AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್

ಚೆನ್ನೈನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ಇಶಾನ್ ಕಿಶನ್ 70 ರನ್ ಗಳಿಸಿ ಗೆಲುವಿಗೆ ಕಾರಣರಾದರು. ಈ ಸೋಲಿನಿಂದ ಸಿಎಸ್‌ಕೆ ಪ್ಲೇಆಫ್ ಕನಸು ಬಹುತೇಕ ಅಂತ್ಯವಾಗಿದೆ. ಇಶಾನ್ ಕಿಶನ್ 'ವಿಸಿಲ್ ಪೋಡು' ಘೋಷವಾಕ್ಯ ಅನುಕರಿಸಿ ಮಾಡಿದ ವೈಲ್ಡ್ ಸೆಲೆಬ್ರೇಷನ್ ಸದ್ಯ ವೈರಲ್ ಆಗಿದ್ದು, ಸಿಎಸ್‌ಕೆ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ.

‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್
ಇಶನ್
ರಾಜೇಶ್ ದುಗ್ಗುಮನೆ
|

Updated on: May 19, 2026 | 8:47 AM

Share

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ (ಮೇ 18) ನಡೆದ ಪ್ರಮುಖ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲ್ಪಟ್ಟಿದ್ದು, ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ. ಮತ್ತೊಂದೆಡೆ ಎಸ್‌ಆರ್‌ಎಚ್ ತಂಡವು ಅಧಿಕೃತವಾಗಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ಚೆಪಾಕ್‌ನ ನಿಧಾನಗತಿಯ ಪಿಚ್‌ನಲ್ಲಿ ಸಿಎಸ್‌ಕೆ ನೀಡಿದ್ದ 181 ರನ್‌ಗಳ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ತಂಡಕ್ಕೆ ಇಶಾನ್ ಕಿಶನ್ ಆಸರೆಯಾದರು. ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಕಿಶನ್ 47 ಎಸೆತಗಳಲ್ಲಿ 70 ರನ್ ಚಚ್ಚಿದರು. ಹೆನ್ರಿಚ್ ಕ್ಲಾಸೆನ್ ಅವರೊಂದಿಗೆ ಮೂರನೇ ವಿಕೆಟ್‌ಗೆ 75 ರನ್‌ಗಳ ಮಹತ್ವದ ಜೊತೆಯಾಟವಾಡಿದ ಇಶಾನ್, ತಂಡವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಹೈದರಾಬಾದ್ ಇನ್ನೊಂದು ಓವರ್ ಬಾಕಿ ಇರುವಂತೆಯೇ ಗುರಿ ತಲುಪಿತು.

ಪಂದ್ಯ ಮುಗಿದ ಬಳಿಕ ಇಶಾನ್ ಕಿಶನ್ ಮಾಡಿದ ಸೆಲೆಬ್ರೇಷನ್ ಸದ್ಯ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕೃತ ಘೋಷವಾಕ್ಯ ‘ವಿಸಿಲ್ ಪೋಡು’ನ ಅನುಕರಿಸಿದರು. ಇಶಾನ್ ಕಿಶನ್ ಮೈದಾನದಲ್ಲೇ ನಿಂತು ಚೆಪಾಕ್ ಪ್ರೇಕ್ಷಕರನ್ನು ನೋಡಿ ಬಾಯಿಗೆ ಕೈಯಿಟ್ಟು ಸೀಟಿ ಊದುವಂತೆ ಸನ್ನೆ ಮಾಡಿದರು. ಅಷ್ಟೇ ಅಲ್ಲದೆ, ಮನೆಯನ್ನು ತೋರಿಸಿದರು. ನೀವು ಮನೆಗೆ ಹೋದಿರಿ ಎಂಬಂತೆ ಇತ್ತು. ಸಿಎಸ್‌ಕೆ ತಂಡವನ್ನು ಅವರದೇ ತವರು ಮೈದಾನದಲ್ಲಿ ಮಣಿಸಿದ ಜೋಶ್‌ನಲ್ಲಿ ಇಶಾನ್ ಕಿಶನ್ ಈ ರೀತಿ ಸಂಭ್ರಮಿಸಿದ್ದು, ಚೆನ್ನೈ ಅಭಿಮಾನಿಗಳಿಗೆ ಕೊಂಚ ಸಿಟ್ಟು ತರಿಸಿದೆ.

ಇದನ್ನೂ ಓದಿ: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್

ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ 16 ಅಂಕಗಳೊಂದಿಗೆ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದರ ಜೊತೆಗೆ ಗುಜರಾತ್ ಟೈಟನ್ಸ್ ಹಾಗೂ ಈಗಾಗಲೇ 18 ಅಂಕ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಅಧಿಕೃತವಾಗಿ ನಾಕೌಟ್ ಹಂತ ತಲುಪಿವೆ. 13 ಪಂದ್ಯಗಳಿಂದ ಕೇವಲ 12 ಅಂಕ ಗಳಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಕನಸು ಸದ್ಯ ತಾಂತ್ರಿಕವಾಗಿ ಮಾತ್ರ ಜೀವಂತವಾಗಿದ್ದು, ಈ ಸೀಸನ್‌ನಿಂದ ಹೊರಬೀಳುವುದು ಬಹುತೇಕ ಖಚಿತವಾಗಿದೆ.

ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ