AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irfan Pathan: ಅನುಚಿತವಾಗಿ ವರ್ತಿಸಿದ ಏರ್​ಲೈನ್ಸ್ ಸಿಬ್ಬಂದಿಗಳು: ಕ್ರಮಕ್ಕೆ ಆಗ್ರಹಿಸಿದ ಇರ್ಫಾನ್ ಪಠಾಣ್

Irfan Pathan: ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕಾಮೆಂಟೇಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

Irfan Pathan: ಅನುಚಿತವಾಗಿ ವರ್ತಿಸಿದ ಏರ್​ಲೈನ್ಸ್ ಸಿಬ್ಬಂದಿಗಳು: ಕ್ರಮಕ್ಕೆ ಆಗ್ರಹಿಸಿದ ಇರ್ಫಾನ್ ಪಠಾಣ್
irfan pathan family
TV9 Web
| Edited By: |

Updated on: Aug 25, 2022 | 2:55 PM

Share

ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ (Irfan Pathan) ಅವರು ಸಾಮಾಜಿಕ ಜಾಲತಾಣದಲ್ಲಿ ವಿಸ್ತಾರಾ ಏರ್‌ಲೈನ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿನಗಳ ಹಿಂದೆಯಷ್ಟೇ ಏಷ್ಯಾಕಪ್​ ಕಾಮೆಂಟ್ರಿ ಪ್ಯಾನೆಲ್​ ಸೇರಲು ಇರ್ಫಾನ್ ತನ್ನ ಹೆಂಡತಿ ಮತ್ತು ಮಕ್ಕಳೊಂದಿಗೆ ವಿಸ್ತಾರಾ ಏರ್​ಲೈನ್ಸ್​ನಲ್ಲಿ ಯುಎಇಗೆ ಪ್ರಯಾಣಿಸಿದ್ದಾರೆ. ಈ ವೇಳೆ ಏರ್​ಲೈನ್ಸ್ ಸಿಬ್ಬಂದಿಗಳು ಪ್ರಯಾಣಿಕರೊಂದಿಗೆ ಒರಟಾಗಿ ವರ್ತಿಸಿದ್ದರು. ಇದರಿಂದ ನನ್ನ ಕುಟುಂಬ ಸೇರಿದಂತೆ ಅನೇಕ ಪ್ರಯಾಣಿಕರಿಗೆ ತೊಂದರೆಯಾಗಿತ್ತು ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಇರ್ಫಾನ್ ಪಠಾಣ್, ನಾನು ಮುಂಬೈನಿಂದ ದುಬೈಗೆ ವಿಸ್ತಾರಾ ಫ್ಲೈಟ್ ಯುಕೆ-201 ನಲ್ಲಿ ಪ್ರಯಾಣಿಸಿದ್ದೆ. ಇದೇ ವೇಳೆ ಚೆಕ್-ಇನ್ ಕೌಂಟರ್‌ನಲ್ಲಿ ನನಗೆ ತುಂಬಾ ಕೆಟ್ಟ ಅನುಭವವಾಯಿತು. ವಿಸ್ತಾರಾ ಸಿಬ್ಬಂದಿಗಳು ನನ್ನ ಟಿಕೆಟ್ ಅನ್ನು ತಪ್ಪಾಗಿ ಡೌನ್‌ಗ್ರೇಡ್ ಮಾಡಿದ್ದರು. ಆದರೆ ಅದು ಕನ್ಫರ್ಮ್ ಬುಕಿಂಗ್ ಆಗಿತ್ತು. ಇದಕ್ಕಾಗಿ ಕೌಂಟರ್ ನಲ್ಲಿ ಒಂದೂವರೆ ಗಂಟೆ ಕಾಯಬೇಕಾಯಿತು. ನನ್ನೊಂದಿಗೆ ನನ್ನ ಹೆಂಡತಿ, 8 ತಿಂಗಳ ಮಗು ಮತ್ತು 5 ವರ್ಷದ ಮಗು ಕೂಡ ಈ ಮೂಲಕ ಈ ಪರಿಸ್ಥಿತಿಯನ್ನು ಎದುರಿಸಬೇಕಾಯಿತು.

ಅಷ್ಟೇ ಅಲ್ಲದೆ ಗ್ರೌಂಡ್ ಸ್ಟಾಫ್​ಗಳು ವರ್ತನೆಯು ತುಂಬಾ ಅಸಭ್ಯವಾಗಿತ್ತು. ಸುಮ್ಮನೆ ಬೈಯುತ್ತಾ ಕೆಲಸ ಮಾಡುತ್ತಿದ್ದರು. ಅವರು ಏಕೆ ದೊಡ್ಡ ಮೊತ್ತಕ್ಕೆ ಟಿಕೆಟ್ ಮಾರಾಟ ಮಾಡಿದರು ಮತ್ತು ಆ ಬಳಿಕ ಅದನ್ನು ನಿರ್ವಾಹಕರು ಹೇಗೆ ತೆರವುಗೊಳಿಸಿದರು ಎಂದು ನನಗೆ ಅರ್ಥವಾಗುತ್ತಿಲ್ಲ?. ನನ್ನನ್ನು ಹೊರತುಪಡಿಸಿ, ಇತರ ಅನೇಕ ಪ್ರಯಾಣಿಕರು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಿದರು. ಇನ್ನೊಮ್ಮೆ ಇಂತಹ ಸಮಸ್ಯೆಗಳು ಎದುರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಇರ್ಫಾನ್ ಪಠಾಣ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಕ್ಷಮೆಯಾಚಿಸಿದ ವಿಸ್ತಾರಾ:

ಇರ್ಫಾನ್‌ರ ದೂರಿನ ಮೇರೆಗೆ ಏರ್‌ಲೈನ್ಸ್ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದೆತ. ಅಲ್ಲದೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ಉಂಟಾದ ತೊಂದರೆಗೆ ಕ್ಷಮೆಯಾಚಿಸಿದ್ದಾರೆ. ನಿಮಗೆ ಆದ ಕೆಟ್ಟ ಅನುಭವಕ್ಕೆ ನಾವು ವಿಷಾದಿಸುತ್ತೇವೆ. ಈ ಬಗ್ಗೆ ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಇರ್ಫಾನ್ ಪಠಾಣ್ ಕಾಮೆಂಟೇಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಯುಎಇಗೆ ತೆರಳುವ ಸಂದರ್ಭದಲ್ಲಿ ಉಂಟಾದ ಸಮಸ್ಯೆಗಳನ್ನು ಪ್ರಸ್ತಾಪಿಸಿ ಪಠಾಣ್ ಸೋಷಿಯಲ್ ಮೀಡಿಯಾ ಮೂಲಕ ವಿಸ್ತಾರಾ ಏರ್​ಲೈನ್ಸ್​ಗೆ ದೂರು ನೀಡಿದ್ದರು.

Follow Us
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ