AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರಂಭಿಕರ ವೈಫಲ್ಯ: ಪವರ್​ಪ್ಲೇನಲ್ಲೇ ಪವರ್​ ಕಳೆದುಕೊಂಡ ಟೀಮ್ ಇಂಡಿಯಾ

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯ ಮಂಗಳವಾರ ನಡೆಯಲಿದೆ. ಗಯಾನಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದರೆ ಸರಣಿ ಕೆರಿಬಿಯನ್ನರ ಪಾಲಾಗಲಿದೆ.

ಆರಂಭಿಕರ ವೈಫಲ್ಯ: ಪವರ್​ಪ್ಲೇನಲ್ಲೇ ಪವರ್​ ಕಳೆದುಕೊಂಡ ಟೀಮ್ ಇಂಡಿಯಾ
Shubman Gill-Ishan Kishan
TV9 Web
| Updated By: ಝಾಹಿರ್ ಯೂಸುಫ್|

Updated on: Aug 07, 2023 | 6:11 PM

Share

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ (Team India) ಮುಗ್ಗರಿಸಿದೆ. ಚುಟುಕು ಕ್ರಿಕೆಟ್​ನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಭಾರತ ತಂಡವು ಕೆರಿಬಿಯನ್ ನಾಡಲ್ಲಿ ಕಮಾಲ್ ಮಾಡುವಲ್ಲಿ ಎಡವುತ್ತಿದೆ. ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ಭಾರತೀಯ ಬ್ಯಾಟರ್​ಗಳು ಕೈಕೊಟ್ಟಿದ್ದರು. ಇದಕ್ಕೆ ಸಾಕ್ಷಿಯೇ 2 ಪಂದ್ಯಗಳಲ್ಲೂ ಭಾರತೀಯ ಬ್ಯಾಟ್ಸ್​ಮನ್​ಗಳು ಕಲೆಹಾಕಿದ ಮೊತ್ತ.

ಮೊದಲ ಟಿ20 ಪಂದ್ಯದಲ್ಲಿ 145 ರನ್​ಗಳಿಸಿ 4 ರನ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, 2ನೇ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 152 ರನ್​ಗಳು. ಅಂದರೆ ಅತಿರಥ ಮಹಾರಥರು ಎನಿಸಿಕೊಂಡಿರುವ ಬ್ಯಾಟರ್​ಗಳಿದ್ದರೂ ಸ್ಪರ್ಧಾತ್ಮಕ ಮೊತ್ತಗಳಿಸುವಲ್ಲಿ ಭಾರತ ತಂಡ ವಿಫಲವಾಗುತ್ತಿದೆ. ಇದಕ್ಕೆ ಒಂದು ಕಾರಣ ಉತ್ತಮ ಆರಂಭದ ವೈಫಲ್ಯತೆ.

ಆರಂಭಿಕರಿಬ್ಬರೂ ವಿಫಲ:

ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಇಬ್ಬರಿಬ್ಬರ ಜೊತೆಯಾಟದ ಅಂಕಿ ಅಂಶಗಳು. ಅಂದರೆ ಕೊನೆಯ 8 ಇನಿಂಗ್ಸ್​ಗಳನ್ನು ತೆಗೆದುಕೊಂಡರೂ ಗಿಲ್ ಹಾಗೂ ಇಶಾನ್ ಮೊದಲ ವಿಕೆಟ್​ಗೆ ಕನಿಷ್ಠ 30 ರನ್​ಗಳ ಜೊತೆಯಾಟವಾಡಿಲ್ಲ.

27, 12, 3, 10, 17, 7, 5, 16…ಇದು ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಅವರ ಕೊನೆಯ 8 ಟಿ20 ಇನಿಂಗ್ಸ್​ಗಳ ಜೊತೆಯಾಟ. ಅಂದರೆ ಪವರ್​ಪ್ಲೇನಲ್ಲೇ ಟೀಮ್ ಇಂಡಿಯಾ ಮೊದಲ ವಿಕೆಟ್​ ಕಳೆದುಕೊಳ್ಳುತ್ತಿರುವುದು ಸ್ಪಷ್ಟ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ 6 ರನ್​ಗಳಿಸಿ ಔಟಾದರೆ, ಶುಭ್​ಮನ್ ಗಿಲ್ ಕೇವಲ 3 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು 2ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ 7 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಇಶಾನ್ ಕಿಶನ್ 23 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 27 ರನ್​ ಮಾತ್ರ.

ಇದನ್ನೂ ಓದಿ: 7 ವರ್ಷಗಳಲ್ಲಿ ಪಾಕ್​​ ತಂಡದಲ್ಲಿ ಮಹತ್ವದ ಬದಲಾವಣೆ: ಟೀಮ್ ಇಂಡಿಯಾದಲ್ಲಿದ್ದಾರೆ ಪಂಚ ಪಾಂಡವರು..!

ಅಂದರೆ ಪವರ್​ಪ್ಲೇನಲ್ಲಿ ಅಬ್ಬರಿಸುವಲ್ಲಿ ಟೀಮ್ ಇಂಡಿಯಾದ ಇಬ್ಬರು ಆರಂಭಿಕರುವ ವಿಫಲರಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಕೂಡ ಬೇಗನೆ ವಿಕೆಟ್ ಒಪ್ಪಿಸುತ್ತಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಇದಾಗ್ಯೂ ಮೂರನೇ ಟಿ20 ಪಂದ್ಯದಲ್ಲಾದರೂ ಇಶಾನ್ ಹಾಗೂ ಗಿಲ್ ಭಾರತ ತಂಡಕ್ಕೆ ಶುಭಾರಂಭ ಒದಗಿಸಲಿದ್ದಾರಾ ಕಾದು ನೋಡಬೇಕಿದೆ.

ಮಾಡು ಇಲ್ಲವೇ ಮಡಿ ಪಂದ್ಯ:

ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯ ಮಂಗಳವಾರ ನಡೆಯಲಿದೆ. ಗಯಾನಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದರೆ ಸರಣಿ ಕೆರಿಬಿಯನ್ನರ ಪಾಲಾಗಲಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ