AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: ‘ನನ್ನನ್ನು ಯಾರೂ ಅರ್ಥ ಮಾಡಿಕೊಳ್ಳಲಿಲ್ಲ..’; ಕೊನೆಗೂ ಮೌನ ಮುರಿದ ಇಶಾನ್ ಕಿಶನ್

Ishan Kishan: ಬಿಸಿಸಿಐ ಕೇಂದ್ರ ಗುತ್ತಿಗೆಯಿಂದ ಹೊರಬಿದ್ದಿರುವ ಇಶಾನ್ ಕಿಶನ್, ಬಹಳ ದಿನಗಳ ನಂತರ ಇದೀಗ ತಾನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ್ಯಾಕೆ? ಆ ನಂತರ ತಾನು ಎದುರಿಸಿದ ಸವಾಲುಗಳೇನು ಎಂಬುದರ ಬಗ್ಗೆ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

Ishan Kishan: ‘ನನ್ನನ್ನು ಯಾರೂ ಅರ್ಥ ಮಾಡಿಕೊಳ್ಳಲಿಲ್ಲ..'; ಕೊನೆಗೂ ಮೌನ ಮುರಿದ ಇಶಾನ್ ಕಿಶನ್
ಇಶಾನ್ ಕಿಶನ್
ಪೃಥ್ವಿಶಂಕರ
|

Updated on:Jul 08, 2024 | 7:41 PM

Share

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಭಾರತಕ್ಕೆ ವಾಪಸ್ಸಾಗಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಸದ್ಯ ಟೀಂ ಇಂಡಿಯಾದಲ್ಲಿ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. 2023-24ರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾದ ತಂಡದಲ್ಲಿ ಕಾಣಿಸಿಕೊಂಡಿದ್ದ ಇಶಾನ್ ಕಿಶನ್ ಇದೀಗ ತಾನು ಮಾಡಿಕೊಂಡ ಎಡವಟ್ಟಿನಿಂದ ತಂಡದಲ್ಲಿ ಅವಕಾಶ ಸಿಗುವ ಅನುಮಾನದಲ್ಲೇ ದಿನಗಳನ್ನು ದೂಡುತ್ತಿದ್ದಾರೆ. ಒಂದು ಸಮಯದಲ್ಲಿ ಭಾರತ ತಂಡದ ಭವಿಷ್ಯದ ಸೂಪರ್ ಸ್ಟಾರ್ ಎನಿಸಿಕೊಂಡಿದ್ದ ಇಶಾನ್ ಕಿಶನ್, ಬಿಸಿಸಿಐ ನೀಡಿದ ಸೂಚನೆಗೂ ಬೆಲೆ ಕೂಡಲಿಲ್ಲ. ಇತ್ತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೀಡಿದ ಸಲಹೆಯನ್ನು ಪರಿಗಣಿಸಲಿಲ್ಲ. ಪರಿಣಾಮವಾಗಿ ಬಿಸಿಸಿಐ ಕೇಂದ್ರ ಗುತ್ತಿಗೆಯಿಂದ ಹೊರಬಿದ್ದಿರುವ ಇಶಾನ್ ಕಿಶನ್, ಬಹಳ ದಿನಗಳ ನಂತರ ಇದೀಗ ತಾನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದುರುಗಿದ್ಯಾಕೆ? ಆ ನಂತರ ತಾನು ಎದುರಿಸಿದ ಸವಾಲುಗಳೇನು ಎಂಬುದರ ಬಗ್ಗೆ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ದೇಶೀ ಕ್ರಿಕೆಟ್ ಆಡದ ಕಿಶನ್

ವಾಸ್ತವವಾಗಿ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಕಿಶನ್ ಇದ್ದಕ್ಕಿದ್ದಂತೆ ತಂಡವನ್ನು ತೊರೆದು ತವರಿಗೆ ವಾಪಸ್ಸಾಗಿದ್ದರು. ಆ ಬಳಿಕ ಈ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ನಂತರ ಕಿಶನ್ ಮತ್ತೆ ಟೀಂ ಇಂಡಿಯಾವನ್ನು ಸೇರಲು ಬಯಸಿದರೆ ಅವರು ದೇಶೀ ಕ್ರಿಕೆಟ್ ಆಡಬೇಕೆಂದು ಆಗಿನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದರು. ಹಾಗೆಯೇ ಬಿಸಿಸಿಐ ಕೂಡ ಕಿಶನ್, ಮಂಡಳಿಯ ನಿಯಮಗಳನ್ನು ಪಾಲಿಸಬೇಕು ಎಂಬ ಎಚ್ಚರಿಕೆ ನೀಡಿತ್ತು. ಆದರೆ ಕಿಶನ್ ದೇಶೀ ಕ್ರಿಕೆಟ್​ನೂ ಆಡಲಿಲ್ಲ. ಇತ್ತ ಬಿಸಿಸಿಐ ಸೂಚನೆಯನ್ನು ಪಾಲಿಸಲಿಲ್ಲ. ಪರಿಣಾಮವಾಗಿ ಅವರನ್ನು ಕೇಂದ್ರ ಗುತ್ತಿಗೆಯ ಜೊತೆಗೆ ಟೀಂ ಇಂಡಿಯಾದಿಂದಲೂ ಹೊರಗಿಡಲಾಯಿತು.

ಅದರಲ್ಲಿ ಯಾವುದೇ ಅರ್ಥವಿರಲಿಲ್ಲ

ಇದೀಗ ಅಂದಿನ ಘಟನೆಯ ಬಗ್ಗೆ ಮೌನಮುರಿದಿರುವ ಕಿಶನ್, ‘ಹೌದು ನಾನು ವಿರಾಮ ತೆಗೆದುಕೊಂಡೆ. ಅದು ಕ್ರಿಕೆಟ್​ನಲ್ಲಿ ಸರ್ವೆ ಸಾಮಾನ್ಯ ಎಂದು ನಾನು ಭಾವಿಸುತ್ತೇನೆ. ತಂಡದಲ್ಲಿ ಪುನರಾಗಮನ ಮಾಡಬೇಕಾದರೆ ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಬೇಕೆಂಬುದು ನಿಯಮ. ದೇಶೀಯ ಕ್ರಿಕೆಟ್ ಆಡುವುದು ನನಗೆ ತುಂಬಾ ವಿಭಿನ್ನವಾಗಿತ್ತು ಏಕೆಂದರೆ ಅದರಲ್ಲಿ ಯಾವುದೇ ಅರ್ಥವಿರಲಿಲ್ಲ. ಏಕೆಂದರೆ ನಾನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ನನಗೆ ಆಡಲು ಇಷ್ಟವಿರಲಿಲ್ಲ.

ನನಗೆ ಹುಷಾರಿರಲಿಲ್ಲ

ಇನ್ನು ಭಾರತ ತಂಡದಿಂದ ಕೈಬಿಡಲಾಗಿರುವ ಬಗ್ಗೆ ಮತ್ತು ಕೇಂದ್ರ ಒಪ್ಪಂದದಿಂದ ಹೊರಗಿಟ್ಟಿರುವ ಬಗ್ಗೆ ಮಾತನಾಡಿರುವ ಇಶಾನ್, ‘ಇದು ನನಗೆ ತುಂಬಾ ನಿರಾಶಾದಾಯಕವಾಗಿದೆ. ಎಲ್ಲವೂ ಚೆನ್ನಾಗಿದೆ ಎಂದು ನಾನು ಹೇಳಲು ಬಯಸುವುದಿಲ್ಲ. ಆ ಸಮಯ ನನಗೆ ಒಳ್ಳೆಯದಾಗಿರಲಿಲ್ಲ. ನನಗೇಕೆ ಹೀಗಾಯಿತು? ಏನಾಯಿತು ಎಂಬುದು ನನ್ನ ಮನಸ್ಸಿನಲ್ಲಿ ಸದಾ ಓಡುತ್ತಿತ್ತು. ಅದರಲ್ಲೂ ನಾನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವಾಗ ಇದೆಲ್ಲವೂ ಸಂಭವಿಸಿತು ಎಂಬುದು ಬೇಸರದ ಸಂಗತಿ. ಪ್ರಯಾಣದ ಸಮಯದಲ್ಲಿ ನನಗೆ ಆಯಾಸವಾಗುತ್ತಿತ್ತು. ನನಗೆ ಹುಷಾರಿರಲಿಲ್ಲ. ಅದಕ್ಕಾಗಿ ನಾನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಬ್ರೇಕ್ ಪಡೆದು ಭಾರತಕ್ಕೆ ವಾಪಸ್ಸಾದೆ. ಆದರೆ ನನ್ನ ಕುಟುಂಬ ಮತ್ತು ಆಪ್ತರನ್ನು ಹೊರತುಪಡಿಸಿ ಯಾರೂ ನನ್ನನ್ನು ಅರ್ಥಮಾಡಿಕೊಳ್ಳಲಿಲ್ಲ ಎಂದು ನನಗೆ ಬೇಸರವಾಗಿದೆ.

ಕುಟುಂಬ ನನಗೆ ಬೆಂಬಲವಾಗಿ ನಿಂತಿತು

ಆದರೆ ನಾನು ವಿರಾಮ ಪಡೆದುಕೊಂಡಾಗ ನನ್ನ ಕುಟುಂಬ ನನಗೆ ಬೆಂಬಲವಾಗಿ ನಿಂತಿತು. ಹೊರಗಿನವರು ಹೇಳುವ ವಿಷಯಗಳನ್ನು ಆಟಗಾರನಾಗಿ ನಿಭಾಯಿಸಬಲ್ಲೆ. ಆದರೆ ನಿಮ್ಮ ಪೋಷಕರು ಅದನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎಂಬುದು ನಿಮಗೆ ಒತ್ತು ನೀಡುತ್ತದೆ. ಆದರೆ ಆ ಸಮಯದಲ್ಲಿ ನನ್ನ ಕುಟುಂಬ ಸದಸ್ಯರು ನನಗೆ ತುಂಬಾ ಬೆಂಬಲ ನೀಡಿದರು. ಅವರು ನನ್ನನ್ನು ಮತ್ತು ನನ್ನ ನಿರ್ಧಾರಗಳನ್ನು ಬೆಂಬಲಿಸಿದರು. ನನಗೆ ಹುಷಾರಿಲ್ಲ ಎಂದು ಅವರಿಗೆ ಅರ್ಥವಾಯಿತು. ಅವರು ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದರು. ಹೀಗಾಗಿ ಅವರು ನನ್ನ ನಿರ್ಧಾರವನ್ನು ಎಂದಿಗೂ ಪ್ರಶ್ನಿಸಲಿಲ್ಲ ಮತ್ತು ನನ್ನನ್ನು ಒಂಟಿಯಾಗಿ ಬಿಡಲಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Mon, 8 July 24

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ