AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ 11

Irfan Pathan's T20 World Cup XI: ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್ ಅನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಜಸ್​ಪ್ರೀತ್ ಬುಮ್ರಾ ವೇಗಿಯಾಗಿ ಆಯ್ಕೆಯಾಗಿದ್ದಾರೆ.

Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
TV9 Web
| Edited By: |

Updated on: Sep 17, 2022 | 10:30 AM

Share

T20 World Cup 2022: ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ (Team India) ಪ್ರಕಟವಾಗಿದೆ. 15 ಸದಸ್ಯರ ಈ ಬಳಗದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್​ನಲ್ಲಿ (India Playing 11) ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ (Irfan Pathan). ಭಾರತ ತಂಡದ ಮಾಜಿ ಆಟಗಾರ ಪಠಾಣ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಪ್ರಕಟಿಸಿದ್ದಾರೆ.

ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಇದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಸೂಕ್ತ ಆಟಗಾರ ಎಂಬುದನ್ನು ಪಠಾಣ್ ಹೇಳಿದ್ದಾರೆ.

5ನೇ ಕ್ರಮಾಂಕದಲ್ಲಿ ಆಲ್​ರೌಂಡರ್ ದೀಪಕ್ ಹೂಡಾ ಅವರನ್ನು ಆಯ್ಕೆ ಮಾಡಿದ್ದು, ಈ ಮೂಲಕ ಹೆಚ್ಚುವರಿ ಬೌಲರ್​ನನ್ನು ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೇ 6ನೇ ಕ್ರಮಾಂಕದ ವೇಗದ ಬೌಲಿಂಗ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯಗೆ ಸ್ಥಾನ ನೀಡಿದ್ದಾರೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ಇರ್ಫಾನ್ ಪಠಾಣ್ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಅಂದರೆ ರಿಷಭ್ ಪಂತ್​ಗಿಂತ ಡಿಕೆ ಉತ್ತಮ ಆಟಗಾರ. ಅದರಲ್ಲೂ ಫಿನಿಶಿಂಗ್ ಪಾತ್ರಕ್ಕೆ ಸೂಕ್ತ ದಿನೇಶ್ ಕಾರ್ತಿಕ್. ಹೀಗಾಗಿ ಪಂತ್ ಅವರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್​ಗೆ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್ ಅನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ಹಾಗೂ ಜಸ್​ಪ್ರೀತ್ ಬುಮ್ರಾ ವೇಗಿಗಳಾಗಿ ಆಯ್ಕೆಯಾಗಿದ್ದಾರೆ. ಇನ್ನು ಸ್ಪಿನ್ನರ್​ಗೆ ಯುಜ್ವೇಂದ್ರ ಚಹಾಲ್​ಗೆ ಮಣೆಹಾಕಲಾಗಿದೆ. ಹೆಚ್ಚುವರಿ ಸ್ಪಿನ್ನರ್ ಆಗಿ ದೀಪಕ್ ಹೂಡಾ ಹಾಗೂ ವೇಗಿಯಾಗಿ ಹಾರ್ದಿಕ್ ಪಾಂಡ್ಯರನ್ನು ಬಳಸಿಕೊಳ್ಳಬಹುದು. ಈ ಮೂಲಕ 6 ಬೌಲರ್​ಗಳನ್ನು ಬಳಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿರಲಿದೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

ಇರ್ಫಾನ್ ಪಠಾಣ್ ಅವರ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿದೆ:

  1. ರೋಹಿತ್ ಶರ್ಮಾ (ನಾಯಕ)
  2. ಕೆಎಲ್ ರಾಹುಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್
  5. ದೀಪಕ್ ಹೂಡಾ
  6. ಹಾರ್ದಿಕ್ ಪಾಂಡ್ಯ
  7. ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)
  8. ಹರ್ಷಲ್ ಪಟೇಲ್
  9. ಭುವನೇಶ್ವರ್ ಕುಮಾರ್
  10. ಜಸ್​ಪ್ರೀತ್ ಬುಮ್ರಾ
  11. ಯುಜ್ವೇಂದ್ರ ಚಹಾಲ್
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್