AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಮಾಧ್ಯಮಗಳ ಸುಳ್ಳು ಸುದ್ದಿಯನ್ನು ಬಯಲಿಗೆಳೆದ ಇರ್ಫಾನ್ ಪಠಾಣ್

Irfan Pathan: ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಹಾಗೂ ಪಾಕಿಸ್ತಾನಿ ಮಾಧ್ಯಮಗಳ ನಡುವಿನ ಸಾಮಾಜಿಕ ಜಾಲತಾಣದ ಜಟಾಪಟಿ ಈಗ ಹೊಸ ತಿರುವು ಪಡೆದಿದೆ. ತಮ್ಮ ಹೆಸರಿನಲ್ಲಿ ಹರಡಲಾಗುತ್ತಿದ್ದ ಸರಣಿ ಸುಳ್ಳು ಸುದ್ದಿಗಳ ವಿರುದ್ಧ ಇರ್ಫಾನ್ ಪಠಾಣ್ ಆಕ್ರೋಶ ಹೊರಹಾಕಿದ್ದಾರೆ.

ಪಾಕ್​ ಮಾಧ್ಯಮಗಳ ಸುಳ್ಳು ಸುದ್ದಿಯನ್ನು ಬಯಲಿಗೆಳೆದ ಇರ್ಫಾನ್ ಪಠಾಣ್
Babar - IrfanImage Credit source: Google
ಝಾಹಿರ್ ಯೂಸುಫ್
|

Updated on:Aug 09, 2026 | 8:03 AM

Share

ಭಾರತ ತಂಡದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಅವರು ಪಾಕಿಸ್ತಾನಿ ಮಾಧ್ಯಮಗಳು ಹರಡಿದ ಸುಳ್ಳು ಸುದ್ದಿಯೊಂದನ್ನು ಸಾರ್ವಜನಿಕವಾಗಿ ಬಯಲಿಗೆಳೆದಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು ತಮಗೆ ಸಂದರ್ಶನ ನೀಡಲು ನಿರಾಕರಿಸಿದ್ದಾರೆ ಎಂಬ ಕಟ್ಟು ಕಥೆಯನ್ನು ಸೃಷ್ಟಿಸಲು, ಪಾಕ್ ಮಾಧ್ಯಮಗಳು ಬಾಂಗ್ಲಾದೇಶದ ವರದಿಗಾರನೊಬ್ಬನ ದೇಹಕ್ಕೆ ನನ್ನ ಮುಖವನ್ನು ಡಿಜಿಟಲ್ ಆಗಿ ಫೋಟೋಶಾಪ್ ಮಾಡಿರುವುದಾಗಿ ಇರ್ಫಾನ್ ಬಹಿರಂಗಪಡಿಸಿದ್ದಾರೆ.

ಜಿಯೋಹಾಟ್‌ಸ್ಟಾರ್‌ನ ‘ಚೀಕಿ ಸಿಂಗಲ್ಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಇರ್ಫಾನ್ ಪಠಾಣ್, ಆಧುನಿಕ ಕ್ರೀಡಾ ಜಗತ್ತಿನಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಲು ಮತ್ತು ಅವರ ಹೆಸರನ್ನು ಕೆಡಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಹೇಗೆ ನಕಲಿ ಸುದ್ದಿಗಳನ್ನು ಬಳಸಲಾಗುತ್ತಿದೆ ಎಂಬುದನ್ನು ವಿವರವಾಗಿ ಹಂಚಿಕೊಂಡಿದ್ದಾರೆ.

ವೈರಲ್ ಸುಳ್ಳು ಸುದ್ದಿ ಮತ್ತು ಅಸಲಿಯತ್ತು:

2023 ರ ಏಕದಿನ ವಿಶ್ವಕಪ್ ವೇಳೆ ಇರ್ಫಾನ್ ಪಠಾಣ್ ಅವರು ಬಾಬರ್ ಆಝಂ ಅವರನ್ನು ಸಂದರ್ಶನ ಮಾಡಲು ಹೋದಾಗ, “ಇವರು ನಮ್ಮ ದೇಶವನ್ನು ಸದಾ ಟ್ರೋಲ್ ಮಾಡುತ್ತಾರೆ, ಹಾಗಾಗಿ ನಾನು ಇವರಿಗೆ ಇಂಟರ್ವ್ಯೂ ನೀಡುವುದಿಲ್ಲ” ಎಂದು ಬಾಬರ್ ನಿರಾಕರಿಸಿದರು ಎಂಬ ಸುಳ್ಳು ಸುದ್ದಿಯನ್ನು ಪಾಕಿಸ್ತಾನಿ ಪತ್ರಕರ್ತರು ಹರಡಿದ್ದರು.

ಈ ನಕಲಿ ಸುದ್ದಿಗೆ ವಿಶ್ವಾಸಾರ್ಹತೆ ನೀಡಲು, ಮೈದಾನದಲ್ಲಿ ನಿಜವಾಗಿ ಸಂದರ್ಶನ ನಿರಾಕರಿಸಲ್ಪಟ್ಟಿದ್ದ ಬಾಂಗ್ಲಾದೇಶದ ಯುವ ವರದಿಗಾರನ ಫೋಟೋವನ್ನು ಬಳಸಲಾಗಿತ್ತು. ಆ ವರದಿಗಾರನ ದೇಹದ ಮೇಲೆ ಇರ್ಫಾನ್ ಪಠಾಣ್ ಅವರ ಮುಖವನ್ನು ಎಡಿಟ್ ಮಾಡಿ ಸುಳ್ಳು ಚಿತ್ರವನ್ನು ಸೃಷ್ಟಿಸಲಾಗಿತ್ತು.

ಈ ನಕಲಿ ಫೋಟೋ ಮತ್ತು ಸುದ್ದಿ ನಿಜವೆಂದು ನಂಬಿದ ಲಕ್ಷಾಂತರ ಜನ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು ಶೇರ್ ಮಾಡಿದ್ದರು. ಕೇವಲ ಕೆಲವೇ ದಿನಗಳಲ್ಲಿ ಈ ಪೋಸ್ಟ್ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿತ್ತು.

ಇರ್ಫಾನ್ ಪಠಾಣ್ ಪ್ರತಿಕ್ರಿಯೆ:

ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸದ ಇರ್ಫಾನ್ ಪಠಾಣ್, ಅತ್ಯಂತ ಸಂಯಮದಿಂದಲೇ ತಿರುಗೇಟು ನೀಡಿದ್ದಾರೆ.

“ಇಂತಹ ಟ್ರೋಲ್‌ಗಳು ಮತ್ತು ನಮ್ಮ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು ಪ್ರತಿದಿನ ನಡೆಯುತ್ತಿರುತ್ತದೆ. ಆ ಫೋಟೋ ಸಂಪೂರ್ಣ ಸುಳ್ಳಾಗಿತ್ತು. ಪ್ರತಿದಿನ ಯಾರಾದರೂ ಒಬ್ಬ ಆಟಗಾರನ ಹೆಸರಿನಲ್ಲಿ ಇಂತಹ ಸುಳ್ಳುಗಳನ್ನು ಸೃಷ್ಟಿಸಲಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಪ್ರತಿಯೊಬ್ಬರ ಸುಳ್ಳುಗಳಿಗೂ ನಾವು ಪ್ರತಿಕ್ರಿಯಿಸಲು ಹೋದರೆ, ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೇ ಇಲ್ಲ. ಹಾಗಾಗಿ ನಾನು ಇದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ,” ಎಂದು ಪಠಾಣ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯಾಳು!

ಇರ್ಫಾನ್ ಪಠಾಣ್ ಅವರ ನೇರ ಕ್ರಿಕೆಟ್ ವಿಶ್ಲೇಷಣೆಗಳು ಮತ್ತು ಭಾರತ-ಪಾಕ್ ಕ್ರಿಕೆಟ್ ಪೈಪೋಟಿಯ ಹಿನ್ನೆಲೆಯಲ್ಲಿ, ಅವರು ಆಗಾಗ್ಗೆ ಪಾಕಿಸ್ತಾನಿ ನೆಟ್ಟಿಗರ ಟ್ರೋಲ್‌ಗಳಿಗೆ ಗುರಿಯಾಗುತ್ತಿರುತ್ತಾರೆ. ಆದರೆ, ಈ ಬಾರಿ ಫೋಟೋಶಾಪ್ ಹಂತಕ್ಕೆ ಇಳಿದ ಮಾಧ್ಯಮಗಳ ಕೃತ್ಯವನ್ನು ಬಯಲಿಗೆಳೆಯುವ ಮೂಲಕ ಇರ್ಫಾನ್ ಪಠಾಣ್ ನಕಲಿ ಸುದ್ದಿಗಳ ಜಾಲಕ್ಕೆ ದೊಡ್ಡ ಬ್ರೇಕ್ ಹಾಕಿದ್ದಾರೆ.

Published On - 8:02 am, Sun, 9 August 26

Follow Us
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!