AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irani Cup 2022: ಶೇಷ ಭಾರತ ತಂಡ ಪ್ರಕಟ: ಕನ್ನಡಿಗನಿಗೂ ಸ್ಥಾನ

Irani Cup 2022: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಇರಾನಿ ಕಪ್ ಅನ್ನು ಆಯೋಜಿಸಿರಲಿಲ್ಲ. ಇದೀಗ ಬಿಸಿಸಿಐ 3 ವರ್ಷಗಳ ಬಳಿಕ ಚಾಂಪಿಯನ್ಸ್ ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳ ನಡುವಿನ ಪಂದ್ಯವನ್ನು ಆಯೋಜಿಸುತ್ತಿರುವುದು ವಿಶೇಷ.

Irani Cup 2022: ಶೇಷ ಭಾರತ ತಂಡ ಪ್ರಕಟ: ಕನ್ನಡಿಗನಿಗೂ ಸ್ಥಾನ
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on:Sep 28, 2022 | 6:28 PM

Share

Irani Cup 2022: ಇರಾನಿ ಕಪ್ 2022ರ ಪಂದ್ಯಕ್ಕೆ ಶೇಷ ಭಾರತ ತಂಡವನ್ನು (Rest of India Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹನುಮ ವಿಹಾರಿ (Hanuma Vihari) ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗನೆಂದರೆ ಮಯಾಂಕ್ ಅಗರ್ವಾಲ್. ಹಾಗೆಯೇ ತಂಡದಲ್ಲಿ ಅಂಡರ್ 19 ವಿಶ್ವಕಪ್​ ಗೆದ್ದ ತಂಡದ ನಾಯಕರಾಗಿದ್ದ ಯುವ ಬ್ಯಾಟ್ಸ್​ಮನ್ ಯಶ್​ ಧುಲ್ ಸ್ಥಾನ ಸಹ ಪಡೆದಿದ್ದಾರೆ. ಇರಾನಿ ಕಪ್​ನಲ್ಲಿ ಶೇಷ ಭಾರತ ತಂಡವು ರಣಜಿ ಟ್ರೋಫಿ ಚಾಂಪಿಯನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಹಾಲಿ ಚಾಂಪಿಯನ್ ಸೌರಾಷ್ಟ್ರ ಹಾಗೂ ಶೇಷ ಭಾರತ ತಂಡ ಅಕ್ಟೋಬರ್ 1 ರಂದು ರಾಜ್‌ಕೋಟ್‌ನಲ್ಲಿ ಮುಖಾಮುಖಿಯಾಗಲಿದೆ.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಇರಾನಿ ಕಪ್ ಅನ್ನು ಆಯೋಜಿಸಿರಲಿಲ್ಲ. ಇದೀಗ ಬಿಸಿಸಿಐ 3 ವರ್ಷಗಳ ಬಳಿಕ ಚಾಂಪಿಯನ್ಸ್ ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳ ನಡುವಿನ ಪಂದ್ಯವನ್ನು ಆಯೋಜಿಸುತ್ತಿರುವುದು ವಿಶೇಷ. ಅದರಂತೆ ಈ ಬಾರಿ ದೇಶೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಒಳಗೊಂಡ ಶೇಷ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ಈ ಟೆಸ್ಟ್ ಪಂದ್ಯಕ್ಕೆ ಸೌರಾಷ್ಟ್ರ ಇನ್ನೂ ತಂಡವನ್ನು ಘೋಷಿಸಿಲ್ಲ. ಇದಾಗ್ಯೂ ರಣಜಿ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ ಶೇಷ ಭಾರತ ತಂಡವನ್ನು ಎದುರಿಸಲಿದೆ. ಒಂದು ವೇಳೆ ಆಟಗಾರರು ಗಾಯಗೊಂಡಿದ್ದರೆ ಮಾತ್ರ ತಂಡದಲ್ಲಿ ಬದಲಾವಣೆ ಕಂಡು ಬರಲಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಶೇಷ ಭಾರತ ತಂಡ ಹೀಗಿದೆ:

ಅಭಿಮನ್ಯು ಈಶ್ವರನ್, ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ಹನುಮ ವಿಹಾರಿ (ನಾಯಕ), ಸರ್ಫರಾಜ್ ಖಾನ್, ಯಶಸ್ವಿ ಜೈಸ್ವಾಲ್, ಯಶ್ ಧುಲ್, ಕೆಎಸ್ ಭರತ್, ಉಪೇಂದ್ರ ಯಾದವ್ (ವಿಕೆಟ್ ಕೀಪರ್‌ಗಳು), ಕುಲದೀಪ್ ಸೇನ್, ಉಮ್ರಾನ್ ಮಲಿಕ್, ಮುಕೇಶ್ ಕುಮಾರ್, ಅರ್ಝಾನ್ ನಾಗ್ವಾಸ್ವಲ್ಲಾ, ಜಯಂತ್ ಯಾದವ್, ಸೌರಭ್ ಕುಮಾರ್

Published On - 6:28 pm, Wed, 28 September 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ