AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಯ ಈ ದಾಂಡಿಗ ಬೌಲರ್‌ಗಳ ಪಾಲಿಗೆ “ಸಿಂಹಸ್ವಪ್ನ”

IPL 2026: ಐಪಿಎಲ್ ಅಂಗಳದಲ್ಲಿ ರನ್ ಮಳೆ ಸುರಿಸುವವರು ಹಲವರಿದ್ದಾರೆ. ಆದರೆ ಎದುರಾಳಿ ಬೌಲರ್‌ಗಳ ಆತ್ಮವಿಶ್ವಾಸವನ್ನೇ ಕುಗ್ಗಿಸುವವರು ಕೆಲವರು ಮಾತ್ರ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅಂತಹ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ರಜತ್ ಪಾಟಿದಾರ್. ಇವರ ಆಕ್ರಮಣಕಾರಿ ಬ್ಯಾಟಿಂಗ್​ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಮನಸೋತಿದ್ದಾರೆ.

RCBಯ ಈ ದಾಂಡಿಗ ಬೌಲರ್‌ಗಳ ಪಾಲಿಗೆ ಸಿಂಹಸ್ವಪ್ನ
Rcb
ಝಾಹಿರ್ ಯೂಸುಫ್
|

Updated on:Apr 15, 2026 | 2:11 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನದೊಂದಿಗೆ ಓರ್ವ ಬ್ಯಾಟರ್ ಮಾತ್ರ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಅವರು ಮತ್ಯಾರೂ ಅಲ್ಲ, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್.

ಟೀಮ್ ಇಂಡಿಯಾದ ಮಾಜಿ ಆಟಗಾರ ಮತ್ತು ಖ್ಯಾತ ವಿಶ್ಲೇಷಕ ಇರ್ಫಾನ್ ಪಠಾಣ್, ರಜತ್ ಪಾಟಿದಾರ್ ಅವರ ವಿಸ್ಫೋಟಕ ಬ್ಯಾಟಿಂಗ್​ಗೆ ಮಾರುಹೋಗಿದ್ದಾರೆ. ಅಲ್ಲದೆ ಅವರನ್ನು ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” ಎಂದು ಕರೆದಿದ್ದಾರೆ.

ಪಠಾಣ್ ಮೆಚ್ಚುಗೆಗೆ ಕಾರಣವೇನು?

ಸಾಮಾನ್ಯವಾಗಿ ವಿರಾಟ್ ಕೊಹ್ಲಿ ಅಥವಾ ಫಿಲ್ ಸಾಲ್ಟ್ ಅವರ ಮೇಲೆ ಎಲ್ಲರ ಕಣ್ಣಿರುತ್ತದೆ. ಆದರೆ, ಈ ಬಾರಿ ಇರ್ಫಾನ್ ಪಠಾಣ್ ಅವರ ಗಮನ ಸೆಳೆದಿರುವುದು ರಜತ್ ಪಾಟಿದಾರ್ ಅವರ ಅಪ್ರತಿಮ ‘ಇಂಟೆಂಟ್’.

ಈ ಬಗ್ಗೆ ಮಾತನಾಡಿದ ಪಠಾಣ್, “ಪಾಟಿದಾರ್ ಕ್ರೀಸ್‌ಗೆ ಬಂದ ಮೊದಲ ಎಸೆತದಿಂದಲೇ ಬೌಲರ್‌ಗಳ ಮೇಲೆ ಸವಾರಿ ಮಾಡುತ್ತಾರೆ. ಅವರ ಆಕ್ರಮಣಕಾರಿ ಆಟ ಆರ್‌ಸಿಬಿ ತಂಡದ ರನ್ ಗತಿಯನ್ನೇ ಬದಲಿಸುತ್ತಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಜತ್ ಅಬ್ಬರ:

  • ವೇಗದ ಅರ್ಧಶತಕ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ 53 ರನ್ ಚಚ್ಚುವ ಮೂಲಕ ಪಾಟಿದಾರ್ ತಮ್ಮ ಕೆಪಾಸಿಟಿ ಏನೆಂದು ತೋರಿಸಿಕೊಟ್ಟಿದ್ದರು. ಇದರಲ್ಲಿ 5 ಅಮೋಘ ಸಿಕ್ಸರ್‌ಗಳಿದ್ದವು.
  • ಸ್ಪಿನ್ನರ್‌ಗಳ ಧೂಳೀಪಟ: ಈ ಸೀಸನ್‌ನಲ್ಲಿ ರಜಯ್ ಪಾಟಿದಾರ್ ಸ್ಪಿನ್ ಬೌಲರ್‌ಗಳ ವಿರುದ್ಧ 218ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸುತ್ತಿದ್ದಾರೆ. ಯಾವುದೇ ಸ್ಪಿನ್ನರ್ ಎದುರಾದರೂ ಕ್ರೀಸ್‌ನಿಂದ ಹೊರಬಂದು ಸಿಕ್ಸರ್ ಸಿಡಿಸುವುದು ಇವರ ಸ್ಪೆಷಾಲಿಟಿ.
  • ಸ್ಥಿರ ಪ್ರದರ್ಶನ: ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗದೆ, ಬ್ಯಾಕ್-ಟು-ಬ್ಯಾಕ್ ಅರ್ಧಶತಕಗಳನ್ನು ಸಿಡಿಸುವ ಮೂಲಕ ಆರ್‌ಸಿಬಿ ಬ್ಯಾಟಿಂಗ್ ಬೆನ್ನೆಲುಬಾಗಿ ನಿಂತಿದ್ದಾರೆ.

ಇರ್ಫಾನ್ ಪಠಾಣ್ ಅವರ ಪ್ರಕಾರ, ಆರ್‌ಸಿಬಿ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ರಜತ್ ಪಾಟಿದಾರ್ ಅವರ ಫಾರ್ಮ್ ಅತ್ಯಂತ ನಿರ್ಣಾಯಕ. ವಿರಾಟ್ ಕೊಹ್ಲಿ ಒಂದು ಕಡೆ ನೆಲೆಯೂರಿದರೆ, ಇನ್ನೊಂದು ತುದಿಯಲ್ಲಿ ರಜತ್ ಪಾಟಿದಾರ್ ನಡೆಸುವ ಆಕ್ರಮಣಕಾರಿ ಬ್ಯಾಟಿಂಗ್ ಎದುರಾಳಿ ತಂಡದ ತಂತ್ರಗಳನ್ನೆಲ್ಲ ತಲೆಕೆಳಗಾಗಿಸುತ್ತಿದೆ.

ಇದನ್ನೂ ಓದಿ: RCB ವಿರುದ್ಧ ‘ರಾಜಧಾನಿ ಎಕ್ಸ್​ಪ್ರೆಸ್​’ ಆಗಮನ..!

ಹೀಗಾಗಿ ಮುಂದಿನ ಪಂದ್ಯದಲ್ಲಿ ರಜತ್ ಪಾಟಿದಾರ್ ಹೇಗೆ ಆಡಲಿದ್ದಾರೆ ಎಂಬುದರ ಮೇಲೆ ಆರ್​ಸಿಬಿ ತಂಡದ ಪ್ಲೇಆಫ್ ಲೆಕ್ಕಾಚಾರ ನಿರ್ಧಾರವಾಗಲಿದೆ. ಒಟ್ಟಿನಲ್ಲಿ ಈ ಬಾರಿಯ ಐಪಿಎಲ್‌ನಲ್ಲಿ ರಜತ್ ಪಾಟಿದಾರ್ ಕೇವಲ ಒಬ್ಬ ಬ್ಯಾಟರ್ ಆಗಿ ಉಳಿಯದೆ, ಆರ್‌ಸಿಬಿ ಪಾಲಿನ ‘ಎಕ್ಸ್-ಫ್ಯಾಕ್ಟರ್’ ಆಗಿ ಹೊರಹೊಮ್ಮುತ್ತಿರುದು ವಿಶೇಷ.

Published On - 2:05 pm, Wed, 15 April 26

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ