AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾವನ್ನು ದೂಷಿಸುತ್ತಿದ್ದ ಆಂಗ್ಲರಿಗೆ ಇರ್ಫಾನ್ ಪಠಾಣ್ ಮಾತಿನ ಚಡಿ ಏಟು

ಪಠಾಣ್ ಟ್ವಿಟರ್​ನಲ್ಲಿ "ನನ್ನ ಹಲ್ಲು ಮುರಿದುಹೋಗಿದೆ, ಹಾಗಂತ ನಾನು ಐಪಿಎಲ್ ಅನ್ನು ದೂಷಿಸುವುದಕ್ಕಾಗುತ್ತಾ? ಎಂದು ಟ್ವೀಟ್ ಮಾಡುವ ಮೂಲಕ ನಿಂದಕರಿಗೆ ಸರಿಯಾದ ಟಾಂಗ್ ನೀಡಿದ್ದಾರೆ.

ಟೀಂ ಇಂಡಿಯಾವನ್ನು ದೂಷಿಸುತ್ತಿದ್ದ ಆಂಗ್ಲರಿಗೆ ಇರ್ಫಾನ್ ಪಠಾಣ್ ಮಾತಿನ ಚಡಿ ಏಟು
ಇರ್ಫಾನ್ ಪಠಾಣ್
Follow us
TV9 Web
| Updated By: ಪೃಥ್ವಿಶಂಕರ

Updated on:Sep 11, 2021 | 8:45 PM

ಐಪಿಎಲ್ 2021, ಪ್ರಸ್ತುತ ಹಲವು ಮಾಜಿ ಇಂಗ್ಲೆಂಡ್ ಕ್ರಿಕೆಟಿಗರು, ಪತ್ರಕರ್ತರು ಮತ್ತು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಐಪಿಎಲ್ ಮೇಲೆ ಇಂಗ್ಲಿಷ್ ಶಿಬಿರದ ಅಸಮಾಧಾನಕ್ಕೆ ಕಾರಣ ಈಗಾಗಲೇ ಎಲ್ಲರಿಗೂ ತಿಳಿದಿದೆ – ಮ್ಯಾಂಚೆಸ್ಟರ್ ಟೆಸ್ಟ್. ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಿರ್ಣಾಯಕ ಪಂದ್ಯ ಶುಕ್ರವಾರ ಆರಂಭವಾಗಬೇಕಿತ್ತು. ಆದರೆ ಕೊರೊನಾ ವೈರಸ್ ಪ್ರಕರಣಗಳಿಂದಾಗಿ ಅದನ್ನು ರದ್ದುಗೊಳಿಸಬೇಕಾಯಿತು. ಈ ಕಾರಣದಿಂದಾಗಿ ಇಂಗ್ಲೆಂಡ್ ಕ್ರಿಕೆಟ್ ತಜ್ಞರು ಬಿಸಿಸಿಐ ಅನ್ನು ದೂಷಿಸುತ್ತಿದ್ದಾರೆ ಮತ್ತು ಐಪಿಎಲ್‌ಗಾಗಿ ಆಟಗಾರರು ದುರಾಸೆ ಪಡುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡುತ್ತಿದ್ದಾರೆ. ಅಂಥ ಕೆಲವರಿಗೆ ಭಾರತೀಯ ಮಾಜಿ ಕ್ರಿಕೆಟ್ ಇರ್ಫಾನ್ ಪಠಾಣ್ ತಮಾಷೆಯ ಉತ್ತರ ನೀಡಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಈ ಪ್ರಸಿದ್ಧ ಟಿ 20 ಲೀಗ್‌ನ 14 ನೇ ಸೀಸನ್ ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದ್ದು, ಇದಕ್ಕಾಗಿ ತಂಡಗಳು ಅಲ್ಲಿಗೆ ತಲುಪಿವೆ. ಮ್ಯಾಂಚೆಸ್ಟರ್ ಟೆಸ್ಟ್ ಅಧಿಕೃತವಾಗಿ ಸೆಪ್ಟೆಂಬರ್ 14 ರಂದು ಕೊನೆಗೊಳ್ಳಬೇಕಿತ್ತು. ನಂತರ ಆಟಗಾರರು ಇಂಗ್ಲೆಂಡಿನಿಂದ ನೇರವಾಗಿ ಯುಎಇಗೆ ಹೊರಡಬೇಕಾಯಿತು. ಈಗ ಟೆಸ್ಟ್ ಆಡಲಾಗಲಿಲ್ಲ ಮತ್ತು ಭಾರತೀಯ ಆಟಗಾರರು ಯುಎಇ ತಲುಪಲು ಆರಂಭಿಸಿದ್ದಾರೆ. ಈ ಕಾರಣದಿಂದಾಗಿ, ಇಡೀ ಇಂಗ್ಲೀಷ್ ಮಾಧ್ಯಮಗಳು, ಸೋಷಿಯಲ್ ಮೀಡಿಯಾಗಳು, ಮಾಜಿ ಇಂಗ್ಲೀಷ್ ಕ್ರಿಕೆಟಿಗರು ಐಪಿಎಲ್ ಅನ್ನು ದೂಷಿಸುವ ಟೀಕೆಗಳಿಂದ ತುಂಬಿವೆ.

ನನ್ನ ಹಲ್ಲು ಮುರಿದಿದೆ, ಹಾಗಂತ ನಾನು ಐಪಿಎಲ್ ಅನ್ನು ದೂಷಿಸುವುದಕ್ಕಾಗುತ್ತಾ? ಟೀಂ ಇಂಡಿಯಾದ ಸಹಾಯಕ ಫಿಸಿಯೊ ಯೋಗೀಶ್ ಪರ್ಮಾರ್ ಕೊರೊನಾ ಸೋಂಕಿಗೆ ಒಳಗಾದ ನಂತರ ಭಾರತೀಯ ಆಟಗಾರರು ಮ್ಯಾಂಚೆಸ್ಟರ್ ಟೆಸ್ಟ್ ಆಡಲು ನಿರಾಕರಿಸಿದರು. ಇದರ ನಂತರ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು. ಇಲ್ಲಿಂದ, ಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾನ್, ಕೆವಿನ್ ಪೀಟರ್ಸನ್, ಮಾಜಿ ಬೌಲರ್ ಸ್ಟೀವ್ ಹಾರ್ಮಿಸನ್ ಸೇರಿದಂತೆ ಇಂಗ್ಲೆಂಡ್‌ನ ಕ್ರಿಕೆಟ್ ಪತ್ರಕರ್ತರು ಐಪಿಎಲ್ ಅನ್ನು ದೂಷಿಸುತ್ತಿದ್ದಾರೆ.

ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಈ ಜನರಿಗೆ ಚಕಿತ ಉತ್ತರ ನೀಡಿದ್ದಾರೆ. ಪಠಾಣ್ ಟ್ವಿಟರ್​ನಲ್ಲಿ “ನನ್ನ ಹಲ್ಲು ಮುರಿದುಹೋಗಿದೆ, ಹಾಗಂತ ನಾನು ಐಪಿಎಲ್ ಅನ್ನು ದೂಷಿಸುವುದಕ್ಕಾಗುತ್ತಾ? ಎಂದು ಟ್ವೀಟ್ ಮಾಡುವ ಮೂಲಕ ನಿಂದಕರಿಗೆ ಸರಿಯಾದ ಟಾಂಗ್ ನೀಡಿದ್ದಾರೆ.

ಭಾರತೀಯ ಆಟಗಾರರು ಟೆಸ್ಟ್ ಆಡಲು ನಿರಾಕರಿಸಿದರು ಭಾರತೀಯ ಆಟಗಾರರು ಟೆಸ್ಟ್ ಪಂದ್ಯಗಳನ್ನು ಆಡಲು ಸಿದ್ಧರಿರಲಿಲ್ಲ. ಏಕೆಂದರೆ ಪಂದ್ಯವನ್ನು ಒಂದು ದಿನ ಅಥವಾ ಎರಡು ದಿನ ತಡವಾಗಿ ಆರಂಭಿಸಿದರೆ, ಆ ಸಮಯದಲ್ಲಿ ಸೋಂಕಿನ ಪ್ರಕರಣವು ಹೆಚ್ಚಾದರೆ, ಆಗ ಅವರು ಸುಮಾರು 2 ವಾರಗಳ ಕಾಲ ಇಂಗ್ಲೆಂಡಿನಲ್ಲಿ ಕ್ವಾರಂಟೈನ್​ನಲ್ಲಿ ಇರಬೇಕಾಗಿತ್ತು. ಇದರಿಂದ ಪ್ರಮುಖ ಆಟಗಾರರು ಐಪಿಎಲ್​ನ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುತ್ತಿರಲಿಲ್ಲ. ಆದಾಗ್ಯೂ, ಭಾರತೀಯ ಆಟಗಾರರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. ಇಂಗ್ಲಿಷ್ ಬೋರ್ಡ್ ಕೂಡ ಅವರಿಗೆ ಸುರಕ್ಷತೆಯ ಸಂಪೂರ್ಣ ಭರವಸೆ ನೀಡಿತ್ತು. ಅದೇನೇ ಇದ್ದರೂ, ಭಾರತೀಯ ಆಟಗಾರರು ಒಗ್ಗಟ್ಟಿನಿಂದ ಟೆಸ್ಟ್ ಪಂದ್ಯವನ್ನು ಆಡುವುದಿಲ್ಲ ಎಂಬ ನಿಲುವನ್ನು ವ್ಯಕ್ತಪಡಿಸಿದರು. ನಂತರ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು.

Published On - 8:45 pm, Sat, 11 September 21

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ