AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾನ್ ಕಿಶನ್ ರಿಸ್ಕ್ ತಗೊಂಡ್ರು, ಆದ್ರೆ ನಾನ್ಯಾರು ಅಂತ ತೋರಿಸಿಕೊಟ್ಟೆ!

ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟರ್ ಎಂಬುದು ಈಗಾಗಲೇ ಸಾಬೀತಾಗಿರುವ ವಿಚಾರ. ಆದರೆ, ಇದೀಗ ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ಮೂಲಕ ತಾವೊಬ್ಬ ಚಾಣಾಕ್ಷ ಬೌಲರ್ ಎಂಬುದನ್ನೂ ಅವರು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ವೈಭವ್ ಟೀಮ್ ಇಂಡಿಯಾದ ನಂಬಿಕಸ್ಥ ಆಲ್‌ರೌಂಡರ್ ಆಗಿ ರೂಪುಗೊಂಡರೂ ಅಚ್ಚರಿಪಡಬೇಕಿಲ್ಲ.

ಇಶಾನ್ ಕಿಶನ್ ರಿಸ್ಕ್ ತಗೊಂಡ್ರು, ಆದ್ರೆ ನಾನ್ಯಾರು ಅಂತ ತೋರಿಸಿಕೊಟ್ಟೆ!
Vaibhav - Ishan
ಝಾಹಿರ್ ಯೂಸುಫ್
|

Updated on: Aug 29, 2026 | 2:26 PM

Share

ದುಲೀಪ್ ಟ್ರೋಫಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ಈಸ್ಟ್ ಝೋನ್ ತಂಡದ ಪರ ಆಡುತ್ತಿರುವ ಈ ಯುವ ಬ್ಯಾಟಿಂಗ್ ಸೆನ್ಸೇಷನ್, ನಾರ್ತ್ ಈಸ್ಟ್ ಝೋನ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲರಾದರೂ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದ್ದಾರೆ.

ನಾಯಕ ಇಶಾನ್ ಕಿಶನ್ ತಮಗೆ ಬೌಲಿಂಗ್ ನೀಡಿದ ಸಂದರ್ಭದ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ “ಇಶಾನ್ ಭೈಯ್ಯಾ ನನಗೆ ಬೌಲಿಂಗ್ ನೀಡುವಾಗ ಒಂದು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಭಾವಿಸಿದ್ದರು. ಆದರೆ ನಾನು ವಿಕೆಟ್ ಟೇಕರ್ ಎಂಬ ವಿಷಯ ಅವರಿಗೆ ತಿಳಿದಿರಲಿಲ್ಲ!” ಎಂದು ವೈಭವ್ ತಮಾಷೆಯಾಗಿ ನುಡಿದಿದ್ದಾರೆ.

ಪಂದ್ಯದಲ್ಲಿ ಏನಾಯಿತು?

ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 8 ರನ್‌ಗಳಿಗೆ ಔಟ್ ಆಗಿದ್ದ ವೈಭವ್ ಸೂರ್ಯವಂಶಿ ತೀವ್ರ ನಿರಾಸೆಯಲ್ಲಿದ್ದರು. ಆದರೆ ಈಸ್ಟ್ ಝೋನ್ ಎದುರಾಳಿ ನಾರ್ತ್ ಈಸ್ಟ್ ಝೋನ್ ತಂಡಕ್ಕೆ ಫಾಲೋ-ಆನ್ ನೀಡಿದಾಗ ಪಂದ್ಯಕ್ಕೆ ಹೊಸ ತಿರುವು ಸಿಕ್ಕಿತು. ವಿಕೆಟ್ ಕೈಚೆಲ್ಲಿ ಕಷ್ಟದಲ್ಲಿದ್ದ ತಂಡಕ್ಕೆ ಬ್ರೇಕ್‌ಥ್ರೂ ನೀಡಲು ನಾಯಕ ಇಶಾನ್ ಕಿಶನ್ ಅನಿರೀಕ್ಷಿತವಾಗಿ ಪಾರ್ಟ್-ಟೈಮ್ ಎಡಗೈ ಸ್ಪಿನ್ನರ್ ಆಗಿರುವ ವೈಭವ್ ಸೂರ್ಯವಂಶಿ ಕೈಗೆ ಚೆಂಡು ನೀಡಿದರು.

ನಾಯಕನ ನಂಬಿಕೆಯನ್ನು ಹುಸಿಗೊಳಿಸದ ವೈಭವ್, ತಮ್ಮ ಅದ್ಭುತ ಸ್ಪಿನ್ ಜಾದೂ ಮೂಲಕ ಒಂದೇ ಓವರ್‌ನಲ್ಲಿ 2 ಪ್ರಮುಖ ವಿಕೆಟ್‌ಗಳನ್ನು ಪಡೆದರು. ಈ ಪಂದ್ಯದಲ್ಲಿ ಮೂರು ಓವರ್​ಗಳನ್ನು ಎಸೆದ ವೈಭವ್ ಕೇವಲ 11 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು. ಈ ಬೌಲಿಂಗ್ ನೆರವಿನೊಂದಿಗೆ ಈಸ್ಟ್ ಝೋನ್ ತಂಡವು  ಇನ್ನಿಂಗ್ಸ್ ಮತ್ತು 210 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೇ ಪ್ರಸ್ತಾಪಿಸಿ ವೈಭವ್ ಸೂರ್ಯವಂಶಿ, ಇಶಾನ್ ಭೈಯ್ಯಾ ನನಗೆ ಬೌಲಿಂಗ್ ನೀಡುವಾಗ ಒಂದು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಭಾವಿಸಿದ್ದರು. ಆದರೆ ನಾನು ವಿಕೆಟ್ ಟೇಕರ್ ಎಂಬ ವಿಷಯ ಅವರಿಗೆ ತಿಳಿದಿರಲಿಲ್ಲ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಬದಲಾವಣೆ?

ಒಟ್ಟಾರೆಯಾಗಿ ಹೇಳುವುದಾದರೆ, 15ರ ಹರೆಯದ ವೈಭವ್ ಸೂರ್ಯವಂಶಿ ಅವರ ಈ ಆತ್ಮವಿಶ್ವಾಸದ ನುಡಿಗಳು ಮತ್ತು ಮೈದಾನದ ಪ್ರದರ್ಶನ, ಭಾರತೀಯ ಕ್ರಿಕೆಟ್‌ನ ಭವಿಷ್ಯದ ತಾರೆ ಯಾರು ಎಂಬುದನ್ನು ಸ್ಪಷ್ಟಪಡಿಸಿವೆ. ಬ್ಯಾಟಿಂಗ್ ವೈಫಲ್ಯದ ನಡುವೆಯೂ ಸಿಕ್ಕ ಸಣ್ಣ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡ ಈ ಯುವ ಆಟಗಾರ, ತಾನೊಬ್ಬ ಕೇವಲ ಬ್ಯಾಟರ್ ಮಾತ್ರವಲ್ಲ, ತಂಡಕ್ಕೆ ಬೇಕಾದಾಗ ವಿಕೆಟ್ ತರಬಲ್ಲ ‘ಟ್ರಂಪ್ ಕಾರ್ಡ್’ ಎಂಬುದನ್ನು ಸಾಬೀತುಪಡಿಸಿದ್ದಾರೆ.

Follow Us
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್