AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..!

SA vs NZ: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 12.5 ಚೇಸ್ ಮಾಡುವ ಮೂಲಕ 9 ವಿಕೆಟ್​ಗಳ ಜಯ ಸಾಧಿಸಿದೆ.

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..!
Aiden Markram
ಝಾಹಿರ್ ಯೂಸುಫ್
|

Updated on: Mar 05, 2026 | 11:30 AM

Share

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ಪರ ಆರಂಭಿಕ ದಾಂಡಿಗರಾದ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಅಬ್ಬರಿಸಿದ್ದರು. ಅಷ್ಟೇ ಅಲ್ಲದೆ ಅಲೆನ್ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು 12.5 ಓವರ್​ಗಳಲ್ಲಿ 173 ರನ್​ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಸೌತ್ ಆಫ್ರಿಕಾ ತಂಡದ ಅಭಿಯಾನ ಅಂತ್ಯವಾಗಿದೆ. ಈ ಅಭಿಯಾನ ಅಂತ್ಯದ ಬಳಿಕ ಮಾತನಾಡಿದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ತಂಡದ ಪ್ರದರ್ಶನದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.

ನ್ಯೂಝಿಲೆಂಡ್ ತಂಡವು ಆರಂಭಿಕ ಪರಿಸ್ಥಿತಿಗಳಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದರು. ನಾವು ನಿರೀಕ್ಷಿಸಿದಂತೆ ಚೆಂಡು ಬರುತ್ತಿರಲಿಲ್ಲ. ಕೆಲ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರೂ ರನ್ ಬರುತ್ತಿರಲಿಲ್ಲ. ಇದಕ್ಕೆ ಕಾರಣ ನ್ಯೂಝಿಲೆಂಡ್ ತಂಡದ ಅತ್ಯುತ್ತಮ ದಾಳಿಯಾಗಿತ್ತು.

ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸ್ಪರ್ಧಾತ್ಮಕ ಗುರಿ ಪೇರಿಸಿದ್ದರು. ಹೀಗಾಗಿ ನಾವು ಫೀಲ್ಡಿಂಗ್ ಮೂಲಕ ಪಂದ್ಯದ ಫಲಿತಾಂಶ ಬದಲಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯೂಝಿಲೆಂಡ್​ನ ಆರಂಭಿಕ ದಾಂಡಿಗರು ಪವರ್​ಪ್ಲೇನಲ್ಲೇ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಇದನ್ನೂ ಓದಿ: ಸೆಮಿಫೈನಲ್​ಗೂ ಮುನ್ನ ಟೀಮ್ ಇಂಡಿಯಾದ ಅತೀ ದೊಡ್ಡ ‘ಚಿಂತೆ’ ಬಹಿರಂಗ

ನಿಜವಾಗಿಯೂ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಆಡಿದ ಆಟಕ್ಕೆ ಕ್ರೆಡಿಟ್ ನೀಡಲೇಬೇಕು. ಅವರು ಆರಂಭದಲ್ಲೇ ನಮ್ಮಿಂದ ಪಂದ್ಯವನ್ನು ಕಿತ್ತುಕೊಂಡಿದ್ದರು. ಅಲ್ಲದೆ ನಮಗೆ ಕಂಬ್ಯಾಕ್ ಮಾಡಲು ಯಾವುದೇ ಅವಕಾಶವನ್ನು ಸಹ ನೀಡಿಲ್ಲ. ಹೀಗಾಗಿ ಈ ಗೆಲುವಿನ ಶ್ರೇಯಸ್ಸು ಫಿನ್ ಹಾಗೂ ಟಿಮ್​ಗೆ ಸಲ್ಲುತ್ತದೆ ಎಂದು ಐಡೆನ್ ಮಾರ್ಕ್ರಾಮ್ ಹೇಳಿದ್ದಾರೆ.

ಇದೇ ವೇಳೆ ಪಿಚ್ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ನಮ್ಮ ಬ್ಯಾಟರ್​ಗಳು ಎಡವಿದ್ದಾರೆ ಎಂದು ಒಪ್ಪಿಕೊಂಡ ಮಾರ್ಕ್ರಾಮ್, ನಾವು ನಿಜವಾಗಿಯೂ ಈ ಪಿಚ್​ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಬಹುದು ನಿರೀಕ್ಷಿಸಿದ್ದೆವು. ಅಲ್ಲದೆ ಪಿಚ್​ ಕಣ್ಣಿಗೆ ಚೆನ್ನಾಗಿ ಕಾಣುತ್ತಿತ್ತು.  ಆದರೆ ಬ್ಯಾಟಿಂಗ್​ಗೆ ಹೋದಾಗ ಪಿಚ್ ವಿಭಿನ್ನವಾಗಿತ್ತು. ಇದನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾವು ಎಡವಿದ್ದೇವೆ.

ಇದಾಗ್ಯೂ ಇದೇ ಪಿಚ್​ನಲ್ಲಿ ನ್ಯೂಝಿಲೆಂಡ್ ಆರಂಭಿಕರು ಅತ್ಯುತ್ತಮವಾಗಿ ಬ್ಯಾಟ್ ಬೀಸಿದ್ದರು. ಅವರ ಭರ್ಜರಿ ಪ್ರದರ್ಶನದಿಂದಾಗಿ ಸೋಲಾಗಿದೆ. ಈ ಸೋಲು ನಿಜಕ್ಕೂ ನನ್ನಲ್ಲಿ ನಿರಾಶೆ ಮೂಡಿಸಿದೆ. ಅದರಲ್ಲೂ ನಿರ್ಣಾಯಕ ಮ್ಯಾಚ್​ನಲ್ಲಿ ಸೋತಿರುವುದು ನನಗೆ ಮುಖಕ್ಕೆ ಹೊಡೆದಂಗೆ ಫೀಲ್ ಆಯ್ತು ಎಂದು ಐಡೆನ್ ಮಾರ್ಕ್ರಾಮ್ ಹೇಳಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ