AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Isuru Udana Retirement: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಶ್ರೀಲಂಕಾ ತಂಡದ ಇಸುರು ಉದಾನ

Isuru Udana: ಒಟ್ಟು 21 ಏಕದಿನ ಪಂದ್ಯಗಳನ್ನು ಆಡಿರುವ ಇಸುರು ಉದಾನ ಒಂ ದು ಅರ್ಧಶತಕ ಸಹಿತ 237 ರನ್ ಗಳಿಸಿ 18 ವಿಕೆಟ್ ಕಿತ್ತಿದ್ದರು.

Isuru Udana Retirement: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಶ್ರೀಲಂಕಾ ತಂಡದ ಇಸುರು ಉದಾನ
Isuru Udana
TV9 Web
| Edited By: |

Updated on:Jul 31, 2021 | 12:32 PM

Share

ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಇಸುರು ಉದಾನ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಐಲ್ಯಾಂಡ್ ಕ್ರಿಕೆಟ್ ಮಾಹಿತಿ ನೀಡಿದೆ. ಉದಾನ ಅವರು 2012 ರಲ್ಲಿ ಭಾರತ ವಿರುದ್ಧ ಆಡುವ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಇದಕ್ಕೂ ಮುನ್ನ 2009 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ-20 ಪಂದ್ಯ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟಿದ್ದರು.

ಒಟ್ಟು 21 ಏಕದಿನ ಪಂದ್ಯಗಳನ್ನು ಆಡಿರುವ ಇಸುರು ಉದಾನ ಒಂದು ಅರ್ಧಶತಕ ಸಹಿತ 237 ರನ್ ಗಳಿಸಿ 18 ವಿಕೆಟ್ ಕಿತ್ತಿದ್ದರು. ಟಿ-20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 34 ಮ್ಯಾಚ್ ಆಡಿದ್ದು 256 ರನ್ ಬಾರಿಸಿ 27 ವಿಕೆಟ್ ಪಡೆದಿದ್ದಾರೆ. ಐಪಿಎಲ್​ನಲ್ಲೂ ಇವರು ಆರ್​ಸಿಬಿ ಪರ ಆಡಿದ್ದರು.

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಉದಾನ ಕಣಕ್ಕಿಳಿದಿದ್ದರು. ಐಪಿಎಲ್ 2020 ರಲ್ಲಿ ಆರ್​ಸಿಬಿ ಇವರನ್ನು 50 ಲಕ್ಷಕ್ಕೆ ಹರಾಜಿನಲ್ಲಿ ಕೊಂಡುಕೊಂಡಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ಆಡಿದ 10 ಪಂದ್ಯಗಳಲ್ಲಿ 9.75 ಎಕಾನಿಮಿ ರನ್ ನೀಡಿದ್ದರು. ಹೀಗಾಗಿ ಈ ವರ್ಷ ಉದಾನರನ್ನು ಕೈಬಿಟ್ಟಿತ್ತು.

Published On - 12:04 pm, Sat, 31 July 21

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ