AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಡಿಯಲು ಸಾಧ್ಯವಾದ್ರೆ ಹಿಡಿಯಿರಿ: ಪಂಜಾಬ್ ಕಿಂಗ್ಸ್ ಕಾಲೆಳೆದ ಇಶಾನ್ ಕಿಶನ್!

IPL 2026 SRH vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್​ ತಂಡ 20 ಓವರ್​ಗಳಲ್ಲಿ 235 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 202 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಎಸ್​ಆರ್​​ಹೆಚ್ ತಂಡ 33 ರನ್​ಗಳ ಜಯ ಸಾಧಿಸಿದೆ.

ಹಿಡಿಯಲು ಸಾಧ್ಯವಾದ್ರೆ ಹಿಡಿಯಿರಿ: ಪಂಜಾಬ್ ಕಿಂಗ್ಸ್ ಕಾಲೆಳೆದ ಇಶಾನ್ ಕಿಶನ್!
Ishan Kishan
ಝಾಹಿರ್ ಯೂಸುಫ್
|

Updated on: May 07, 2026 | 1:28 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಾಡಿದ ಫೀಲ್ಡಿಂಗ್ ಪ್ರಮಾದಗಳು ತಂಡಕ್ಕೆ ಭಾರೀ ಹೊಡೆತ ನೀಡಿವೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಸ್ಫೋಟಕ ಓಪನರ್ ಇಶಾನ್ ಕಿಶನ್ ಅವರಿಗೆ ನೀಡಿದ ಸರಣಿ ಜೀವದಾನಗಳು ಪಂದ್ಯದ ಗತಿಯನ್ನೇ ಬದಲಿಸಿದವು. ಅಷ್ಟೇ ಅಲ್ಲದೆ, ಈ ಘಟನೆಯನ್ನು ಹಾಸ್ಯಮಯವಾಗಿ ಬಳಸಿಕೊಂಡ ಕಿಶನ್, ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ಪಂಜಾಬ್ ತಂಡದ ಕಾಲೆಳೆದಿದ್ದಾರೆ.

ಜೀವದಾನಗಳ ಲಾಭ ಪಡೆದ ಕಿಶನ್:

ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಇಶಾನ್ ಕಿಶನ್ ಈ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ 55 ರನ್ ಚಚ್ಚಿದರು. ಆದರೆ ಈ ಇನ್ನಿಂಗ್ಸ್‌ನಲ್ಲಿ ಕಿಶನ್ ಅವರಿಗೆ ಪಂಜಾಬ್ ಕಿಂಗ್ಸ್​ ಫೀಲ್ಡರ್‌ಗಳು ಬರೋಬ್ಬರಿ ಮೂರು ಬಾರಿ ಜೀವದಾನ ನೀಡಿದ್ದರು ಎಂಬುದು ವಿಶೇಷ.

  • ಇಶಾನ್ ಕಿಶನ್ ಕೇವಲ 9 ರನ್ ಗಳಿಸಿದ್ದಾಗ ಕೂಪರ್ ಕೊನೊಲಿ ಕ್ಯಾಚ್ ನೀಡಿದ್ದರು. ಆದರೆ ಈ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದ್ದರು.
  • ಇದಾದ ಬಳಿಕ 18 ರನ್ ಗಳಿಸಿದ್ದಾಗ ಲಾಕಿ ಫರ್ಗುಸನ್ ಕೂಡ ಇಶಾನ್ ಕಿಶನ್ ನೀಡಿದ ಸುಲಭ ಕ್ಯಾಚ್ ಕೈಬಿಟ್ಟರು.
  • ಇದರ ಬೆನ್ನಲ್ಲೇ ಇಶಾನ್ ಕಿಶನ್ ಅವರನ್ನು ಸ್ಟಂಪಿಂಗ್ ಅವಕಾಶವನ್ನೂ ವಿಕೆಟ್ ಕೀಪರ್ ಪ್ರಭ್‌ಸಿಮ್ರಾನ್ ಸಿಂಗ್ ಮಿಸ್ ಮಾಡಿಕೊಂಡರು.

ಹೀಗೆ ಮೂರು ಜೀವದಾನ ಪಡೆದ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಕೇವಲ 32 ಎಸೆತಗಳಲ್ಲಿ 55 ರನ್​​ ಚಚ್ಚಿ ಸನ್​ರೈಸರ್ಸ್ ಹೈದರಾಬಾದ್ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಹಿಡಿಯಲು ಸಾಧ್ಯವಾದರೆ ಹಿಡಿಯಿರಿ!

ಈ ಪಂದ್ಯ ಮುಗಿದ ನಂತರ ಇಶಾನ್ ಕಿಶನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪಂದ್ಯದ ಕೆಲವು ಫೋಟೋಗಳನ್ನು ಹಂಚಿಕೊಂಡು, “Catch me, if you can” (ಸಾಧ್ಯವಾದರೆ ನನ್ನನ್ನು ಹಿಡಿಯಿರಿ) ಎಂದು ಕ್ಯಾಪ್ಷನ್ ನೀಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು!

ಇದು ಪರೋಕ್ಷವಾಗಿ ಪಂಜಾಬ್ ಕಿಂಗ್ಸ್​ ತಂಡದವರು ಕೈಬಿಟ್ಟ ಕ್ಯಾಚ್‌ಗಳನ್ನು ಲೇವಡಿ ಮಾಡಿದಂತಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಚರ್ಚಿಸುತ್ತಿದ್ದಾರೆ. ಅಂದರೆ ಇಶಾನ್ ಕಿಶನ್ ಇಲ್ಲಿ ಕ್ಯಾಚ್ ಮಿ ಇಫ್ ಯು ಕ್ಯಾನ್ ಡೈಲಾಗ್​ ಬಳಸಿರುವುದು ಕ್ಯಾಚ್ ಬಿಟ್ಟಿರುವುದನ್ನು ಉಲ್ಲೇಖಿಸಿ ಎಂದು ಅಭಿಮಾನಿಗಳು ಪಂಜಾಬ್ ಕಿಂಗ್ಸ್ ತಂಡವನ್ನು ಟ್ರೋಲ್ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ, ಪಂಜಾಬ್ ಕಿಂಗ್ಸ್ ತಂಡದ ಈ ಫೀಲ್ಡಿಂಗ್ ಪ್ರಮಾದಗಳು ಟಿ20 ಕ್ರಿಕೆಟ್‌ನಲ್ಲಿ ‘ಕ್ಯಾಚಸ್ ವಿನ್ ಮ್ಯಾಚಸ್’  ಎಂಬ ಹಳೆಯ ಮಾತನ್ನು ಮತ್ತೊಮ್ಮೆ ಸಾಬೀತುಪಡಿಸಿವೆ. ಇಶಾನ್ ಕಿಶನ್ ಅವರಿಗೆ ಸಿಕ್ಕ ಜೀವದಾನಗಳು ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದವು. ಮುಂಬರುವ ಪಂದ್ಯಗಳಲ್ಲಿ ಪಂಜಾಬ್ ಈ ತಪ್ಪುಗಳಿಂದ ಪಾಠ ಕಲಿಯುತ್ತದೆಯೇ ಅಥವಾ ಇಂತಹ ಪ್ರಮಾದಗಳು ತಂಡದ ಪ್ಲೇ-ಆಫ್ ಹಾದಿಗೆ ಅಡ್ಡಿಯಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್
ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು