AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಸೋತರೂ ದಾಖಲೆ ಬರೆದ ಐರ್ಲೆಂಡ್

Ireland vs India: ಈ ಪಂದ್ಯದಲ್ಲಿ ಸೋತರೂ ಐರ್ಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧ ವಿಶೇಷ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ಕೆಚ್ಚೆದೆಯ ಪ್ರದರ್ಶನದ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಟೀಮ್ ಇಂಡಿಯಾ ವಿರುದ್ಧ ಸೋತರೂ ದಾಖಲೆ ಬರೆದ ಐರ್ಲೆಂಡ್
Ireland Team
TV9 Web
| Edited By: |

Updated on: Aug 19, 2023 | 3:02 PM

Share

ಡಬ್ಲಿನ್​ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು ಟೀಮ್ ಇಂಡಿಯಾ ದಾಳಿಗೆ ತತ್ತರಿಸಿತು. ಮೊದಲ ಓವರ್​ನಲ್ಲೇ 2 ವಿಕೆಟ್ ಕಬಳಿಸುವ ಮೂಲಕ ಬುಮ್ರಾ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬುಮ್ರಾ ಜೊತೆಗೂಡಿದ ಪ್ರಸಿದ್ಧ್ ಕೃಷ್ಣ ಕೂಡ ವಿಕೆಟ್ ಕಬಳಿಸಿದರು. ಪರಿಣಾಮ ಐರ್ಲೆಂಡ್ ತಂಡವು ಕೇವಲ 31 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು.

ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಐರ್ಲೆಂಡ್ ತಂಡ 139 ರನ್​ಗಳಿಸಿತು. ಇತ್ತ 140 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ 6.2 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಕಲೆಹಾಕಿತ್ತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಇನ್ನು ಫಲಿತಾಂಶ ನಿರ್ಧಾರಕ್ಕೆ ಡಕ್​ವರ್ಥ್ ಲೂಯಿಸ್ ನಿಯಮದ ಮೊರೆ ಹೋಗಲಾಯಿತು. ಈ ವೇಳೆ ಟೀಮ್ ಇಂಡಿಯಾ 2 ರನ್​ಗಳಿಂದ ಮುಂದಿದ್ದರಿಂದ ವಿಜಯಿ ಎಂದು ಘೋಷಿಸಲಾಯಿತು.

ಐರ್ಲೆಂಡ್ ವಿಶೇಷ ದಾಖಲೆ:

ವಿಶೇಷ ಎಂದರೆ ಈ ಪಂದ್ಯದಲ್ಲಿ ಸೋತರೂ ಐರ್ಲೆಂಡ್ ತಂಡವು ಟೀಮ್ ಇಂಡಿಯಾ ವಿರುದ್ಧ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ಕೆಚ್ಚೆದೆಯ ಪ್ರದರ್ಶನದ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು ಕೇವಲ 31 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಬರೋಬ್ಬರಿ 108 ರನ್ ಬಾರಿಸಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಕಡಿಮೆ ಮೊತ್ತಕ್ಕೆ 5 ವಿಕೆಟ್​ ಕಳೆದುಕೊಂಡು ಭಾರತದ ವಿರುದ್ಧ ಅತ್ಯಧಿಕ ರನ್​ ಕಲೆಹಾಕಿದ ತಂಡ ಎಂಬ ಐರ್ಲೆಂಡ್ ಪಾಲಾಯಿತು.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಕಡಿಮೆ ಮೊತ್ತಕ್ಕೆ 5 ವಿಕೆಟ್ ಪತನಗೊಂಡ ಬಳಿಕ ಅತೀ ಹೆಚ್ಚು ರನ್​ ಬಾರಿಸಿದ ತಂಡಗಳ ಪಟ್ಟಿಯ ಮೊದಲೆರಡು ಸ್ಥಾನಗಳನ್ನೂ ಐರ್ಲೆಂಡ್ ತನ್ನದಾಗಿಸಿಕೊಂಡಿದೆ.

  •  2022 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 25 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಬಳಿಕ ಐರ್ಲೆಂಡ್ ಒಟ್ಟು 137 ರನ್ ಕಲೆಹಾಕಿದ್ದರು. ಅಂದರೆ ಉಳಿದ ಬ್ಯಾಟರ್​ಗಳು ಸೇರಿ ಒಟ್ಟು 112 ರನ್​ ಬಾರಿಸಿದ್ದರು. ಇದು ವಿಶ್ವ ದಾಖಲೆಯಾಗಿದೆ.
  • ಇದೀಗ ಟೀಮ್ ಇಂಡಿಯಾ ವಿರುದ್ಧ ಕೂಡ 31 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಬಳಿಕ ಐರ್ಲೆಂಡ್ ಬ್ಯಾಟರ್​ಗಳು ಒಟ್ಟು​ 108 ರನ್​ ಕಲೆಹಾಕಿದ್ದಾರೆ.

ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಕಡಿಮೆ ರನ್​ಗಳಿಗೆ 5 ವಿಕೆಟ್​ ಕಳೆದುಕೊಂಡು, ಆ ಬಳಿಕ ನೂರಕ್ಕೂ ಹೆಚ್ಚು ರನ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಐರ್ಲೆಂಡ್ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ.

ಐರ್ಲೆಂಡ್ ಪ್ಲೇಯಿಂಗ್ 11: ಪಾಲ್ ಸ್ಟಿರ್ಲಿಂಗ್ (ನಾಯಕ) , ಆಂಡ್ರ್ಯೂ ಬಾಲ್ಬಿರ್ನಿ , ಲೋರ್ಕನ್ ಟಕರ್ (ವಿಕೆಟ್ ಕೀಪರ್) , ಹ್ಯಾರಿ ಟೆಕ್ಟರ್ , ಕರ್ಟಿಸ್ ಕ್ಯಾಂಫರ್ , ಜಾರ್ಜ್ ಡಾಕ್ರೆಲ್ , ಮಾರ್ಕ್ ಅಡೇರ್ , ಬ್ಯಾರಿ ಮೆಕಾರ್ಥಿ , ಕ್ರೇಗ್ ಯಂಗ್ , ಜೋಶುವಾ ಲಿಟಲ್ , ಬೆಂಜಮಿನ್ ವೈಟ್.

ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಎಬಿಡಿ

ಭಾರತ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ , ಯಶಸ್ವಿ ಜೈಸ್ವಾಲ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ತಿಲಕ್ ವರ್ಮಾ , ರಿಂಕು ಸಿಂಗ್ , ಶಿವಂ ದುಬೆ , ವಾಷಿಂಗ್ಟನ್ ಸುಂದರ್ , ಪ್ರಸಿದ್ಧ್ ಕೃಷ್ಣ , ಅರ್ಷದೀಪ್ ಸಿಂಗ್ , ಜಸ್ಪ್ರೀತ್ ಬುಮ್ರಾ (ನಾಯಕ) , ರವಿ ಬಿಷ್ಣೋಯ್.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​