯನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದಿಳಿದಿದೆ.

ಆರ್​ಸಿಬಿ ಸಂಭ್ರಮಾಚರಣೆ ದುರಂತ; ನಮ್ಮ ಪಾತ್ರವಿಲ್ಲ ಎಂದ ಐಪಿಎಲ್, ಬಿಸಿಸಿಐ

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಅವಘಡ

ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದ್ದ ಆರ್​ಸಿಬಿ, ಅಭಿಮಾನಿಗಳನ್ನು ಇನ್ನಷ್ಟು ರಂಜಿಸಲು ಯೋಜನೆ ಹಾಕಿಕೊಂಡಿತ್ತು. ಆದರೆ ಭದ್ರತಾ ವೈಫಲ್ಯದಿಂದಾಗಿ ಮನರಂಜನಾ ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳದಲ್ಲಿ ಸೂತಕದ ಛಾಯೆ ಮೂಡಿತು. ಅಭಿಮಾನಿಗಳ ನೂಕು ನುಗ್ಗಲು ಹಾಗೂ ಕಾಲ್ತುಳಿತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಮಹಾ ಅವಘಡವೊಂದು ನಡೆದು ಹೋಗಿದೆ. ಈ ಅವಘಡದಲ್ಲಿ 11 ಜನರು ಪ್ರಾಣ ಬಿಟ್ಟಿದ್ದಾರೆ. ಆದಾಗ್ಯೂ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗಾಗಿ ಆರ್​ಸಿಬಿ 15 ನಿಮಿಷಗಳ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದಾಗ್ಯೂ ಈ ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಕರ್ನಾಟಕದ ಮುಖ್ಯಮಂತ್ರಿ ಘೋಷಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Wed, 4 June 25

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?