AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾನ್ಸ್​ ಸಿಗಬೇಕು, ಕ್ರಮಾಂಕ ವಿಷಯವಲ್ಲ ಎಂದು ಸಾರಿದ ಇಶಾನ್ ಕಿಶನ್

Ishan Kishan: 4ನೇ ಹಾಗೂ 5ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಅವರನ್ನು ಹೊರತುಪಡಿಸಿ ಬೇರೆ ಆಯ್ಕೆಯಿಲ್ಲ ಅಂದುಕೊಂಡಿದ್ದವರಿಗೆ ಇಶಾನ್ ಕಿಶನ್ ಬ್ಯಾಟಿಂಗ್​ ಮೂಲಕವೇ ಉತ್ತರ ನೀಡಿದ್ದಾರೆ. ಇತ್ತ ಎಡಗೈ ದಾಂಡಿಗರ ಕೊರತೆಯನ್ನು ಹೊಂದಿರುವ ಟೀಮ್ ಇಂಡಿಯಾ ಮುಂದಿರುವ ಅತ್ಯುತ್ತಮ ಆಯ್ಕೆ ಇಶಾನ್ ಕಿಶನ್. ಏಕೆಂದರೆ ತಾನು ಯಾವುದೇ ಕ್ರಮಾಂಕದಲ್ಲೂ ಆಡಬಲ್ಲೆ ಎಂಬುದನ್ನು ಪಾಕ್ ವಿರುದ್ಧದ ಪಂದ್ಯದ ಮೂಲಕ ಯುವ ದಾಂಡಿಗ ಸಾರಿದ್ದಾರೆ.

ಚಾನ್ಸ್​ ಸಿಗಬೇಕು, ಕ್ರಮಾಂಕ ವಿಷಯವಲ್ಲ ಎಂದು ಸಾರಿದ ಇಶಾನ್ ಕಿಶನ್
Ishan Kishan
TV9 Web
| Edited By: |

Updated on:Sep 07, 2023 | 6:25 PM

Share

ಈ ಬಾರಿಯ ಏಷ್ಯಾಕಪ್ ಆರಂಭಕ್ಕೂ ಮುನ್ನ ಬಹುಚರ್ಚಿತವಾದ ವಿಷಯ ಎಂದರೆ ಟೀಮ್ ಇಂಡಿಯಾದ ಆಯ್ಕೆ. ಅದರಲ್ಲೂ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಫಿಟ್​ನೆಸ್. ಈ ಇಬ್ಬರ ಫಿಟ್​ನೆಸ್​ ವರದಿ ಬಂದ ಬಳಿಕವಷ್ಟೇ ಭಾರತ ತಂಡವನ್ನು ಆಯ್ಕೆ ಮಾಡಲಾಗಿತ್ತು. ಏಕೆಂದರೆ ಮಧ್ಯಮ ಕ್ರಮಾಂಕದಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಬೇರೊಂದು ಆಯ್ಕೆಯಿಲ್ಲ ಎಂಬುದನ್ನು ಆಯ್ಕೆ ಸಮಿತಿಯೇ ಸಾರಿದ್ದರು.

ಆದರೆ ಏಷ್ಯಾಕಪ್ ತಂಡದ ಆಯ್ಕೆಯ ಬೆನ್ನಲ್ಲೇ ಕೆಎಲ್ ರಾಹುಲ್ ಸಂಪೂರ್ಣ ಫಿಟ್​ ಆಗಿಲ್ಲ ಎಂಬ ವಿಚಾರ ಬಹಿರಂಗವಾಗಿತ್ತು. ಆದರೆ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ ರಾಹುಲ್ ಅವರನ್ನು ತಂಡದಿಂದ ಕೈ ಬಿಡುವ ಕಠಿಣ ನಿರ್ಧಾರಕ್ಕೆ ಆಯ್ಕೆ ಸಮಿತಿ ಕೈ ಹಾಕಲಿಲ್ಲ. ಬದಲಾಗಿ ಏಷ್ಯಾಕಪ್​ನ ಮೊದಲೆರಡು ಪಂದ್ಯಗಳಲ್ಲಿ ಕೆಎಲ್​ಆರ್ ಬದಲಿಗೆ ಮತ್ತೋರ್ವ ಆಟಗಾರನಿಗೆ ಚಾನ್ಸ್ ನೀಡಲು ನಿರ್ಧರಿಸಿತು.

ಅದರಂತೆ ತಂಡದಲ್ಲಿ 2ನೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಆಯ್ಕೆಯಾಗಿದ್ದ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು. ಇಲ್ಲಿ  ವಿಕೆಟ್ ಕೀಪರ್ ಬ್ಯಾಟರ್​ ಆಗಿ ಸ್ಥಾನ ಪಡೆದಿದ್ದು ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಮಾತ್ರ. ಹೀಗಾಗಿ ಕಿಶನ್ ಅವರನ್ನೇ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಕೂಡ ಟೀಮ್ ಇಂಡಿಯಾ ಮುಂದಿತ್ತು.

ಆದರೆ ಆರಂಭಿಕ ಆಟಗಾರನಾಗಿದ್ದ ಇಶಾನ್ ಕಿಶನ್ ಅವರನ್ನು ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಸುವುದು ಎಂಬುದು ಟೀಮ್ ಇಂಡಿಯಾ ನಾಯಕ ಹಾಗೂ ಕೋಚ್ ಮುಂದಿದ್ದ ದೊಡ್ಡ ಸವಾಲು. ಏಕೆಂದರೆ ಆರಂಭಿಕನಾಗಿ ಕಣಕ್ಕಿಳಿಸಿದರೆ ಇಡೀ ತಂಡದ ಬ್ಯಾಟಿಂಗ್ ಕ್ರಮಾಂಕ ಬದಲಿಸಬೇಕಿತ್ತು. ಹೀಗಾಗಿ ಅಂತಿಮವಾಗಿ ಇಶಾನ್ ಕಿಶನ್ ಅವರನ್ನು 5ನೇ ಕ್ರಮಾಂಕದಲ್ಲೇ ಆಡಿಸಲಾಯಿತು.

ಅದರಂತೆ ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್​ ಪಂದ್ಯದಲ್ಲಿ ಇಶಾನ್ ಕಿಶನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಾಗ ಟೀಮ್ ಇಂಡಿಯಾ 48 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಹೊಸ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ಎಡಗೈ ದಾಂಡಿಗ ಪಾಕ್ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು.

ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್​ಗೆ 138 ರನ್​ಗಳ ಜೊತೆಯಾಟವಾಡಿದರು. ಅಲ್ಲದೆ 81 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 82 ರನ್ ಬಾರಿಸಿದರು. ಅಂದರೆ ಪಾಕಿಸ್ತಾನ್ ವಿರುದ್ಧದ ಒತ್ತಡದ ಪಂದ್ಯದಲ್ಲೇ ಇಶಾನ್ ಕಿಶನ್ ಅದ್ಭುತವಾಗಿ ಬ್ಯಾಟ್ ಬೀಸಿದ್ದರು.

ಈ ಮೂಲಕ ನನಗೆ ಕ್ರಮಾಂಕ ವಿಷಯವಲ್ಲ. ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಬೇಕು ಎಂಬುದನ್ನು ಸಾರಿದ್ದರು. ಇದೀಗ ಈ ಅದ್ಭುತ ಪ್ರದರ್ಶನವೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್​ಗೆ ಹೊಸ ಚಿಂತೆಯನ್ನು ಉಂಟು ಮಾಡಿದೆ.

ಏಕೆಂದರೆ 4ನೇ ಹಾಗೂ 5ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಅವರನ್ನು ಹೊರತುಪಡಿಸಿ ಬೇರೆ ಆಯ್ಕೆಯಿಲ್ಲ ಅಂದುಕೊಂಡಿದ್ದವರಿಗೆ ಇಶಾನ್ ಕಿಶನ್ ಬ್ಯಾಟಿಂಗ್​ ಮೂಲಕವೇ ಉತ್ತರ ನೀಡಿದ್ದಾರೆ. ಇತ್ತ ಎಡಗೈ ದಾಂಡಿಗರ ಕೊರತೆಯನ್ನು ಹೊಂದಿರುವ ಟೀಮ್ ಇಂಡಿಯಾ ಮುಂದಿರುವ ಅತ್ಯುತ್ತಮ ಆಯ್ಕೆ ಇಶಾನ್ ಕಿಶನ್. ಏಕೆಂದರೆ ತಾನು ಯಾವುದೇ ಕ್ರಮಾಂಕದಲ್ಲೂ ಆಡಬಲ್ಲೆ ಎಂಬುದನ್ನು ಪಾಕ್ ವಿರುದ್ಧದ ಪಂದ್ಯದ ಮೂಲಕ ಯುವ ದಾಂಡಿಗ ಸಾರಿದ್ದಾರೆ.

ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಅವರು ಪಾಕಿಸ್ತಾನ್ ವಿರುದ್ಧದ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಆದರೆ ಇದಕ್ಕಾಗಿ ಇನ್​ ಫಾರ್ಮ್​ನಲ್ಲಿರುವ ಇಶಾನ್ ಕಿಶನ್ ಅವರನ್ನು ಆಡುವ ಬಳಗದಿಂದ ಕೈ ಬಿಡುತ್ತಾರಾ? ಎಂಬುದೇ ಪ್ರಶ್ನೆ.

ಏಕೆಂದರೆ ಆರಂಭಿಕನ ಸ್ಥಾನಕ್ಕೆ ಸೂಕ್ತ ಎಂದಿದ್ದ ಇಶಾನ್ ಕಿಶನ್ ಈ ಹಿಂದೆ 3ನೇ ಕ್ರಮಾಂಕದಲ್ಲೂ ಕಣಕ್ಕಿಳಿದು ಭರ್ಜರಿ ಪ್ರದರ್ಶನ ನೀಡಿದ್ದರು. ಇದೀಗ 5ನೇ ಕ್ರಮಾಂಕದಲ್ಲೂ ಅದ್ಭುತವಾಗಿ ಬ್ಯಾಟ್ ಬೀಸಿದ್ದಾರೆ. ಅಷ್ಟೇ ಅಲ್ಲದೆ ಕಳೆದ ಏಕದಿನ ಪಂದ್ಯಗಳಲ್ಲಿ ಇಶಾನ್ ಕಿಶನ್ ಸತತವಾಗಿ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಇದನ್ನೂ ಓದಿ: ಎಡಗೈ ವೇಗಿಗಳ ಮುಂದೆ ಮಂಡಿಯೂರುವ ಟೀಮ್ ಇಂಡಿಯಾದ ದಿಗ್ಗಜರು

ಇತ್ತ ಟೀಮ್ ಇಂಡಿಯಾದ ಟಾಪ್-6 ಕ್ರಮಾಂಕದಲ್ಲಿ ಯಾವುದೇ ಎಡಗೈ ದಾಂಡಿಗ ಬೇರೆ ಇಲ್ಲ. ಹೀಗಾಗಿ ಎಲ್ಲಾ ರೀತಿಯಲ್ಲೂ ಇಶಾನ್ ಕಿಶನ್ ಪ್ಲೇಯಿಂಗ್ ಇಲೆವೆನ್​​ಗೆ ಆಯ್ಕೆಗೆ ಅರ್ಹರು. ಇದಾಗ್ಯೂ ಮುಂದಿನ ಪಂದ್ಯದಲ್ಲಿ  ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಅವರನ್ನು ಕಣಕ್ಕಿಳಿಸಲಿದ್ದಾರಾ ಅಥವಾ ಇವರಿಬ್ಬರಲ್ಲಿ ಒಬ್ಬರನ್ನು ಕೈ ಬಿಟ್ಟು ಇಶಾನ್​ ಕಿಶನ್​ಗೆ ಚಾನ್ಸ್ ನೀಡಲಿದ್ದಾರಾ ಎಂಬುದೇ ಈಗ ಕುತೂಹಲ.

Published On - 6:22 pm, Thu, 7 September 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ