AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಮೂರನೇ ಟಿ20 ಬಳಿಕ ಡ್ರೆಸ್ಸಿಂಗ್ ರೂಮ್​ನಲ್ಲಿ ಶುಭ್​ಮನ್ ಗಿಲ್ ಕೆನ್ನೆಗೆ ಬಾರಿಸಿದ ಇಶಾನ್ ಕಿಶನ್: ವಿಡಿಯೋ

India vs New Zealand: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಬಳಿಕ ಶುಭ್​ಮನ್ ಗಿಲ್ ಡ್ರೆಸ್ಸಿಂಗ್ ರೂಮ್​ನಲ್ಲಿ ವಿಡಿಯೋವೊಂದನ್ನು ಮಾಡಿದ್ದಾರೆ. ಈ ವೀಡಿಯೊದಲ್ಲಿ ಇಶಾನ್ ಕಿಶನ್ ''ನೀವು ಚುರುಕಾಗಿರಬೇಕು ಮತ್ತು ಉತ್ಸಾಹದಿಂದ ಇರಬೇಕು'' ಎಂದು ಗಿಲ್​ಗೆ ಕೋಪದಿಂದ ಹೇಳುತ್ತಾರೆ.

Shubman Gill: ಮೂರನೇ ಟಿ20 ಬಳಿಕ ಡ್ರೆಸ್ಸಿಂಗ್ ರೂಮ್​ನಲ್ಲಿ ಶುಭ್​ಮನ್ ಗಿಲ್ ಕೆನ್ನೆಗೆ ಬಾರಿಸಿದ ಇಶಾನ್ ಕಿಶನ್: ವಿಡಿಯೋ
Shubman Gill and Ishan Kishan
Vinay Bhat
|

Updated on: Feb 03, 2023 | 11:01 AM

Share

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. 2-1 ಅಂಕಗಳ ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡ ಟೀಮ್ ಇಂಡಿಯಾ ವಿಶೇಷ ಸಾಧನೆ ಮಾಡಿತು. ಅಹ್ಮದಾಬಾದ್​ನಲ್ಲಿ ನಡೆದ ನಿರ್ಣಾಯಕ ಮೂರನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಡೆಯಿಂದ ರನ್ ಮಳೆಯೇ ಸುರಿಯಿತು. ಶುಭ್​ಮನ್ ಗಿಲ್ (Shubman Gill) ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ರಾಹುಲ್ ತ್ರಿಪಾಠಿ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಬ್ಯಾಟಿಂಗ್​ನಲ್ಲಿ ಉತ್ತಮ ಕೊಡುಗೆ ನೀಡಿದರು. ಪರಿಣಾಮ ಟೀಮ್ ಇಂಡಿಯಾ 168 ರನ್​ಗಳ ಅಂತರದಲ್ಲಿ ಅಮೋಘ ಗೆಲುವು ಕಂಡಿತು. ಪಂದ್ಯ ಮುಗಿದ ಬಳಿಕ ಭಾರತದ ಡ್ರೆಸ್ಸಿಂಗ್ ರೂಮ್​ನಲ್ಲಿ ವಿಶೇಷ ಘಟನೆಯೊಂದು ನಡೆದಿದೆ. ಶುಭ್​ಮನ್ ಗಿಲ್, ಇಶಾನ್ ಕಿಶನ್ (Ishan Kishan) ಹಾಗೂ ಯುಜ್ವೇಂದ್ರ ಚಹಲ್ ವಿಡಿಯೋವೊಂದು ಮಾಡಿದ್ದು, ಇದರಲ್ಲಿ ಕಿಶನ್ ಅವರು ಗಿಲ್​ಗೆ ಕಪಾಳಮೋಕ್ಷ ಮಾಡಿದ್ದಾರೆ.

ಗಿಲ್ ಮೂರನೇ ಟಿ20 ಪಂದ್ಯದಲ್ಲಿ ಎಲ್ಲರ ಗಮನ ಸೆಳೆದರು. ಮೂರೂ ಫಾರ್ಮೆಟ್​ನಲ್ಲಿ ಶತಕ ಸಿಡಿಸಿದ ಆಟಗಾರ ಎಂಬ ಸಾಧನೆ ಮಾಡಿದರು. ಕೇವಲ 63 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದ ಗಿಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಬಾಚಿಕೊಂಡರು. ಇದಾದ ಬಳಿಕ ಗಿಲ್ ಡ್ರೆಸ್ಸಿಂಗ್ ರೂಮ್​ನಲ್ಲಿ ವಿಡಿಯೋವೊಂದನ್ನು ಮಾಡಿದ್ದಾರೆ.

ಇದನ್ನೂ ಓದಿ
Image
India vs Australia: ಮೊದಲ ಟೆಸ್ಟ್​ಗೆ ಬೆಂಗಳೂರಿನ ಆಲೂರಿನಲ್ಲಿ ಆಸ್ಟ್ರೇಲಿಯಾ ಆಟಗಾರರ ಭರ್ಜರಿ ಅಭ್ಯಾಸ
Image
INDW vs SAW: ತ್ರಿಕೋನ ಸರಣಿ ಗೆದ್ದ ಆಫ್ರಿಕಾ: ಫೈನಲ್​ನಲ್ಲಿ ಭಾರತೀಯ ಮಹಿಳೆಯರ ಕಳಪೆ ಪ್ರದರ್ಶನ
Image
India vs Australia: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ: ತಂಡಗಳು ಹೀಗಿವೆ
Image
India vs Australia: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ “ವಿಶೇಷ ಅತಿಥಿ”

ಈ ವೀಡಿಯೊದಲ್ಲಿ ಕಿಶನ್ ಅವರು ”ನೀವು ಚುರುಕಾಗಿರಬೇಕು ಮತ್ತು ಉತ್ಸಾಹದಿಂದ ಇರಬೇಕು” ಎಂದು ಗಿಲ್​ಗೆ ಕೋಪದಿಂದ ಹೇಳುತ್ತಾರೆ. ಇದಕ್ಕೆ ಉತ್ತರಿಸಿದ ಗಿಲ್, ”ನಾನು ಚುರುಕಾಗಿದ್ದೇನೆ ಮತ್ತು ಉತ್ಸಾಹ ಕೂಡ ನನ್ನಲ್ಲಿದೆ” ಎನ್ನುತ್ತಾರೆ. ನಂತರ, ಕಿಶನ್ ಬೂಟು ಕಾಲಲ್ಲೇ ಗಿಲ್ ಮೇಲೆ ಜಿಗಿದು ಬೆಡ್ ಮೇಲೆ ನಿಂತು ಕುಣಿದಾಡುತ್ತಾರೆ. ಅಲ್ಲಿಂದ, ಗೊರಿಲ್ಲದ ಹಾಗೆ, ಬಾಯಿಯಿಂದ ಶಬ್ದ ಮಾಡುತ್ತಾ ಬೆಡ್ ಮೇಲಿಂದ ಕೆಳೆಗೆ ಇಳಿದು ಗಿಲ್‌ಗೆ ನಿನಗೆ ನೀನೆ ಕಪಾಳಕ್ಕೆ ಹೊಡೆದುಕೋ ಎಂದು ಹೇಳುತ್ತಾನೆ. ಆಗ ಗಿಲ್‌ ತನ್ನ ಕಪಾಳಕ್ಕೆ ಹೊಡೆದುಕೊಳ್ಳುತ್ತಾರೆ.

Ranji Trophy 2022-23: 4 ಅರ್ಧಶತಕ, 1 ಭರ್ಜರಿ ಶತಕ: ಬೃಹತ್ ಮೊತ್ತ ಪೇರಿಸಿದ ಕರ್ನಾಟಕ

ಇಲ್ಲಿಗೆ ನಿಲ್ಲದ ಕಿಶನ್ ನೇರವಾಗಿ ಶುಭ್‌ಮನ್‌ ಗಿಲ್​ಗೆ ಕಪಾಳಕ್ಕೆ ಹೊಡೆಯುತ್ತಾರೆ. ಯುಜ್ವೇಂದ್ರ ಚಹಲ್ ಕೂಡ ಈ ವಿಡಿಯೋದಲ್ಲಿ ಇದ್ದು ಇವರಿಬ್ಬರ ಜಗಳವನ್ನು ನೋಡುತ್ತಾ ಕುಳಿತಿದ್ದಾರೆ. ಅಷ್ಟಕ್ಕೂ ಇದು ನಿಜ ಘಟನೆಯಲ್ಲ. ಇನ್‌ಸ್ಟಾಗ್ರಾಮ್‌ ರೀಲ್ಸ್​ಗಾಗಿ ಈ ಮೂವರು ಆಟಗಾರರು ಮಾಡಿರುವ ಶಾರ್ಟ್ ವಿಡಿಯೋ ಇದು. ಈ ವಿಡಿಯೋವನ್ನು ಗಿಲ್ ತಮ್ಮ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಎಮ್​ಟಿವಿಯ ಪ್ರಸಿದ್ಧ ರಿಯಾಲಿಟಿ ಶೋ ಆಗಿರುವ ರೋಡಿಸ್​ನ ಒಂದು ತುಣುಕಾಗಿದೆ. ”ರೋಡಿಸ್ ರಿಲೋಡೆಡ್, ನಮ್ಮ ನೆಚ್ಚಿನ ಕ್ಷಣವನ್ನು ಮರುಸೃಷ್ಟಿಸಿದ್ದೇವೆ”, ಎಂದು ಗಿಲ್ ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಭಾರತದ ಮುಂದಿನ ಸರಣಿ ಆಸ್ಟ್ರೇಲಿಯಾ ವಿರುದ್ಧ:

ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿ ವಶಪಡಿಸಿಕೊಂಡ ಭಾರತ ಇದೀಗ ತವರಿನಲ್ಲಿ ಮತ್ತೊಂದು ಮಹತ್ವದ ಸರಣಿಗೆ ಸಜ್ಜಾಗುತ್ತಿದೆ. ಫೆಬ್ರವರಿ 9 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಶುರುವಾಗಲಿದೆ. ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಕಾಂಗರೂ ಪಡೆ ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲ್ಲಿರುವ ಸ್ಪಿನ್‌ ಪಿಚ್‌ಗಳಲ್ಲಿ ಕಸರತ್ತು ನಡೆಸುತ್ತಿದೆ. ಭಾರತ ತಂಡದ ಕೂಡ ಇನ್ನೆರಡು ದಿನಗಳಲ್ಲಿ ಪ್ರ್ಯಾಕ್ಟೀಸ್ ಶುರು ಮಾಡಲಿದೆ. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ನಾಗ್ಪುರಕ್ಕೆ ತಲುಪಿದ್ದಾರೆ.

ಫೆಬ್ರವರಿ 9 ರಿಂದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಚಾಲನೆ ಸಿಗಲಿದೆ. ಬಳಿಕ ಮಾರ್ಚ್ 17 ರಿಂದ ಏಕದಿನ ಸರಣಿ ನಡೆಯಲಿದೆ. ನಾಲ್ಕು ಪಂದ್ಯಗಳ ಟೆಸ್ಟ್​ ಸರಣಿಗೆ ನಾಗ್​ಪುರದ ವಿಧರ್ಭ ಕ್ರಿಕೆಟ್​ ಸ್ಟೇಡಿಯಂ, ದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂ, ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಹಾಗೂ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಏಕದಿನ ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ