AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RCB: ಕಳಪೆ ಬ್ಯಾಟಿಂಗ್‌, ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಆರ್​ಸಿಬಿ

GT vs RCB: ಐಪಿಎಲ್ 2026ರ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸುಲಭವಾಗಿ ಸೋಲಿಸಿತು. ಅಹಮದಾಬಾದ್‌ನಲ್ಲಿ ನಡೆದ ಈ ಪಂದ್ಯದಲ್ಲಿ, RCB ಕೇವಲ 155 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು GT 25 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟಿ ಭರ್ಜರಿ ಜಯ ಸಾಧಿಸಿತು. ಇದು RCBಗೆ ಈ ಆವೃತ್ತಿಯ ಮೂರನೇ ಸೋಲಾಗಿದ್ದರೆ, GTಗೆ ಐದನೇ ಗೆಲುವಾಗಿದೆ.

GT vs RCB: ಕಳಪೆ ಬ್ಯಾಟಿಂಗ್‌, ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಆರ್​ಸಿಬಿ
Gt Vs Rcb
ಪೃಥ್ವಿಶಂಕರ
|

Updated on:Apr 30, 2026 | 11:23 PM

Share

ಐಪಿಎಲ್ 2026 (IPL 2026) ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದಿದ್ದರೆ, ಇದೀಗ ಎರಡನೇ ಪಂದ್ಯವನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಕೇವಲ 155 ರನ್​​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಇನ್ನು 25 ಬಾಲ್​ಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು. ಈ ಆವೃತ್ತಿಯಲ್ಲಿ ಇದು ಆರ್​ಸಿಬಿಯ ಮೂರನೇ ಸೋಲಾದರೆ, ಇತ್ತ ಗುಜರಾತ್ ತಂಡಕ್ಕೆ 5ನೇ ಗೆಲುವಾಗಿದೆ.

ಆರ್‌ಸಿಬಿ ಬ್ಯಾಟಿಂಗ್ ವಿಫಲ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಕಳಪೆ ಆರಂಭ ಪಡೆಯಿತು. ಜಾಕೋಬ್ ಬೆಥೆಲ್ ಕೇವಲ 5 ರನ್‌ಗಳಿಗೆ ಔಟಾದರು. ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ, ರಬಾಡ ಅವರ ಓವರ್‌ನಲ್ಲಿ ಸತತ ಐದು ಬೌಂಡರಿಗಳನ್ನು ಬಾರಿಸಿದರು. ಆದರೆ ಅದೇ ರಬಾಡ ಬೌಲ್ ಮಾಡಿದ ಮುಂದಿನ ಓವರ್​ನಲ್ಲಿ ಔಟಾದರು. ಪಡಿಕ್ಕಲ್ ಮತ್ತು ಪಾಟಿದಾರ್ ಜೊತೆಯಾಟವನ್ನು ನಿರ್ಮಿಸಲು ಪ್ರಯತ್ನಿಸಿದರು, ಆದರೆ ಆರ್‌ಸಿಬಿ ನಾಯಕ ಪಾಟಿದಾರ್ 19 ರನ್‌ಗಳಿಗೆ ಔಟಾದರು. ಜಿತೇಶ್ ಶರ್ಮಾ ಮತ್ತೊಮ್ಮೆ ನಿರಾಶೆಗೊಳಿಸಿ 1 ರನ್‌ಗೆ ಔಟಾದರು. ಟಿಮ್ ಡೇವಿಡ್ ಅವರನ್ನು ರಶೀದ್ ಖಾನ್ 9 ರನ್‌ಗೆ ಔಟ್ ಮಾಡಿದರು. ತಂಡದ ಪರ ಏಕಾಂಗಿ ಹೋರಾಟ ನೀಡಿದ ದೇವದತ್ (40 ರನ್), ರಶೀದ್ ಖಾನ್ ಅವರ ಅದ್ಭುತ ಎಸೆತದಲ್ಲಿ ಬೌಲ್ಡ್ ಆದರು. ಅಂತಿಮವಾಗಿ ಆರ್​ಸಿಬಿ 19.1 ಓವರ್​ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು.

ಗಿಲ್, ಬಟ್ಲರ್ ಅದ್ಭುತ ಬ್ಯಾಟಿಂಗ್

ಗುರಿ ಬೆನ್ನಟ್ಟಿದ ಗುಜರಾತ್ ತಂಡ ಕೂಡ ಕಳಪೆ ಆರಂಭ ಪಡೆಯಿತು. ಸಾಯಿ ಸುದರ್ಶನ್ 6 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಆದರೆ ಶುಭಮನ್ ಗಿಲ್ ಅಬ್ಬರದ ಬ್ಯಾಟಿಂಗ್‌ ನಡೆಸಿ ಜೋಶ್ ಹ್ಯಾಜಲ್‌ವುಡ್ ಅವರ ಮೊದಲ ಓವರ್‌ನಲ್ಲಿ 24 ರನ್ ಕಲೆಹಾಕಿದರು. ಅವರು 18 ಎಸೆತಗಳಲ್ಲಿ 3 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳನ್ನು ಒಳಗೊಂಡಂತೆ 43 ರನ್ ಗಳಿಸಿ ಔಟಾದರು. ಜೋಸ್ ಬಟ್ಲರ್ 19 ಎಸೆತಗಳಲ್ಲಿ 4 ಸಿಕ್ಸರ್‌ಗಳು ಮತ್ತು 2 ಬೌಂಡರಿಗಳನ್ನು ಒಳಗೊಂಡಂತೆ 39 ರನ್ ಗಳಿಸಿದರು. ಕೊನೆಯಲ್ಲಿ, ರಾಹುಲ್ ತೆವಾಟಿಯಾ ಗುಜರಾತ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

GT vs RCB IPL 2026 Highlights: ಆರ್​​ಸಿಬಿ ವಿರುದ್ಧ ಸುಲಭವಾಗಿ ಗೆದ್ದ ಗುಜರಾತ್

ಆರ್​​ಸಿಬಿ ಕಳಪೆ ಫಿಲ್ಡಿಂಗ್

ಗುಜರಾತ್ ತಂಡದ ಈ ಗೆಲುವಿನಲ್ಲಿ ಆರ್​ಸಿಬಿಯ ಕಳಪೆ ಫಿಲ್ಡಿಂಗ್ ಕೂಡ ಕಾರಣವಾಯಿತು. ಶುಭ್​ಮನ್ ಗಿಲ್ ನೀಡಿದ ರನೌಟ್ ಅವಕಾಶಗಳನ್ನು ಆರ್​ಸಿಬಿ ಸರಿಯಾಗಿ ಬಳಸಿಕೊಳ್ಳಲಿಲ್ಲ. ಹಾಗೆಯೇ ಜೋಸ್ ಬಟ್ಲರ್ ಕೇವಲ 1 ರನ್​ ಬಾರಿಸಿದ್ದಾಗ ನೀಡಿದ ಸುಲಭ ಕ್ಯಾಚ್ ಅನ್ನು ವಿಕೆಟ್ ಕೀಪರ್ ಜಿತೇಶ್ ಶರ್ಮಾ ಕೈಚೆಲ್ಲಿದರು. ಈ ಜೀವದಾನದ ಲಾಭ ಪಡೆದ ಬಟ್ಲರ್ 39 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 pm, Thu, 30 April 26

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು