AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನಿ ಕಪ್; 308 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಶೇಷ ಭಾರತ; ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ

Irani Trophy 2023: ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶೇಷ ಭಾರತ ಹಾಗೂ ಸೌರಾಷ್ಟ್ರ ನಡುವಿನ ಇರಾನಿ ಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶೇಷ ಭಾರತ ತಂಡ ಬಿ ಸಾಯಿ ಸುದರ್ಶನ್ ಅವರ ಅರ್ಧಶತಕದ ನೆರವಿನಿಂದ 308 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಇರಾನಿ ಕಪ್; 308 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಶೇಷ ಭಾರತ; ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ
ಇರಾನಿ ಕಪ್
Follow us
ಪೃಥ್ವಿಶಂಕರ
|

Updated on: Oct 02, 2023 | 12:04 PM

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶೇಷ ಭಾರತ ಹಾಗೂ ಸೌರಾಷ್ಟ್ರ (Rest of India vs Saurashtra) ನಡುವಿನ ಇರಾನಿ ಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶೇಷ ಭಾರತ ತಂಡ ಬಿ ಸಾಯಿ ಸುದರ್ಶನ್ (B Sai Sudarshan) ಅವರ ಅರ್ಧಶತಕದ ನೆರವಿನಿಂದ 308 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಮೊದಲ ದಿನದಂದು 8 ವಿಕೆಟ್ ಕಳೆದುಕೊಂಡು 298 ರನ್ ಬಾರಿಸಿದ್ದ ಶೇಷ ಭಾರತ ತಂಡ ಎರಡನೇ ದಿನದಾಟದಲ್ಲಿ ಕೇವಲ 2 ರನ್​ಗಳಿಸುವಷ್ಟರಲ್ಲಿ ಉಳಿದ ಇನ್ನೇರಡು ವಿಕೆಟ್​ಗಳನ್ನು ಕಳೆದುಕೊಂಡು ಮೊದಲ ಇನ್ನಿಂಗ್ಸ್ ಮುಗಿಸಿದೆ. ಹಾಲಿ ರಣಜಿ ಚಾಂಪಿಯನ್ ಸೌರಾಷ್ಟ್ರ ಪರ ಬೌಲಿಂಗ್​ನಲ್ಲಿ ಮಿಂಚಿದ ಪಾರ್ಥ್ ಭಟ್ 5 ವಿಕೆಟ್ ಪಡೆದು ಮಿಂಚಿದ್ದಾರೆ.

ವಿಫಲವಾದ ಮಧ್ಯಮ ಕ್ರಮಾಂಕ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರೆಸ್ಟ್ ಆಫ್ ಇಂಡಿಯಾ ತಂಡದ ಪರ ಸಾಯಿ ಸುದರ್ಶನ್ ಹೊರತುಪಡಿಸಿ, ಇತರ ಎಲ್ಲಾ ಬ್ಯಾಟ್ಸ್‌ಮನ್‌ಗಳು ಸೌರಾಷ್ಟ್ರದ ಸ್ಪಿನ್ನರ್‌ಗಳ ವಿರುದ್ಧ ರನ್​ಗಳಿಸಲು ಹೆಣಗಾಡಿದರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಸಾಯಿ ಸುದರ್ಶನ್ 165 ಎಸೆತಗಳಲ್ಲಿ 72 ರನ್‌ಗಳ ಇನ್ನಿಂಗ್ಸ್ ಆಡಿದರು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸಾಯಿ ಸುದರ್ಶನ್ ಹಾಗೂ ಕನ್ನಡಿಗ ಮಯಾಂಕ್ ಅರ್ಗವಾಲ್ ಮೊದಲ ವಿಕೆಟ್​ಗೆ 69 ರನ್​ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ 32 ರನ್ ಬಾರಿಸಿದ್ದ ಮಯಾಂಕ್, ಜಡೇಜಾ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು. ಈ ವಿಕೆಟ್ ಬಳಿಕ ಬಂದ ನಾಯಕ ಹನುಮ ವಿಹಾರಿ 33 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಈ ಎರಡು ವಿಕೆಟ್ ಪತನದ ಬಳಿಕ ತಂಡದ ಮಧ್ಯಮ ಕ್ರಮಾಂಕ ಅಲ್ಪ ಮೊತ್ತಕ್ಕೆ ಕುಸಿಯಿತು. ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಸರ್ಫರಾಜ್ ಖಾನ್ (17 ರನ್) ಮತ್ತು ಯಶ್ ಧುಲ್ (10 ರನ್) ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲರಾದರು.

Irani Trophy: ಮಿಂಚಿದ ಯಶಸ್ವಿ ಜೈಸ್ವಾಲ್; ಕನ್ನಡಿಗ ಮಯಾಂಕ್ ತಂಡಕ್ಕೆ ಇರಾನಿ ಕಪ್..!

ಸಾಯಿ ಸುದರ್ಶನ್ ಅರ್ಧಶತಕ

ಇತ್ತೀಚೆಗೆ ಇಂಗ್ಲಿಷ್ ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ಸರ್ರೆ ತಂಡದ ಪರ ಕಣಕ್ಕಿಳಿದು ಕೌಂಟಿ ಚಾಂಪಿಯನ್‌ಶಿಪ್ ಗೆದ್ದಿದ್ದ ಸಾಯಿ ಸುದರ್ಶನ್ ಸಂಯಮದಿಂದ ಆಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಆದರೆ ಸಾಯಿ ಸುದರ್ಶನ್ ಔಟಾದ ತಕ್ಷಣ ಶೇಷ ಭಾರತ ಕೇವಲ 22 ರನ್​ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತು. ಕೆಳ ಕ್ರಮಾಂಕದಲ್ಲಿ ಶ್ರೀಕರ್ ಭರತ್ 36 ರನ್, ಶಮ್ಸ್ ಮುಲಾನಿ 32 ರನ್, ಸೌರಭ್ ಕುಮಾರ್ 39 ರನ್​ಗಳ ಇನ್ನಿಂಗ್ಸ್ ಆಡಿ ತಂಡವನ್ನು 300 ರನ್‌ಗಳ ಗಡಿ ದಾಟಿಸಿದರು.

ಮಿಂಚಿದ ಪಾರ್ಥ್​ ಭಟ್

ಸೌರಾಷ್ಟ್ರ ತಂಡದ ಪರ ಪಾರ್ಥ್​ ಭಟ್ 30 ಓವರ್ ಬೌಲಿ ಮಾಡಿ 94 ರನ್​ ನೀಡಿ 5 ವಿಕೆಟ್ ಪಡೆದರೆ, ಧರ್ಮೇಂದ್ರಸಿನ್ಹ ಜಡೇಜಾ 90 ರನ್ ನೀಡಿ 3 ವಿಕೆಟ್ ಪಡೆದರು. ಈ ಇಬ್ಬರೊಂದಿಗೆ ಯುವರಾಜಸಿಂಹ ದೊಡಿಯಾ ಕೂಡ ಪ್ರಮುಖ 2 ವಿಕೆಟ್ ಪಡೆದು ಮಿಂಚಿದರು.

ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ

ಇನ್ನು ಶೇಷ ಭಾರತ ತಂಡ ನೀಡಿರುವ 308 ರನ್​ಗಳ ಗುರಿ ಬೆನ್ನಟ್ಟಿರುವ ಸೌರಾಷ್ಟ್ರ ತಂಡ ಈ ಸುದ್ದಿ ಬರೆಯುವ ವೇಳೆಗೆ ಆರಂಭಿಕರಿಬ್ಬರ ವಿಕೆಟ್ ಕಳೆದುಕೊಂಡು 45 ರನ್ ಕಲೆಹಾಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ