Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarfaraz Khan: ಸ್ಪೋಟಕ ಡಬಲ್ ಸೆಂಚುರಿ ಸಿಡಿಸಿ ದಾಖಲೆ ಬರೆದ ಸರ್ಫರಾಝ್ ಖಾನ್

Irani Cup 2024: ಇರಾನಿ ಕಪ್ ಪಂದ್ಯದಲ್ಲಿ ಹಾಲಿ ರಣಜಿ ಚಾಂಪಿಯನ್ ತಂಡ ಹಾಗೂ ಶೇಷ ಭಾರತ ತಂಡ ಏಕೈಕ ಟೆಸ್ಟ್ ಪಂದ್ಯವನ್ನಾಡುತ್ತದೆ. ಪ್ರತಿ ಸೀಸನ್​ನ ರಣಜಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಶೇಷ ಭಾರತ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ. ಅದರಂತೆ ಇದೀಗ ಹಾಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಇರಾನಿ ಕಪ್ ಪಂದ್ಯವಾಡುತ್ತಿದೆ.

Sarfaraz Khan: ಸ್ಪೋಟಕ ಡಬಲ್ ಸೆಂಚುರಿ ಸಿಡಿಸಿ ದಾಖಲೆ ಬರೆದ ಸರ್ಫರಾಝ್ ಖಾನ್
Sarfaraz Khan
Follow us
ಝಾಹಿರ್ ಯೂಸುಫ್
|

Updated on: Oct 02, 2024 | 4:18 PM

ಲಕ್ನೋನಾ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇರಾನಿ ಕಪ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸರ್ಫರಾಝ್ ಖಾನ್ ಸ್ಪೋಟಕ ದ್ವಿಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಮುಂಬೈ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ 253 ಎಸೆತಗಳಲ್ಲಿ ಡಬಲ್ ಸೆಂಚುರಿ ಪೂರೈಸಿದರು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಶೇಷ ಭಾರತ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕರಾದ ಪೃಥ್ವಿ ಶಾ (4) ಹಾಗೂ ಆಯುಷ್ (19) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹಾರ್ದಿಕ್ ತಮೋರೆ (0) ಶೂನ್ಯಕ್ಕೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ಶ್ರೇಯಸ್ ಅಯ್ಯರ್ ಹಾಗೂ ನಾಯಕ ಅಜಿಂಕ್ಯ ರಹಾನೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದರ ನಡುವೆ 84 ಎಸೆತಗಳಲ್ಲಿ 57 ರನ್ ಬಾರಿಸಿ ಶ್ರೇಯಸ್ ಅಯ್ಯರ್ ಔಟಾದರು. ಈ ವೇಳೆ ಕಣಕ್ಕಿಳಿದ ಸರ್ಫರಾಝ್ ಖಾನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ರಹಾನೆ ಜೊತೆಗೂಡಿ ಇನಿಂಗ್ಸ್ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡ ಯುವ ದಾಂಡಿಗ ಮೈದಾನದ ಮೂಲೆ ಮೂಲೆಗೂ ಫೋರ್​ಗಳನ್ನು ಬಾರಿಸಿ ಗಮನ ಸೆಳೆದರು.

ಆದರೆ 2ನೇ ದಿನದಾಟದ ಆರಂಭದಲ್ಲಿ ಅಜಿಂಕ್ಯ ರಹಾನೆ (97) ವಿಕೆಟ್ ಪಡೆಯುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ಮತ್ತೊಂದೆಡೆ ಕ್ರೀಸ್ ಕಚ್ಚಿ ನೆಲೆಯೂರಿದ್ದ ಸರ್ಫರಾಝ್ ಖಾನ್ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು.

ಸರ್ಫರಾಝ್ ಡಬಲ್ ಸೆಂಚುರಿ ದಾಖಲೆ:

ಆಕರ್ಷಕ ಸ್ವೀಪ್ ಶಾಟ್​ಗಳೊಂದಿಗೆ​ ಶೇಷ ಭಾರತ ತಂಡದ ಬೌಲರ್​ಗಳ ಬೆಂಡೆತ್ತಿದ ಸರ್ಫರಾಝ್ ಖಾನ್ 253 ಎಸೆತಗಳಲ್ಲಿ 23 ಫೋರ್ ಹಾಗೂ 3 ಸಿಕ್ಸ್​ಗಳೊಂದಿಗೆ ದ್ವಿಶತಕ ಪೂರೈಸಿದರು. ಈ ಮೂಲಕ ಇರಾನಿ ಕಪ್​ನಲ್ಲಿ ಮುಂಬೈ ಪರ ದ್ವಿಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

1972 ರ ಇರಾನಿ ಕಪ್​ನಲ್ಲಿ ಆರ್​ಡಿ ಪಾರ್ಕರ್ 195 ರನ್ ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ಸರ್ಫರಾಝ್ ಖಾನ್ ಡಬಲ್ ಸೆಂಚುರಿ ಸಿಡಿಸುವ ಮೂಲಕ ಮುಂಬೈ ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಈ ದ್ವಿಶತಕದ ನೆರವಿನಿಂದ ಮುಂಬೈ ತಂಡವು 127 ಓವರ್​ಗಳ ಮುಕ್ತಾಯದ ವೇಳೆಗೆ 8 ವಿಕೆಟ್ ಕಳೆದುಕೊಂಡು 484 ರನ್ ಕಲೆಹಾಕಿದೆ.

ಮುಂಬೈ ಪ್ಲೇಯಿಂಗ್ 11: ಪೃಥ್ವಿ ಶಾ , ಆಯುಷ್ ಮ್ಹಾತ್ರೆ , ಶ್ರೇಯಸ್ ಅಯ್ಯರ್ , ಅಜಿಂಕ್ಯ ರಹಾನೆ (ನಾಯಕ) , ಸರ್ಫರಾಝ್ ಖಾನ್ , ಹಾರ್ದಿಕ್ ತಮೋರೆ (ವಿಕೆಟ್ ಕೀಪರ್) , ಶಾರ್ದೂಲ್ ಠಾಕೂರ್ , ಶಮ್ಸ್ ಮುಲಾನಿ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ತಿ , ಎಂ ಜುನೇದ್ ಖಾನ್.

ಇದನ್ನೂ ಓದಿ: ಹೆಚ್ಚುವರಿ 36 ಎಸೆತಗಳಿಂದ ಟೀಮ್ ಇಂಡಿಯಾ ಕೈ ತಪ್ಪಿದ ಸಾರ್ವಕಾಲಿಕ ಶ್ರೇಷ್ಠ ದಾಖಲೆ

ಶೇಷ ಭಾರತ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ (ನಾಯಕ) , ದೇವದತ್ ಪಡಿಕ್ಕಲ್ , ಅಭಿಮನ್ಯು ಈಶ್ವರನ್ , ಸಾಯಿ ಸುದರ್ಶನ್ , ಇಶಾನ್ ಕಿಶನ್ , ಧ್ರುವ್ ಜುರೆಲ್ (ವಿಕೆಟ್ ಕೀಪರ್) , ಮಾನವ್ ಸುತಾರ್ , ಸರನ್ಶ್ ಜೈನ್ , ಯಶ್ ದಯಾಳ್ , ಪ್ರಸಿದ್ಧ್ ಕೃಷ್ಣ , ಮುಖೇಶ್ ಕುಮಾರ್.

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಅನುದಾನ ಸಿಗದಿರುವುದೂ ಸುರೇಶ್ ಗೌಡರ ಕೋಪಕ್ಕೆ ಒಂದು ಕಾರಣವೇ?
ಅನುದಾನ ಸಿಗದಿರುವುದೂ ಸುರೇಶ್ ಗೌಡರ ಕೋಪಕ್ಕೆ ಒಂದು ಕಾರಣವೇ?
ಮಂತ್ರಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ ಶಿವರಾಜ್​ಕುಮಾರ್-ಗೀತಾ
ಮಂತ್ರಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ ಶಿವರಾಜ್​ಕುಮಾರ್-ಗೀತಾ
ಪ್ರತಾಪ್ ಸಿಂಹ ಯಾರ ಬಣದಲ್ಲಿದ್ದಾರೆಂದು ಊಹಿಸುವುದು ಕಷ್ಟ!
ಪ್ರತಾಪ್ ಸಿಂಹ ಯಾರ ಬಣದಲ್ಲಿದ್ದಾರೆಂದು ಊಹಿಸುವುದು ಕಷ್ಟ!