AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್

ಚೆನ್ನೈನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ಇಶಾನ್ ಕಿಶನ್ 70 ರನ್ ಗಳಿಸಿ ಗೆಲುವಿಗೆ ಕಾರಣರಾದರು. ಈ ಸೋಲಿನಿಂದ ಸಿಎಸ್‌ಕೆ ಪ್ಲೇಆಫ್ ಕನಸು ಬಹುತೇಕ ಅಂತ್ಯವಾಗಿದೆ. ಇಶಾನ್ ಕಿಶನ್ 'ವಿಸಿಲ್ ಪೋಡು' ಘೋಷವಾಕ್ಯ ಅನುಕರಿಸಿ ಮಾಡಿದ ವೈಲ್ಡ್ ಸೆಲೆಬ್ರೇಷನ್ ಸದ್ಯ ವೈರಲ್ ಆಗಿದ್ದು, ಸಿಎಸ್‌ಕೆ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ.

‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್
ಇಶನ್
ರಾಜೇಶ್ ದುಗ್ಗುಮನೆ
|

Updated on: May 19, 2026 | 8:47 AM

Share

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ (ಮೇ 18) ನಡೆದ ಪ್ರಮುಖ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲ್ಪಟ್ಟಿದ್ದು, ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ. ಮತ್ತೊಂದೆಡೆ ಎಸ್‌ಆರ್‌ಎಚ್ ತಂಡವು ಅಧಿಕೃತವಾಗಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ಚೆಪಾಕ್‌ನ ನಿಧಾನಗತಿಯ ಪಿಚ್‌ನಲ್ಲಿ ಸಿಎಸ್‌ಕೆ ನೀಡಿದ್ದ 181 ರನ್‌ಗಳ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ತಂಡಕ್ಕೆ ಇಶಾನ್ ಕಿಶನ್ ಆಸರೆಯಾದರು. ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಕಿಶನ್ 47 ಎಸೆತಗಳಲ್ಲಿ 70 ರನ್ ಚಚ್ಚಿದರು. ಹೆನ್ರಿಚ್ ಕ್ಲಾಸೆನ್ ಅವರೊಂದಿಗೆ ಮೂರನೇ ವಿಕೆಟ್‌ಗೆ 75 ರನ್‌ಗಳ ಮಹತ್ವದ ಜೊತೆಯಾಟವಾಡಿದ ಇಶಾನ್, ತಂಡವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಹೈದರಾಬಾದ್ ಇನ್ನೊಂದು ಓವರ್ ಬಾಕಿ ಇರುವಂತೆಯೇ ಗುರಿ ತಲುಪಿತು.

ಪಂದ್ಯ ಮುಗಿದ ಬಳಿಕ ಇಶಾನ್ ಕಿಶನ್ ಮಾಡಿದ ಸೆಲೆಬ್ರೇಷನ್ ಸದ್ಯ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕೃತ ಘೋಷವಾಕ್ಯ ‘ವಿಸಿಲ್ ಪೋಡು’ನ ಅನುಕರಿಸಿದರು. ಇಶಾನ್ ಕಿಶನ್ ಮೈದಾನದಲ್ಲೇ ನಿಂತು ಚೆಪಾಕ್ ಪ್ರೇಕ್ಷಕರನ್ನು ನೋಡಿ ಬಾಯಿಗೆ ಕೈಯಿಟ್ಟು ಸೀಟಿ ಊದುವಂತೆ ಸನ್ನೆ ಮಾಡಿದರು. ಅಷ್ಟೇ ಅಲ್ಲದೆ, ಮನೆಯನ್ನು ತೋರಿಸಿದರು. ನೀವು ಮನೆಗೆ ಹೋದಿರಿ ಎಂಬಂತೆ ಇತ್ತು. ಸಿಎಸ್‌ಕೆ ತಂಡವನ್ನು ಅವರದೇ ತವರು ಮೈದಾನದಲ್ಲಿ ಮಣಿಸಿದ ಜೋಶ್‌ನಲ್ಲಿ ಇಶಾನ್ ಕಿಶನ್ ಈ ರೀತಿ ಸಂಭ್ರಮಿಸಿದ್ದು, ಚೆನ್ನೈ ಅಭಿಮಾನಿಗಳಿಗೆ ಕೊಂಚ ಸಿಟ್ಟು ತರಿಸಿದೆ.

ಇದನ್ನೂ ಓದಿ: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್

ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ 16 ಅಂಕಗಳೊಂದಿಗೆ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದರ ಜೊತೆಗೆ ಗುಜರಾತ್ ಟೈಟನ್ಸ್ ಹಾಗೂ ಈಗಾಗಲೇ 18 ಅಂಕ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಅಧಿಕೃತವಾಗಿ ನಾಕೌಟ್ ಹಂತ ತಲುಪಿವೆ. 13 ಪಂದ್ಯಗಳಿಂದ ಕೇವಲ 12 ಅಂಕ ಗಳಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಕನಸು ಸದ್ಯ ತಾಂತ್ರಿಕವಾಗಿ ಮಾತ್ರ ಜೀವಂತವಾಗಿದ್ದು, ಈ ಸೀಸನ್‌ನಿಂದ ಹೊರಬೀಳುವುದು ಬಹುತೇಕ ಖಚಿತವಾಗಿದೆ.

ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ