AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ
Kohli-afridi
TV9 Web
| Edited By: |

Updated on: Nov 01, 2021 | 4:09 PM

Share

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್​ ರನ್​ ರೇಟ್ ಆಧಾರದಲ್ಲಿ ಟೀಮ್​ ಇಂಡಿಯಾಗೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್​ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.

ಭಾರತಕ್ಕೆ ಇನ್ನೂ ಸೆಮೀಸ್​ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್​ ರನ್​ ರೇಟ್​ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರಲಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(It will be a miracle to see India qualify: Afridi)

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ